ಕುಕ್ಕೆ: ಸಂಭ್ರಮದ ಚಂಪಾಷಷ್ಠಿ ಮಹಾರಥೋತ್ಸವ ಸಂಪನ್ನ


Team Udayavani, Dec 2, 2019, 7:30 PM IST

subrahmanya

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ 8.14ರ ಧನುರ್‌ ಲಗ್ನದ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಚಂಪಾಷ‌ಷ್ಠಿ ಬ್ರಹ್ಮರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನೆರವೇರಿತು.ಲಕ್ಷಾಂತರ ಭಕ್ತ ಜನ ಸಾಗರದ ನಡುವೆ ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಚಂಪಾಷ‌ಷ್ಠಿ ಮಹಾರಥೋತ್ಸವ ಸಂಪನ್ನಗೊಂಡಿತು.

400 ವರ್ಷಗಳ ಬಳಿಕ ದೇವರಿಗೆ ನೂತನ ಬ್ರಹ್ಮರಥದ ಸಮರ್ಪಣೆ ನಡೆದಿದ್ದು, ಪ್ರಧಾನ ಅರ್ಚಕ ವೇ|ಮೂ| ಸೀತಾರಾಮ ಎಡಪಡಿತ್ತಾಯರು ವೈದಿಕ ವಿಧಿಗಳನ್ನು ನೆರವೇರಿಸಿದರು. ವರ್ಷಕ್ಕೊಮ್ಮೆ ನಡೆಯುವ ಬ್ರಹ್ಮರಥೋತ್ಸವ ಸೇವೆಗೆ 99 ಭಕ್ತರು ನೋಂದಾಯಿಸಿದ್ದರು.

ರಥೋತ್ಸವದ ಮೊದಲು ದೇವಸ್ಥಾನದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿತು. ರಥೋತ್ಸವದ ಬಳಿಕ ಉಮಾಮಹೇಶ್ವರ ಹಾಗೂ ಸುಬ್ರಹ್ಮಣ್ಯ ದೇವರಿಗೆ ಷಷ್ಠಿ ಕಟ್ಟೆಯಲ್ಲಿ ವಿಶೇಷಪೂಜೆ ನೆರವೇರಿತು. ದೇವರು ಗರ್ಭಗುಡಿಗೆ ಪ್ರವೇಶಿಸಿದ ಅನಂತರ ಪ್ರಧಾನ ಅರ್ಚಕರು ಮೂಲಪ್ರಸಾದ ವಿತರಿಸಿದರು.

ಮಹಿಳಾ ಅಧಿಕಾರಿಗಳ ನೇತೃತ್ವ
ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವದ ವೇಳೆ ಮೂರು ವಿಭಾಗಗಳಲ್ಲಿ ಮಹಿಳಾ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡಿದ್ದರು. ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್‌, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ. ಪಿಎಸ್‌ಐ ಆಗಿ ಓಮನಾ ಈ ಮೂರು ಮಂದಿ ಮಹಿಳಾ ಅಧಿಕಾರಿಗಳ ನೇತೃತ್ವದಲ್ಲಿ ಜಾತ್ರೆ ಯಾವುದೇ ಗೊಂದಲವಿಲ್ಲದೆ ಯಶಸ್ವಿಯಾಗಿ ನಡೆದಿದೆ.

309 ಭಕ್ತರಿಂದ ಎಡೆಸ್ನಾನ
ಷಷ್ಠಿ ಮಹೋತ್ಸವದ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ ರಾಜ್ಯ, ಹೊರರಾಜ್ಯಗಳಿಂದ ಆಗಮಿಸಿದ್ದ 309 ಭಕ್ತರು ಜಾತಿ-ಮತ, ವಯಸ್ಸಿನ ಭೇದವಿಲ್ಲದೆ ಎಡೆಸ್ನಾನ ನೆರವೇರಿಸಿದರು. ದೇಗುಲದ ಹೊರಾಂಗಣದ ಸುತ್ತಲೂ ಬಾಳೆ ಎಲೆಗಳಲ್ಲಿ ಅನ್ನಪ್ರಸಾದವನ್ನು ಬಳಸಿ ದೇಗುಲದ ಹಸುಗಳಿಂದ ತಿನ್ನಿಸಲಾಗುತ್ತದೆ. ಮಿಕ್ಕುಳಿದ ಉಚ್ಛಿಷ್ಟದ ಮೇಲೆ ಭಕ್ತರು ಉರುಳು ಸೇವೆ ಸಲ್ಲಿಸುವುದರಿಂದ ಚರ್ಮರೋಗ ಇತ್ಯಾದಿ ಕಾಯಿಲೆಗಳು ನಿವಾರಣೆಯಾಗುತ್ತವೆ ಎಂಬುದು ನಂಬಿಕೆ. ಮೊದಲೆಲ್ಲ ಭಕ್ತರು ಉಂಡೆದ್ದ ಎಂಜಲು ಎಲೆಯ ಮೇಲೆಯೇ ಮಡೆ ಮಡಸ್ನಾನ ಹೆಸರಿನಲ್ಲಿ ಸೇವೆ ನಡೆಯುತ್ತಿತ್ತು. ಅದಕ್ಕೆ ಪ್ರಗತಿಪರರ ವಿರೋಧದ ಹಿನ್ನೆಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಎಡೆಸ್ನಾನದ ರೂಪ ನೀಡಲಾಗಿದೆ.

ಪಂಚಮಿ ರಥೋತ್ಸವ
ರವಿವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಿತು. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ದೇವಸ್ಥಾನಕ್ಕೆ ಆಗಮಿಸಿ ಜಾತ್ರೆ ಕುರಿತು ಅಂತಿಮ ಸುತ್ತಿನ ಸಿದ್ಧತೆ ಪರಿಶೀಲಿಸಿ ತೆರಳಿದರು.

ಟಾಪ್ ನ್ಯೂಸ್

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.