ಕುಸಿಯುವ ಹಂತದಲ್ಲಿ ಕುಕ್ಕುಜೆ-ಅಳಂಬ ಸಂಪರ್ಕ ಸೇತುವೆ


Team Udayavani, Jun 3, 2019, 6:00 AM IST

z-13

ಅಪಾಯದಂಚಿನಲ್ಲಿರುವ ಕುಕ್ಕುಜೆ-ಅಳಂಬ ಸಂಪರ್ಕ ಸೇತುವೆ.

ಬೆಳ್ತಂಗಡಿ: ನಾರಾವಿ ಗ್ರಾ.ಪಂ. ವ್ಯಾಪ್ತಿಯ ಕುತ್ಲೂರು ಸಮೀಪದ ಅಳಂಬ ಸಂಪರ್ಕಿಸುವ ಕುಕ್ಕುಜೆ ಸೇತುವೆ ತೀರ ಹದೆಗಟ್ಟಿದ್ದು, ಮಳೆಗಾಲದಲ್ಲಿ ಕುಸಿಯುವ ಹಂತದಲ್ಲಿದೆ. ಸೇತುವೆ ಪಿಲ್ಲರ್‌ನ ತಳಭಾಗದ ಕಾಂಕ್ರೀಟ್‌ ಸಂಪೂರ್ಣ ಎದ್ದು ಹೋಗಿ ಕಬ್ಬಿಣದ ಸರಳುಗಳು ಹೊರಬಂದಿವೆ. ಕಳೆದ ಬಾರಿಯಂತೆ ಈ ಬಾರಿ ಅತೀವ ಮಳೆ ಸುರಿದರೆ ನೀರಿನ ರಭಸಕ್ಕೆ ಸೇತುವೆ ಕುಸಿದು ಎರಡು ಬದಿ ಸಂಪರ್ಕವೇ ಕಡಿಯುವ ಭೀತಿಯಲ್ಲಿ ಸ್ಥಳೀಯರಿದ್ದಾರೆ.

ಈ ಕುರಿತು ಗ್ರಾಮಸ್ಥರು ಹಲವು ಬಾರಿ ಶಾಸಕರಿಗೆ ಹಾಗು ಸ್ಥಳೀಯಾಡಳಿತಕ್ಕೆ ಮನವಿ ಸಲ್ಲಿದರೂ ಗಂಭೀರವಾಗಿ ಪರಿಗಣಿಸಿದಂತಿಲ್ಲ. ಕಳೆದ ಬಾರಿ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದ ಹೊರತಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಈಗಾಗಲೇ ಮಳೆ ಆರಂಭವಾಗುವ ಹಂತದಲ್ಲಿದ್ದು, ಕಾಮಗಾರಿ ಆರಂಭಿಸಿದರೂ ಕಾಂಕ್ರೀಟ್‌ ಕಿತ್ತು ಹೋಗುವ ಸಾಧ್ಯತೆ ಇದೆ.

30 ವರ್ಷಕ್ಕೇ ದುಃಸ್ಥಿತಿ
ಗಂಗಾಧರ ಗೌಡರ ಅವಧಿಯಲ್ಲಿ ಕುಕ್ಕುಜೆ ಯಿಂದ ಅಳಂಬಕ್ಕೆ ಸುಮಾರು 15 ಮೀಟರ್‌ ಉದ್ದದ ಸಂಪರ್ಕ ಸೇತುವೆ ನಿರ್ಮಿಸಲಾಗಿತ್ತು. ಸೇತುವೆಗಳಿಗೆ ಕನಿಷ್ಠ 70ರಿಂದ 80 ವರ್ಷ ಬಾಳಿಕೆ ಇದ್ದು, ಈ ಸೇತುವೆ 30 ವರ್ಷಕ್ಕೇ ಶಿಥಿಲಾವಸ್ಥೆ ತಲುಪಿದೆ. ಇದು ಕಳಪೆ ಕಾಮಗಾರಿಗೆ ನಿದರ್ಶನ.

ಘನವಾಹನ ಸಂಚಾರ ನಿಷೇಧ
ಈಗಾಗಲೇ ಶಾಲಾ – ಕಾಲೇಜು ಆರಂಭವಾಗಿದ್ದು, ಮಕ್ಕಳು ಆತಂಕದಲ್ಲಿ ಸಂಚರಿಸುವಂತಾಗಿದೆ. ಸೇತುವೆ ಕುಸಿದು ಬಿದ್ದಲ್ಲಿ ಸುಮಾರು 300 ಮನೆಗೆ ಸಂಪರ್ಕ ಕಡಿದಾಗಲಿದೆ. ಪಂಚಾಯತ್‌ರಾಜ್‌ ಕಿರಿಯ ಎಂಜಿನಿಯರ್‌ ವಿಭಾಗದ ಅಧಿಕಾರಿಗಳು ಘನವಾಹನ ಓಡಾಟ ನಡೆಸದಂತೆ ಸೂಚಿಸಿದ್ದಾರೆ. ಇದರಿಂದ ಕೃಷಿಗೆ ಅಗತ್ಯ ವಸ್ತು ಸಾಗಿಸಲು ತೊಡಕಾಗಲಿದೆ.

