ಕುಕ್ಕೆ: ಮಠದ ಸಿಬಂದಿಗೆ ಹಲ್ಲೆ ಆರೋಪ; ದೂರು ದಾಖಲು

ಮತ್ತೆ ವಿವಾದದ ರೂಪ ಪಡೆದ ಸರ್ಪಸಂಸ್ಕಾರ ಸೇವೆ

Team Udayavani, Jun 3, 2019, 9:55 AM IST

kukke

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆ ನಡೆಸಲು ಆಗಮಿಸಿದ್ದ ಭಕ್ತರ ತಂಡವನ್ನು ಪಕ್ಕದ ಮಠಕ್ಕೆ ಕರೆದೊಯ್ಯಲು ಯತ್ನಿಸಿದ ಆರೋಪದ ಮೇರೆಗೆ ಸ್ಥಳೀಯರು ಹಾಗೂ ಭದ್ರತಾ ಸಿಬಂದಿ ಕುಮಾರ ಬನ್ನಿಂತಾಯ ಎಂಬವರನ್ನು ಆಡಳಿತ ಮಂಡಳಿಗೆ ಒಪ್ಪಿಸಿದ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಈ ನಡುವೆ ತನ್ನ ಮೇಲೆ ಕೆಲವರು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಕುಮಾರ ಬನ್ನಿಂತಾಯ ಅವರು ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಕರಣದ ವಿವರ
ಕುಂದಾಪುರ ಮೂಲದ ನಾಗಮಣಿ ಎಂಬವರು ಸರ್ಪಸಂಸ್ಕಾರ ಪೂಜೆ ನಡೆಸಲೆಂದು ಕುಟುಂಬ ಸಮೇತ ಶನಿವಾರ ಕ್ಷೇತ್ರಕ್ಕೆ ಆಗಮಿಸಿದ್ದರು. ಅವರಿಗೆ ಮಠ ಹಾಗೂ ದೇವಸ್ಥಾನದ ಸರ್ಪಸಂಸ್ಕಾರದ ಗೊಂದಲದ ಬಗ್ಗೆ ಮಾಹಿತಿ ಇರಲಿಲ್ಲ. ಇದಕ್ಕೂ ಮೊದಲು ಅವರು ಸೇವೆ ಸಂಬಂಧ ದೇವಸ್ಥಾನದ ಕಚೇರಿ ಬದಲು ಶ್ರೀ ಸಂಪುಟ ನರಸಿಂಹ ಮಠದ ಕಚೇರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದರು. ಮಠ ದಿಂದ ಸೇವೆಯ ದಿನ ನಿಗದಿಪಡಿಸಿ ಮೊಬೈಲ್‌ ಸಂಖ್ಯೆಯನ್ನು ನೀಡಿದ್ದರು. ಸೇವೆ ಪ್ರಾರಂಭವಾಗುವ ಹಿಂದಿನ ದಿನ ಮಠದ ಕಚೇರಿಯಿಂದ ಈ ಮೊಬೈಲ್‌ ಸಂಖ್ಯೆಗೆ ಕರೆ ಹೋಗಿದೆ. ಈ ವೇಳೆಗೆ ನಾಗಮಣಿ ಕುಟುಂಬದವರು ತಾವು ದೇಗುಲದ ಮುಂಭಾಗದ ಗೋಪುರದ ಬಳಿ ಇದ್ದೇವೆ. ಮಠಕ್ಕೆ ಬರಲು ದಾರಿ ತಿಳಿಸಿ ಎಂದು ಕೇಳಿಕೊಂಡಿದ್ದರು.

ಅವರನ್ನು ಮಠಕ್ಕೆ ಕರೆದೊಯ್ಯಲು ಕುಮಾರ ಬನ್ನಿಂತಾಯರು ದೇಗುಲದ ಮುಂಭಾಗಕ್ಕೆ ಬಂದರು. ಆಗ ಅಲ್ಲಿದ್ದ ಕೆಲವು ಭಕ್ತರು ಹಾಗೂ ಭದ್ರತಾ ಸಿಬಂದಿ ದೇಗುಲಕ್ಕೆ ಸೇವೆ ನಡೆಸಲು ಬಂದವರನ್ನು ಮಠಕ್ಕೆ ಕರೆದೊಯ್ಯುತ್ತಿರುವುದಕ್ಕೆ ಆಕ್ಷೇಪಿಸಿ ತಡೆದು ಬನ್ನಿಂತಾಯರನ್ನು ದೇಗುಲದ ಆಡಳಿತ ಮಂಡಳಿಗೆ ಒಪ್ಪಿಸಿದರು. ದೇಗುಲದ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಎಂ. ಎಚ್‌. ಅವರು ವಿಚಾರಣೆ ನಡೆಸಿ ಪೊಲೀಸರಿಗೆ ದೂರು ನೀಡಿದ್ದರು.

