ಕುಕ್ಕೆಯಲ್ಲಿ ಸಂಭ್ರಮೋಲ್ಲಾಸ: ನೂತನ ಬ್ರಹ್ಮರಥ ಇಂದು ಸಮರ್ಪಣೆ

2.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ; ಕಣ್ಮನ ಸೆಳೆಯುವ ಅತ್ಯಾಕರ್ಷಕ ಪೌರಾಣಿಕ ಕಲಾಕೃತಿಗಳು

Team Udayavani, Dec 2, 2019, 5:00 AM IST

KUKKE

ಸುಬ್ರಹ್ಮಣ್ಯ : ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎನ್‌. ಮುತ್ತಪ್ಪ ರೈ ದೇರ್ಲ ಹಾಗೂ ಉದ್ಯಮಿ ಅಜಿತ್‌ ಶೆಟ್ಟಿ 2.5 ಕೋಟಿ ರೂ. ವೆಚ್ಚದಲ್ಲಿ ಕುಕ್ಕೆ ದೇವಸ್ಥಾನಕ್ಕೆ ಕೊಡಮಾಡಿದ ಬ್ರಹ್ಮರಥವನ್ನು ಚಂಪಾಷಷ್ಠಿ ದಿನ ಸೋಮವಾರ ಶುಭ ಮುಹೂರ್ತದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಮರ್ಪಿಸಲಿದ್ದಾರೆ.

ಕೊಟೇಶ್ವರದಲ್ಲಿ ಹಳೆ ರಥದ ರೂಪವನ್ನು ಹೋಲುವ ಅದ್ಭುತ ಕೆತ್ತನೆಗಳಿಂದ ಕೂಡಿದ ಬ್ರಹ್ಮರಥವು ನಿರ್ಮಾಣಗೊಂಡಿತ್ತು. ರಥದ ಮೆರವಣಿಗೆ ಕೋಟೇಶ್ವರದಿಂದ ಹೊರಟು ಸಾಲಿಗ್ರಾಮ, ಬ್ರಹ್ಮಾವರ, ಉಡುಪಿ ಮಾರ್ಗವಾಗಿ ಕಾಪು, ಪಡುಬಿದ್ರಿ, ಬಪ್ಪನಾಡು, ಮೂಲ್ಕಿ, ಸುರತ್ಕಲ್‌ ಮೂಲಕ ಸಾಗಿ ಕದ್ರಿ, ಬಿ.ಸಿ.ರೋಡ್‌, ಉಪ್ಪಿನಂಗಡಿ, ಅಲಂಕಾರು, ಕಡಬ, ಮರ್ದಾಳ, ಬಿಳಿನೆಲೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ಹಿಂದೆ ತಲುಪಿತ್ತು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೆರವಣಿಗೆಗೆ ಚಾಲನೆ ನೀಡಿದ್ದರು. ಅದ್ದೂರಿ ಮೆರವಣಿಗೆ ಮೂಲಕ ರಥಕ್ಕೆ ಮಾರ್ಗದುದ್ದಕ್ಕೂ ಸ್ವಾಗತ ಕೋರಲಾಗಿತ್ತು. ಕುಕ್ಕೆ ಪುರಪ್ರವೇಶಿಸಿದ ಬ್ರಹ್ಮರಥಕ್ಕೆ ಕಾರ್ತಿಕ ಬಹುಳ ಪೌರ್ಣಮಿ ಅನಂತರದಲ್ಲಿ ವೈದಿಕ ವಿಧಾನಗಳನ್ನು ದೇವಸ್ಥಾನದ ಅರ್ಚಕರು ನಡೆಸಿದ್ದರು.

