ಕುಕ್ಕೆಯಲ್ಲಿ ಸ್ವದೇಶಿ ದರ್ಶನ್‌ ಜಾರಿಗೆ ಯತ್ನ : ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ


Team Udayavani, Dec 28, 2022, 6:35 AM IST

ಕುಕ್ಕೆಯಲ್ಲಿ ಸ್ವದೇಶಿ ದರ್ಶನ್‌ ಜಾರಿಗೆ ಯತ್ನ : ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಸುಬ್ರಹ್ಮಣ್ಯ: ದೇಶದ ಪ್ರಸಿದ್ಧ ಶ್ರದ್ಧಾಕೇಂದ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೇಂದ್ರ ಸರಕಾರದ ಸ್ವದೇಶಿ ದರ್ಶನ್‌ ಯೋಜನೆಯನ್ನು ಜಾರಿಗೆ ತರಲು ಉತ್ಸುಕಳಾಗಿದ್ದೇನೆ. ದೇವಸ್ಥಾನದಿಂದ ಈ ಬಗ್ಗೆ ರಾಜ್ಯ ಸರಕಾರದ ಮೂಲಕ ಕೇಂದ್ರಕ್ಕೆ ಪ್ರಸ್ತಾವನೆ ಕಳಿಹಿಸಿದರೆ ಜಾರಿ ಖಚಿತ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಸ್ಮತಿ ಇರಾನಿ ಹೇಳಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ ಸ್ಮತಿ ಅವರು ಕಿರುಷಷ್ಠಿ ಮಹೋತ್ಸವದ ಕಾರ್ತಿಕ ವೇದಿಕೆಯಲ್ಲಿ “ಆಧುನಿಕ ಭಾರತ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ವಿಷಯವಾಗಿ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಪ್ರಾಂಜಲಿ ಅವರ ಪ್ರಶ್ನೆಗೆ ಈ ಉತ್ತರ ನೀಡಿದರು.

ಒಬ್ಬ ನಟಿ ಮತ್ತು ರಾಜಕಾರಣಿಯಾಗಿ ತಮ್ಮ ಕರ್ತವ್ಯವನ್ನು ಹೇಗೆ ನಿಭಾಯಿಸಿದ್ದೀರಿ? ಎಂಬ ಪ್ರಶ್ನೆಗೆ, ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತೆ. ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ನ ಸದಸ್ಯೆಯಾಗಿಯೂ ಸೇವೆ ಸಲ್ಲಿಸಿದ್ದೇನೆ. ಇವು ಜೀವನ ಮೌಲ್ಯ, ದೇಶ ಸೇವೆಗೆ ಪ್ರೇರಣೆ ನೀಡಿವೆ. ರಾಜಕಾರಣಿಯಾಗಿ ದೇಶದ ಜನತೆಯ ಸೇವೆ ಮಾಡುತ್ತಿದ್ದೇನೆ. ಆರಂಭದಲ್ಲಿ ಪತ್ರಕರ್ತೆಯಾಗಿದ್ದೆ. ಆರಂಭಿಕ ವೇತನ ಕೇವಲ 200 ರೂ. ಇತ್ತು. 2001-2002ರಲ್ಲಿ ನನ್ನ 24ರ ಹರೆಯದಲ್ಲಿ ಡಬ್ಲೂಎಚ್‌ಒನ ಒಆರ್‌ಎಸ್‌ ಕಾರ್ಯಕ್ರಮದ ಭಾರತದ ರಾಯಭಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೆ. 2003ರಲ್ಲಿ ಬಿಜೆಪಿಗೆ ಬಂದೆ ಎಂದರು.

ರಾ. ಶಿಕ್ಷಣ ನೀತಿ ಜಾರಿ: ಕರ್ನಾಟಕ ಪ್ರಥಮ ದೇಶದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಿದ್ದೇವೆ. ಮಾತೃ ಭಾಷೆಯಲ್ಲಿ ಶಿಕ್ಷಣ ಪಡೆಯಲು ಇದು ಸಹಕಾರಿ. ಮೆಡಿಕಲ್‌ ಮತ್ತು ಎಂಜಿನಿಯರಿಂಗ್‌ ಶಿಕ್ಷಣವನ್ನೂ ಮಾತೃ ಭಾಷೆಯಲ್ಲಿ ಕಲಿಯಬಹುದಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡ ಪ್ರಥಮ ರಾಜ್ಯ ಕರ್ನಾಟಕ ಎಂದರು.

