ಇಂದಿನಿಂದ ಚಂಪಾಷಷ್ಠಿ ಮಹೋತ್ಸವ
ಕುಕ್ಕೆ ಸುಬ್ರಹ್ಮಣ್ಯ: ಮೂಲ ಮೃತ್ತಿಕಾ ಪ್ರಸಾದ ವಿತರಣೆ
Team Udayavani, Dec 1, 2021, 5:29 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆ ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಮಂಗಳವಾರ ಕ್ಷೇತ್ರದ ಮೂಲ ಮೃತ್ತಿಕಾ ಪ್ರಸಾದ ವಿತರಣೆ ನಡೆಯಿತು.
ಕ್ಷೇತ್ರದ ಪ್ರಧಾನ ಅರ್ಚಕ ವೇ| ಮೂ| ಸೀತಾರಾಮ ಎಡಪಡಿತ್ತಾಯ ಅವರು ವಿವಿಧ ವೈಧಿಕ ವಿದಿವಿಧಾನಗಳೊಂದಿಗೆ ಮೂಲ ಪ್ರಸಾದ ತೆಗೆದರು. ಆ ಬಳಿಕ ಪುರೋಹಿತರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು,ಅಧಿಕಾರಿಗಳು, ಸಿಬಂದಿಗೆ ನೀಡಲಾಯಿತು. ಭಕ್ತರು ಮೃತ್ತಿಕಾ ಪ್ರಸಾದ ಸ್ವೀಕರಿಸಿದರು. ಅಪರಾಹ್ನ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು.
ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ಪಿಜಿಎಸ್ಎನ್ ಪ್ರಸಾದ್, ಲೋಕೇಶ್ ಬಾಳುಗೋಡು, ವನಜಾ ವಿ.ಭಟ್, ಶೋಭಾ ಗಿರಿಧರ್, ಇಒ ಡಾ| ನಿಂಗಯ್ಯ, ಎಇಒ ಪುಷ್ಪಲತಾ ಮುಂತಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!
ಇಂದು ಕೊಪ್ಪರಿಗೆ ಏರುವುದು
ಕ್ಷೇತ್ರದಲ್ಲಿ ಡಿ.1ರಿಂದ 15ರ ವರೆಗೆ ಚಂಪಾಷಷ್ಠಿ ಮಹೋತ್ಸವ ನಡೆಯಲಿದೆ. ಡಿ.1ರಂದು ಕೊಪ್ಪರಿಗೆ ಏರುವ ಮೂಲಕ ಜಾತ್ರಾ ಮಹೋ ತ್ಸವ ಆರಂಭವಾಗಲಿದೆ. ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ನೆರವೇರಲಿದೆ.
ಸರ್ಪ ಸಂಸ್ಕಾರ ಇಲ್ಲ
ಚಂಪಾಷಷ್ಠಿ ಪ್ರಯುಕ್ತ ಡಿ.1ರಿಂದ ಡಿ. 15ರಂದು ಕೊಪ್ಪರಿಗೆ ಇಳಿಯುವ ತನಕ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಡಿ.16ರಿಂದ ಸರ್ಪ ಸಂಸ್ಕಾರ ಸೇವೆ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