ಕಾರ್ಯಕರ್ತರ ಆಗಮನ
ಕುಕ್ಕೆಯ ಬ್ರಹ್ಮರಥ ಬಹಳ ಹಳೆಯದಾಗಿದ್ದು, ಜೀರ್ಣಾವಸ್ಥೆಗೆ ತಲುಪಿತ್ತು. ಹೀಗಾಗಿ ದೇವಸ್ಥಾನ ಸಮಿತಿ ನೂತನ ರಥ ರಚನೆ ಮಾಡಬೇಕೆಂದು ತೀರ್ಮಾನಿಸಿತ್ತು. ಅದರಂತೆ ಉದ್ಯಮಿಗಳಿಬ್ಬರು ಕಾಣಿಕೆ ರೂಪದಲ್ಲಿ ರಥವನ್ನು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಮರ್ಪಿಸುತ್ತಿದ್ದಾರೆ. ರಥ ಸಮರ್ಪಣೆ ವೇಳೆ ದಾನಿಗಳಾದ ಮುತ್ತಪ್ಪ ರೈ ಹಾಗೂ ಅಜಿತ್‌ ಕುಟುಂಬಸ್ಥರು, ಜಯಕರ್ನಾಟಕದ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿರುವರು. ಸಂಘಟನೆಯ ನೂರೈವತ್ತಕ್ಕೂ ಅಧಿಕ ಮಂದಿ ಕುಕ್ಕೆಗೆ ಆಗಮಿಸಿ ತಂಗಿದ್ದು ಸೋಮವಾರ ನಡೆಯುವ ರಥ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಅಭೂತಪೂರ್ವ ಕೆತ್ತನೆ
2018ರ ಮಾ. 15ರಂದು ಬ್ರಹ್ಮರಥದ ಕೆತ್ತನೆ ಕೆಲಸ ಆರಂಭಿಸಲಾಗಿತ್ತು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಕೋಟೇಶ್ವರ ಲಕ್ಷಿ¾àನಾರಾಯಣ ಆಚಾರ್ಯ ಅವರು ರಥವನ್ನು ನಿರ್ಮಿಸಿದ್ದಾರೆ. ಮಹಾಭಾರತ ಹಾಗೂ ರಾಮಾಯಣದಂತಹ ಅಭೂತ ಪೂರ್ವ ಕಲಾಕೃತಿಯನ್ನು ರಥದಲ್ಲಿ ಕೆತ್ತಲಾಗಿದೆ. ಉದ್ಯಮಿ ಮುತ್ತಪ್ಪ ರೈ ಮತ್ತು ಉದ್ಯಮಿ ಅಜಿತ್‌ ಶೆಟ್ಟಿಯವರು ತಾವು ರಥ ನಿರ್ಮಾಣ ಮಾಡಿಕೊಡುವುದಾಗಿ ನೀಡಿದ್ದ ಭರವಸೆಯಂತೆ ಉಡುಪಿಯ ಕೋಟೇಶ್ವರದ ಶಿಲ್ಪಗುರು, ಲಕ್ಷಿ ¾àನಾರಾಯಣ ಆಚಾರ್ಯ ನೇತೃತ್ವದ ತಂಡ ಒಂದೂವರೆ ವರ್ಷದಲ್ಲಿ ಕೆತ್ತನೆ ಕೆಲಸ ಮಾಡಿ ರಥ ನಿರ್ಮಾಣ ಮಾಡಿಕೊಟ್ಟಿದ್ದಾರೆ.

ಪಂಚಮಿ ದಿನ ಮಳೆಯ ಸಿಂಚನ
ಪಂಚಮಿ ರಥೋತ್ಸವ ನಡೆಯುವ ರವಿವಾರ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮಧ್ಯಾಹ್ನದ ವೇಳೆ ಮಳೆಯ ಸಿಂಚನವಾಗಿದೆ. ಇದರಿಂದ ಜಾತ್ರೆ ಸಂತೆ ವ್ಯಾಪಾರಸ್ಥರು ತುಸು ದಂಗಾದರು. ಬೀದಿ ಮಡೆಸ್ನಾನ ನಡೆಸುವ ಭಕ್ತರಿಗೆ ಬಿಸಿಲಿನಿಂದ ರಕ್ಷಣೆ ಸಿಕ್ಕಿತ್ತಾದರೂ ದಿಢೀರನೆ ಸುರಿದ ಮಳೆಯಿಂದ ಜನಜೀವನ, ಜಾತ್ರೆ ಸಿದ್ಧತೆಗಳಿಗೆ ತುಸು ಅಡ್ಡಿಯುಂಟಾಯಿತು.

ಭಕ್ತರಿಂದ 50 ಸಾವಿರ ಮಂದಿಗೆ ಅನ್ನದಾನ
ಕುಕ್ಕೆ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಅನ್ನ ಪ್ರಸಾದ ಪ್ರಧಾನವಾಗಿದ್ದು ಚಂಪಾಷಷ್ಠಿ ನಡೆಯುವ ಸೋಮವಾರ ಬೆಂಗಳೂರಿನ ಉದ್ಯಮಿ ವೆಂಕಟೇಶ್‌ 50 ಸಾವಿರ ಮಂದಿಗೆ 10 ಲಕ್ಷ ರೂ. ವೆಚ್ಚದಲ್ಲಿ ಅನ್ನಪ್ರಸಾದ ವಿತರಣೆ ಮಾಡಲಿರುವರು. ದೇವಸ್ಥಾನದಿಂದ ಚೌತಿ, ಪಂಚಮಿ, ಷಷ್ಠಿ ಈ ಮೂರು ದಿನಗಳು ಎರಡು ಹೊತ್ತು ಅನ್ನಭೋಜನ ವ್ಯವಸ್ಥೆ ಇರುತ್ತದೆ. ಪಂಚಮಿ ದಿನ ಕೂಡ ದೇವಸ್ಥಾನದಲ್ಲಿ ಎಡೆಸ್ನಾನ ನೆರವೇರಿತು. ಅಧಿಕ ಪ್ರಮಾಣದ ಭಕ್ತರು ಎಡೆಸ್ನಾನ ನೆರವೇರಿಸಿದರು.