ಮಹಿಳಾ ಸಶಕ್ತೀಕರಣ
ಮುಂದಿನ ವರ್ಷ ಭಾರತದಲ್ಲಿ ಜಿ20 ಸಮ್ಮೇಳನ ನಡೆಯಲಿದೆ. ಇದರಲ್ಲಿ ಮಹಿಳಾ ಸಶಕ್ತೀಕರಣ ಮತ್ತು ಸ್ವಾತಂತ್ರ್ಯದ ಬಗ್ಗೆ ಭಾರತ ತೆಗೆದುಕೊಳ್ಳುವ ನಿಲುವು ಏನು? ಎಂಬುದಕ್ಕೆ ಮಹಿಳಾ ಸಶಕ್ತೀಕರಣ ಮತ್ತು ಸ್ವಾತಂತ್ರ್ಯಕ್ಕೆ ಎಲ್ಲ ರಾಷ್ಟ್ರಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂಬ ಭಾರತದ ನಿಲುವನ್ನು ಪ್ರಸ್ತಾವಿಸಲಿದೆ. ಮೊಬೈಲ್‌ ಫೋನ್‌ ಬಳಕೆ ಕಡಿಮೆ ಮಾಡಿದಾಗ ಬದುಕಿನ ಒತ್ತಡ ಕಡಿಮೆ ಮಾಡಬಹುದು. ಜನಔಷಧ ಕೇಂದ್ರಗಳಲ್ಲಿ ಕೇವಲ ಒಂದು ರೂ.ಗೆ ನ್ಯಾಪಿRನ್‌ಗಳನ್ನು ಕೊಡಲಾಗುತ್ತಿದ್ದು ಹೆಣ್ಣು ಮಕ್ಕಳು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದ ಅವರು, ಅಗ್ನಿಪಥ್‌ ಯೋಜನೆ ಯುವ ಜನಾಂಗಕ್ಕೆ ದೇಶ ಸೇವೆಗೆ ಪ್ರೇರಣೆ ನೀಡುತ್ತದೆ ಎಂದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ರಾಮ್‌ ಸುಳ್ಳಿ, ಕಾ.ನಿ. ಅಧಿಕಾರಿ ಡಾ| ನಿಂಗಯ್ಯ, ಕೆಎಸ್‌ಎಸ್‌ ಕಾಲೇಜಿನ ಪ್ರಾಂಶುಪಾಲ ದಿನೇಶ್‌ ಪಿ.ಟಿ., ಎಸ್‌ಎಸ್‌ಪಿಯು ಪ್ರಾಂಶುಪಾಲ ಸೋಮಶೇಖರ್‌ ನಾಯಕ್‌ ವೇದಿಕೆಯಲ್ಲಿದ್ದರು. ಪ್ರಾಧ್ಯಾಪಕ ಡಾ| ಗೋವಿಂದ ಎನ್‌.ಎಸ್‌. ಸ್ವಾಗತಿಸಿ, ವಿದ್ಯಾರ್ಥಿನಿ ಆಶಿತಾ ವಂದಿಸಿದರು. ಶ್ರುತಿ ನಿರ್ವಹಿಸಿದರು.

ಸಮಸ್ಯೆಯಾದರೆ ತತ್‌ಕ್ಷಣ ಕರೆ ಮಾಡಿ
ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಮಕ್ಕಳಿಗೆ ಏನಾದರೂ ಸಮಸ್ಯೆಯಾದರೆ ತಮ್ಮನ್ನು ಸಂಪರ್ಕಿಸುವ ಅವಕಾಶ ಇದೆಯೇ? ಎಂಬ ಕನ್ನಿಕಾ ಅವರ ಪ್ರಶ್ನೆಗೆ, “ನನ್ನ ಮೈಲ್‌ ಐಡಿ ಮತ್ತು ದೂರವಾಣಿ ಸಂಖ್ಯೆ ನನ್ನ ವೆಬ್‌ ಸೈಟ್‌ನಲ್ಲಿದೆ. ಅದಕ್ಕೆ ಕರೆ ಮಾಡಿದರೆ ತತ್‌ಕ್ಷಣ ಸ್ಪಂದಿಸುತ್ತೇನೆ. ಉಚಿತ ಸಹಾಯವಾಣಿ 1098ಕ್ಕೂ ಕರೆ ಮಾಡಬಹುದು. ಪ್ರತೀ ದಿನ ಸುಮಾರು 70 ಲಕ್ಷ ಕರೆಗಳು ಇದಕ್ಕೆ ಬರುತ್ತವೆ. ಎಲ್ಲದಕ್ಕೂ ಸಮರ್ಪಕವಾಗಿ ಸ್ಪಂದಿಸಲಾಗುತ್ತದೆ’ ಎಂದರು.

ಒತ್ತಡ ಶಮನಕ್ಕೆ ಯೋಗ ಮಾಡಿ
ಮನಸ್ಸಿನ ಒತ್ತಡ ಹಾಗೂ ಕೋಪವನ್ನು ಯಾವ ರೀತಿ ಕಮ್ಮಿ ಮಾಡುವುದು ಎಂಬ ಪ್ರಶ್ನೆಗೆ ಬೆಳಗ್ಗೆ ಎದ್ದು ಯೋಗ ಮಾಡಿ ಎಂದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.