ಹಲ್ಲೆ ಆರೋಪ
ಘಟನೆ ನಡೆದ ಬಳಿಕ ತನ್ನ ಮೇಲೆ ಮೂವರು ಹಲ್ಲೆ ನಡೆಸಿದ್ದಾಗಿ ಕುಮಾರ ಬನ್ನಿಂತಾಯರು ಆ್ಯಂಬುಲೆನ್ಸ್‌ನಲ್ಲಿ ತೆರಳಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾದರು. ಬಳಿಕ ಸುಬ್ರಹ್ಮಣ್ಯ ಪೊಲೀಸರು ಆಸ್ಪತ್ರೆಗೆ ತೆರಳಿ ಅವರ ಹೇಳಿಕೆ ಪಡೆದುಕೊಂಡರು. ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಮಹೇಶ್‌ ಕುಮಾರ್‌ ಕರಿಕ್ಕಳ, ಗುರುಪ್ರಸಾದ್‌ ಪಂಜ ಹಾಗೂ ಪ್ರಶಾಂತ್‌ ಭಟ್‌ ಮಾಣಿಲ ಅವರು ತನ್ನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾಗಿ ಬನ್ನಿಂತಾಯರು ದೂರಿದ್ದಾರೆ ಎಂದು ಎಸ್‌ಐ ಮಲ್ಲಿಕಾರ್ಜುನ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಿಸಿ ಟಿವಿ ಪರಿಶೀಲನೆ
ದೇವಸ್ಥಾನದ ಸಿಸಿ ಕೆಮರಾದ ದೃಶ್ಯಾವಳಿಗಳನ್ನು ಪರಿಶೀಲಿಸಲಾ ಗಿದ್ದು, ಅದರಲ್ಲಿ ಹಲ್ಲೆ ಮಾಡಿರುವುದು ದಾಖಲಾಗಿಲ್ಲ ಎಂದು ಎಸ್‌ಐ ತಿಳಿಸಿದ್ದಾರೆ.

ವಂಚನೆ: ಬೆಂಗಳೂರಿನ ಭಕ್ತನಿಂದ ಮಠದ ವಿರುದ್ಧ ದೂರು
ಇನ್ನೊಂದು ಪ್ರಕರಣದಲ್ಲಿ, ಬೆಂಗಳೂರಿನ ಕೆಂಗೇರಿಯ ಪಳನಿಸ್ವಾಮಿ ಎಂಬವರು ಮಠದ ರಾಘವೇಂದ್ರ ಹಾಗೂ ಅನಂತ ಭಟ್‌ ಎಂಬವರಿಂದ ಅನ್ಯಾಯವಾಗಿದೆ ಎಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದಾರೆ. ದೇವಸ್ಥಾನಕ್ಕೆ ಸರ್ಪಸಂಸ್ಕಾರ ಸೇವೆ ನಡೆಸಲು ಬರುವ ಭಕ್ತರನ್ನು ವಂಚಿಸಿ ಮಠಕ್ಕೆ ಕರೆದೊಯ್ಯಲಾಗುತ್ತಿದೆ ವಂಚನೆ ನಡೆಸಲಾಗುತ್ತಿದೆ ಎಂದವರು ದೂರಿನಲ್ಲಿ ತಿಳಿಸಿದ್ದಾರೆ. ತನ್ನಿಂದ 7,000 ರೂ. ಅನ್ನು ಸೇವೆಗೆಂದು ಪಡೆದು ವಾಪಸ್‌ ನೀಡದೆ ವಂಚಿಸಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಹಲ್ಲೆ ಮಾಡಿಲ್ಲ
ಬನ್ನಿಂತಾಯರ ಹಲ್ಲೆ ಆರೋಪ ಸತ್ಯಕ್ಕೆ ದೂರವಾದುದು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಮಹೇಶ್‌ ಕುಮಾರ್‌ ಕರಿಕ್ಕಳ, ಗುರುಪ್ರಸಾದ್‌ ಪಂಜ, ಪ್ರಶಾಂತ್‌ ಭಟ್‌ ಮಾಣಿಲ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.