ತಡವಾಗಿ ಮಾಹಿತಿ
ಸ್ಥಳೀಯರು ತಡವಾಗಿ ಮಾಹಿತಿ ನೀಡಿದ್ದಾರೆ. ಮಳೆಗಾಲ ಸಮೀಪಿಸಿರುವುದರಿಂದ ದುರಸ್ತಿ ಕಷ್ಟಸಾಧ್ಯ. ದುರಸ್ತಿಗೆ ಕನಿಷ್ಠ 25 ದಿನಗಳು ಬೇಕು. ಮುಂದಿನ ವರ್ಷ ಮಳೆಹಾನಿ ಅನುದಾನದಲ್ಲಿ 3 ಲಕ್ಷ ರೂ. ಮೀಸಲಿರಿಸಿ ಕಾಂಕ್ರೀಟ್‌ ಅಳವಡಿಸಿ ದುರಸ್ತಿಪಡಿಸಲಾಗುವುದು ಎಂದು ಪಂಚಾಯತ್‌ರಾಜ್‌ ವಿಭಾಗ‌ದ ಕಿರಿಯ ಎಂಜಿನಿಯರ್‌ ತಮ್ಮಣ್ಣ ಗೌಡ ಪಾಟೀಲ್‌ತಿಳಿಸಿದ್ದಾರೆ.

ಗ್ರಾ.ಪಂ. ಸಭೆಯಲ್ಲಿ ಚರ್ಚೆ
ತುರ್ತು ಕ್ರಮ ಕೈಗೊಳ್ಳುವ ಕುರಿತಾಗಿ ಕಳೆದ ವಾರ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆದು ಸ್ಥಳೀಯರ ಮುಖೇನ ಶಾಸಕರಿಗೆ ಮನವಿ ಮಾಡಲಾಗಿದೆ. ಶಾಸಕರು ಪ್ಲಾ éನಿಂಗ್‌ ಸಿದ್ಧಪಡಿಸುವಂತೆ ಸೂಚಿಸಿದ್ದು, ಆದರೆ ಅಧಿಕಾರಿಗಳು ಈ ಕುರಿತು ನಿರ್ಲಕ್ಷ್ಯ ತೊರಿದ್ದಾರೆ. ಮಳೆಗಾಲಕ್ಕೂ ಮುನ್ನ ತಾತ್ಕಾಲಿಕ ದುರಸ್ತಿ ಅನಿವಾರ್ಯವಾಗಿದೆ.

ಹೊಸ ಸೇತುವೆಗೆ ಪ್ರಸ್ತಾವ
ಈಗಾಗಲೇ ಗ್ರಾ.ಪಂ.ನಿಂದ ಹೊಸ ಸೇತುವೆ ನಿರ್ಮಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಈಗಿರುವ ಸೇತುವೆ ದುರಸ್ತಿಗೊಳಿಸದರೂ ಮುಂದಿನ ಮಳೆಗಾಲಕ್ಕೆ ಅದೇ ಪರಿಸ್ಥಿತಿ ನಿರ್ಮಾಣವಾಗುವುದರಿಂದ ಹೊಸ ಸೇತುವೆ ನಿರ್ಮಿಸುವ ಪ್ರಸ್ತಾವನೆಯ ಕೂಗು ಕೇಳಿಬಂದಿದೆ.

 ಅನುದಾನ ಬಳಸಲಿ
ಮಳೆಗಾಲದಲ್ಲಿ ಸೇತುವೆ ಕುಸಿದು ಬಿದ್ದು ಜೀವಹಾನಿ ಸಂಭವಿಸಿದಲ್ಲಿ ಯಾರು ಹೊಣೆ ಎಂಬಂತಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಎರಡು ವಾರಗಳಾದರೂ ಕ್ರಮ ಕೈಗೊಂಡಿಲ್ಲ. ಶಾಸಕರ ಅನುದಾನದಿಂದ ದುರಸ್ತಿ ಕೈಗೊಂಡಲ್ಲಿ ತಕ್ಕಮಟ್ಟಿನ ಸಮಸ್ಯೆ ನಿವಾರಣೆಯಾಗಲಿದೆ.
– ರವೀಂದ್ರ ಪೂಜಾರಿ, ಅಧ್ಯಕ್ಷರು, ನಾರಾವಿ ಗ್ರಾ.ಪಂ.

 ಸ್ಥಳಕ್ಕೆ ಭೇಟಿ
ಸೇತುವೆ ದುಃಸ್ಥಿತಿ ಕುರಿತು ಈಗಾಗಲೇ ಮಾಹಿತಿ ಬಂದಿದೆ. ಅಧಿಕಾರಿಗಳು ಸ್ಥಳ ಪರಿಶೀಲಿದ್ದಾರೆ. ಇನ್ನೆರಡು ದಿನಗಳಲ್ಲಿ ಖುದ್ದು ಭೇಟಿ ನೀಡಲಾಗುವುದು.
– ಚೆನ್ನಪ್ಪ ಮೊಲಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಪಂಚಾಯತ್‌ರಾಜ್‌ ವಿಭಾಗ

-  ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.