ಕುಳಾಯಿ ಹೆದ್ದಾರಿ ಜಂಕ್ಷನ್: ಕಾಂಕ್ರೀಟ್ ಕಾಮಗಾರಿ ಆರಂಭ
Team Udayavani, Oct 10, 2019, 5:45 AM IST
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಕುಳಾಯಿ ಬಳಿ ಜಂಕ್ಷನ್ಗೆ ಕಾಂಕ್ರೀಟ್ ಮಾಡುವ ಮಾಡುವ ಕಾಮಗಾರಿ ಆರಂಭವಾಗಿದೆ.
ಹೆದ್ದಾರಿ ಇಲಾಖೆಯ ನಿರ್ವ ಹಣೆಯನ್ನು ಗುತ್ತಿಗೆ ಪಡೆದಿರುವ ನೂತನ ಕಂಪೆನಿ ಕಾಮಗಾರಿಯನ್ನು ಆರಂಭಿಸಿದೆ. ಕುಳಾಯಿ ಜಂಕ್ಷನ್ನಲ್ಲಿ ಮಳೆ ನೀರು ನಿಂತು ರಸ್ತೆ ಸಂಪೂರ್ಣ ಹದೆಗೆಟ್ಟಿದೆ. ಸರಿಯಾದ ಒಳಚರಂಡಿಯನ್ನು ಹೆದ್ದಾರಿ ಇಲಾಖೆ ನಿರ್ಮಿಸದ ಕಾರಣ ಮಳೆ ಬರುವಾಗ ಕೃತಕ ನೆರೆ ಉಂಟಾಗಿ ರಸ್ತೆ ಡಾಮರು ಎದ್ದು ಹೋಗಿ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿತ್ತು. ಇದನ್ನು ಮನಗಂಡು ಇತ್ತೀಚೆಗೆ ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ಹೆದ್ದಾರಿ ಪ್ರಾಧಿ ಕಾರದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಡಾ| ಭರತ್ ಶೆಟ್ಟಿ ವೈ. ಅವರು ಹೆದ್ದಾರಿಯ ಪ್ರಮುಖ ಜಂಕ್ಷನ್ಗಳಾದ ಕುಳಾಯಿ, ಬೈಕಂಪಾಡಿ ಕೈಗಾರಿಕಾ ಪ್ರದೇಶದ ತಿರುವು ರಸ್ತೆ, ಪಣಂಬೂರು ಬೀಚ್ ತಿರುವು ಜಂಕ್ಷನ್, ಕೂಳೂರು ಬ್ರಿಡ್ಜ್ ಅಯ್ಯಪ್ಪ ಗುಡಿ ಬಳಿ ಕಾಂಕ್ರೀಟ್ ಕಾಮಗಾರಿ ನಡೆಸಲು ಒತ್ತಾಯಿಸಿದ್ದರು. ಇದೀಗ ಇಲಾಖೆ ಕಾಮಗಾರಿ ಆರಂಭಿಸಿದೆ.
ಹಲವಾರು ವರ್ಷಗಳ ಸಮಸ್ಯೆಗೆ ಮುಕ್ತಿ
ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು ಮಾತನಾಡಿ, ಇಲ್ಲಿ ಸಮಸ್ಯೆ ಹಲವಾರು ವರ್ಷಗಳಿಂದ ಇತ್ತು. ಪಾಲಿಕೆ ರಸ್ತೆ ಬದಿ ಅಂಚಿನಿಂದ ಕಾಂಕ್ರೀಟ್ ಕಾಮಗಾರಿ ಮಾಡಲು ಯೋಜಿಸಿದ್ದರೂ ಹೆದ್ದಾರಿ ಇಲಾಖೆ ಅನುಮತಿ ನೀಡಿರಲಿಲ್ಲ. ಮಳೆ ತೋಡು ಕೂಡ ಸರಿಯಾಗಿ ಇರದಿದ್ದ ಕಾರಣ ರಸ್ತೆ ಹದೆಗೆಟ್ಟು ಹೋಗುತ್ತಿತ್ತು. ಇದೀಗ ಶಾಸಕ ಒತ್ತಾಯದ ಮೇರೆಗೆ ಶಾಶ್ವತ ಕಾಮಗಾರಿಯನ್ನು ಜಂಕ್ಷನ್ನಲ್ಲಿ ನಡೆಸಲಾಗುತ್ತಿದೆ ಎಂದರು.
ಶಾಂತಾ ರವೀಂದ್ರ, ವಿಟuಲ ಸಾಲ್ಯಾನ್, ರಮೇಶ್ ಅಳಪೆ, ವರುಣ್ ಚೌಟ, ಜಯ ರಾಮ ಆಚಾರ್ಯ, ಕಿರಣ್ ಕುಮಾರ್ ಕೋಡಿಕಲ್ ಮತ್ತಿತರರು ಉಪಸ್ಥಿತರಿದ್ದರು.
ಶಾಸಕರ ಭೇಟಿ
ಕುಳಾಯಿ ಬಳಿ ಕಾಮಗಾರಿ ವೀಕ್ಷಣೆ ನಡೆಸಿದ ಶಾಸಕ ಡಾ| ಭರತ್ ಶೆಟ್ಟಿ ವೈ. ಹೆದ್ದಾರಿ ನಿರ್ವಹಣೆದಾರರಿಗೆ ಗುಣಮಟ್ಟದ ಕಾಮಗಾರಿ ನಡೆಸಿ ಸಮರ್ಪಕ ಒಳಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸೂಚಿಸಿದರು. ಇದೇ ಸಂದರ್ಭ ಶಾಸಕರ ವಿಶೇಷ ಅನುದಾನದಲ್ಲಿ ಹೊನ್ನಕಟ್ಟೆಯಿಂದ ಕಾನಾಗೆ ಹೋಗುವ ಕಾಂಕ್ರೀಟ್ ರಸ್ತೆಯ ವಿಸ್ತರಣೆ, ಚರಂಡಿ ಮತ್ತಿತರ ಕಾಮಗಾರಿ ಕೈಗೊಳ್ಳುವ ಬಗ್ಗೆ ಸ್ಥಳೀಯರಲ್ಲಿ ಚರ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