ಕುಲಶೇಖರ-ಮೂಡಬಿದಿರೆ ಹೈವೇಗೆ ಕೊನೆಗೂ ಮುಕ್ತಿ ?


Team Udayavani, Nov 30, 2017, 9:10 AM IST

30-6.jpg

ಮಂಗಳೂರು: ಕಳೆದೊಂದು ದಶಕದಿಂದ ಡಾಮರನ್ನೇ ಕಾಣದೆ ಮೃತ್ಯುಕೂಪದಂತಿದ್ದ ಕುಲಶೇಖರ- ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೊನೆಗೂ ಹೆದ್ದಾರಿ ಇಲಾಖೆ ಮುಂದಾಗಿದೆ. ಸುಮಾರು 17.5 ಕೋಟಿ ರೂ. ವೆಚ್ಚದಲ್ಲಿ 35 ಕಿ.ಮೀ. ದೂರದ ಈ ರಸ್ತೆ ಅಭಿವೃದ್ಧಿಯಾಗಲಿದೆ. 

ಈ ಪ್ರಮುಖ ರಸ್ತೆ ನಿರ್ವಹಣೆ ಇಲ್ಲದೆ ಅಪಾಯಕಾರಿ ಸ್ಥಿತಿ ತಲುಪಿತ್ತು. ರಸ್ತೆ ಕೆಟ್ಟಿದ್ದರಿಂದ ಈಗಾಗಲೇ ಅನೇಕ ಅಮಾಯಕ ವಾಹನ ಸವಾರರು ಪ್ರಾಣವನ್ನೂ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ “ಉದಯವಾಣಿ’ಯಲ್ಲಿ “ಜನಪ್ರತಿನಿಧಿಗಳೇ ಈ ರಸ್ತೆ ರಿಪೇರಿಗೆ ಇನ್ನೆಷ್ಟು ದುರಂತಗಳು ಬೇಕು?’ ಎಂಬ ತಲೆಬರಹದೊಂದಿಗೆ ಎರಡು ದಿನಗಳ ಹಿಂದೆಯಷ್ಟೇ ಸಚಿತ್ರ ವರದಿ ಪ್ರಕಟಿಸಿತ್ತು. 

ಕಿತ್ತುಹೋಗಿರುವ ಡಾಮರು, ಕಾಂಕ್ರೀಟ್‌ ಮತ್ತು ಅಪಾಯಕಾರಿ ಸ್ಥಿತಿಯಲ್ಲಿರುವ ಗುರುಪುರ ಸೇತುವೆ ದುರಸ್ತಿಗೆ ಸ್ಥಳೀಯರು ಈಗಾಗಲೇ ಹಲವು ಬಾರಿ ಪ್ರತಿಭಟನೆ ನಡೆಸಿದ್ದಾರೆ. ಏನೇ ಆದರೂ ಹೆದ್ದಾರಿ ಇಲಾಖೆ  ಇದಕ್ಕೆ ತಲೆಕೆಡಿಸಿ ಕೊಂಡಿರ ಲಿಲ್ಲ. ಆದರೆ ವರದಿ ಪ್ರಕಟಗೊಂಡ ಕೂಡಲೇ ಇಲಾಖೆ ಎಚ್ಚೆತ್ತು ದುರಸ್ತಿಗೊಳಿಸುವ ಜತೆಗೆ ಕುಲಶೇಖರ- ಮೂಡಬಿದಿರೆ ರಸ್ತೆ  ಪೂರ್ಣ ಡಾಮರೀಕರಣಕ್ಕೆ ಯೋಜನೆ ರೂಪಿಸಿದೆ.   

17.5 ಕೋ.ರೂ. ಪ್ರಸ್ತಾವನೆ
ದ.ಕ. ಸಂಸದ ನಳಿನ್‌ಕುಮಾರ್‌ ಕಟೀಲು ಅವರು ಮಂಗಳೂರು- ಮೂಡಬಿದಿರೆ ವರೆಗಿನ 35 ಕಿ.ಮೀ.ಉದ್ದದ ಹೆದ್ದಾರಿಗೆ ಪೂರ್ತಿ ಡಾಮರೀ ಕರಣ ಕ್ಕಾಗಿ ಹೆದ್ದಾರಿ ಇಲಾಖೆಯ ಮೂಲಕ 17.5 ಕೋ.ರೂ. ಪ್ರಸ್ತಾವನೆ ಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿ ದ್ದಾರೆ. ಸಾರಿಗೆ ಇಲಾಖೆ ಅನುದಾನ ನೀಡಿದ ತತ್‌ಕ್ಷಣ ಟೆಂಡರ್‌ ಕಾರ್ಯ ನಡೆದು ಕಾಮಗಾರಿ ಆರಂಭಗೊಳ್ಳಲಿದೆ. ಇದರ ಜತೆಗೆ ಗುರುಪುರದಲ್ಲಿ ಎನ್‌ಎಚ್‌ಎಐ ನಿರ್ಮಿಸುವ ಸೇತುವೆಯ ಜತೆಗೆ ಹೆದ್ದಾರಿ ಇಲಾಖೆಯ ಮೂಲಕವೂ ಒಂದು ಹೊಸ ಸೇತುವೆ ನಿರ್ಮಾಣ ವಾಗಲಿದೆ. ಇದಕ್ಕಾಗಿ ಕೇಂದ್ರ ಸರ ಕಾರ 50 ಕೋ.ರೂ. ಅನು ದಾನ ವನ್ನು ಮೀಸಲಿಟ್ಟಿದೆ’ ಎಂದು ಹೆದ್ದಾರಿ ಇಲಾಖೆಯ ಸ. ಕಾರ್ಯ ನಿರ್ವಾ ಹಕ ಎಂಜಿನಿಯರ್‌ ಯಶವಂತ ಕುಮಾರ್‌ “ಉದಯವಾಣಿ’ಗೆ ತಿಳಿಸಿದ್ದಾರೆ. 

ನ. 30: ರಾತ್ರಿ ಸೇತುವೆ ಬಂದ್‌
ರಾಷ್ಟ್ರೀಯ ಹೆದ್ದಾರಿ ಇಲಾಖೆ ಮಂಗಳೂರು ಉಪ ವಿಭಾಗದ ವತಿಯಿಂದ ಹೆದ್ದಾರಿಯ ತೇಪೆ ಕಾರ್ಯ ಕುಲಶೇಖರದಿಂದ ಆರಂಭ ಗೊಂಡಿದ್ದು, ಪ್ರಸ್ತುತ ಕಾಮಗಾರಿ ಗುರುಪುರ ಸೇತುವೆಯ ಬಳಿ ತಲುಪಿದೆ. ಈ ಕಾರಣ ನ. 30ರಂದು ರಾತ್ರಿ 10ರಿಂದ 12ರ ವರೆಗೆ ಸೇತುವೆ ಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗ ಲಿದೆ. ಈ ವೇಳೆ ಯಲ್ಲಿ  ಜನರು ಪರ್ಯಾಯ ರಸ್ತೆಯಲ್ಲಿ ಸಂಚರಿಸ ಬೇಕಿದೆ ಎಂದು ಇಲಾಖೆಯ ಎಂಜಿ ನಿಯರ್‌ಗಳು ತಿಳಿಸಿದ್ದಾರೆ. 

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.