ಅನ್ನಪ್ರಭುವಿಗೆ ಪಲ್ಲ ಪೂಜೆ
ಸ್ಕಂದ ಪಂಚಮಿಯ ದಿನ ರವಿವಾರ ಶ್ರೀ ದೇಗುಲದಲ್ಲಿ ತೈಲಾಭ್ಯಂಜನ ನೆರವೇರಿತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಮತ್ತು ಸಹಾಯಕ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಪೂರ್ವಶಿಷ್ಟ ಸಂಪ್ರದಾಯದ ಪ್ರಕಾರ ದೇವಸ್ಥಾನದ ಹೆಬ್ಟಾರ್‌ ಪ್ರಸನ್ನ ತೈಲವನ್ನು ಹಚ್ಚಿದರು. ಈ ಮೂಲಕ ತೈಲಾಭ್ಯಂಜನ ನೆರವೇರಿತು. ಮಧ್ಯಾಹ್ನದ ಸುಮುಹೂರ್ತದಲ್ಲಿ ದೇಗುಲದ ಒಳಾಂಗಣದಲ್ಲಿ ಮತ್ತು ಅಂಗಡಿ ಗುಡ್ಡೆಯ ಅನ್ನಛತ್ರದಲ್ಲಿ ಅನ್ನ ಪ್ರಸಾದಕ್ಕೆ ಪಲ್ಲಪೂಜೆ ನೆರವೇರಿತು.

ದೇವಸ್ಥಾನದ ಪ್ರಧಾನ ಅರ್ಚಕರು ಒಳಾಂಗಣದಲ್ಲಿ ಪಲ್ಲ ಪೂಜೆ ನೆರವೇರಿಸಿದರು. ಬಳಿಕ ಅಕ್ಷಯ ಪಾತ್ರೆಗೆ ಪೂಜೆ ಮಾಡಿದರು. ಅಂಗಡಿ ಗುಡ್ಡೆಯ ಅನ್ನಛತ್ರದಲ್ಲಿ ಅನ್ನಬ್ರಹ್ಮನಿಗೆ ಪೂಜೆ ಸಲ್ಲಿಸಿದರು. ಭಕ್ತರು ಪಂಚಮಿ ದಿನ ಮಧ್ಯಾಹ್ನ ಅಂಗಡಿಗುಡ್ಡೆ ಹಾಗೂ ಷಣ್ಮುಖ ಭೋಜನ ಶಾಲೆಯಲ್ಲಿ ಅನ್ನಪ್ರಸಾದ ಸ್ವೀಕರಿಸಿದರು.

ಇಲಾಖೆಯ ಶೈವಾಗಮ ಪಂಡಿತರು, ಕುಕ್ಕೆ ಸಿಇಒ ಡಾ| ಯತೀಶ್‌ ಉಳ್ಳಾಲ್‌, ಸಹಾಯಕ ಇಒ ಚಂದ್ರ ಶೇಖರ ಪೇರಾಲ್‌ ಉಪಸ್ಥಿತರಿದ್ದರು.

ಇಂದು ಬ್ರಹ್ಮರಥೋತ್ಸವ
ಸೋಮವಾರ ನೂತನ ಬ್ರಹ್ಮರಥದ ಸಮರ್ಪಣೆ ಬಳಿಕ ಶ್ರೀ ಸುಬ್ರಹ್ಮಣ್ಯ ದೇವರು ನೂತನ ರಥದಲ್ಲಿ ವಿರಾಜಮಾನರಾಗುವರು. ಬ್ರಹ್ಮರಥಾರೋಹಣದ ಬಳಿಕ ಐತಿಹಾಸಿಕ ಮಹಾರಥೋತ್ಸವವು ಬೆಳಗ್ಗೆ 8.14ರ ಧನುರ್‌ ಲಗ್ನದ ಶುಭ ಮುಹೂರ್ತದಲ್ಲಿ ನೆರವೇರಲಿದೆ. ಈ ಕ್ಷಣಕ್ಕೆ ಲಕ್ಷಾಂತರ ಮಂದಿ ಸಾಕ್ಷಿಗಳಾಗಲಿರುವರು. ಸುಮಾರು 400 ವರ್ಷಗಳ ಬಳಿಕ ಬ್ರಹ್ಮರಥವು ಈ ಬಾರಿ ಸಮ ರ್ಪಣೆಯಾಗುತ್ತಿರುವುದು ವಿಶೇಷ ವಾಗಿದ್ದು, ರಥೋತ್ಸವದ ವೇಳೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.