ಅಗತ್ಯ ವಸ್ತು ಕೊರತೆಯಾಗದು: ಕಾಮತ್
Team Udayavani, Apr 3, 2020, 11:18 AM IST
ಮಂಗಳೂರು: ಅಕ್ಕಿ ಸೇರಿದಂತೆ ದಿನಬಳಕೆಯ ವಸ್ತುಗಳು ಹಾಗೂ ಔಷಧ ಸಾಮಗ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ಪೂರೈಕೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಹಾಗೂ ಇತರ ಕಡೆಗಳಿಂದ ವಸ್ತುಗಳು ಸಗಟು ವ್ಯಾಪಾರಿಗಳಿಗೆ ರವಾನೆ ಯಾಗುತ್ತಿದ್ದು, ಅದನ್ನು ರಿಟೇಲ್ ಅಂಗಡಿಗಳಿಗೆ ಒದಗಿಸುವ ಕಾರ್ಯ ನಡೆಯುತ್ತಿದೆ. ರೈಸ್ಮಿಲ್ಗಳನ್ನು ಕಾರ್ಯಾರಂಭಿಸುವಂತೆ ಮಾಲಕರ ಜತೆ ಮಾತುಕತೆ ನಡೆಸಲಾಗಿದೆ. ಜಿಲ್ಲೆಯ ಜನರಿಗೆ ಕುಚ್ಚಲಕ್ಕಿ ಕೊರತೆಯಾಗ ದಂತೆ ನೋಡಿಕೊಳ್ಳಲಾಗುವುದು ಎಂದರು.
ಮುಜರಾಯಿ ಇಲಾಖೆಯಿಂದ ಕದ್ರಿ ದೇವಸ್ಥಾನದಿಂದ ಇತರ ರಾಜ್ಯ-ಜಿಲ್ಲೆಗಳ 2,475 ಮಂದಿ ನಿರಾಶ್ರಿತರಿಗೆ ಕಳೆದ ಮೂರು ದಿನಗಳಿಂದ ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಸರಕಾರಿ ಶಾಲೆ, ಹಾಸ್ಟೆಲ್ಗಳಲ್ಲಿ ತಂಗಿರುವ ಸುಮಾರು 700 ಮಂದಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಇದಲ್ಲದೆ ಹೊಟೇಲ್, ಮೆಸ್ನ ವ್ಯವಸ್ಥೆ ಇಲ್ಲದ 413 ಮಂದಿಗೆ ಇಂದಿರಾ ಕ್ಯಾಂಟೀನ್ನಿಂದ ಊಟದ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಮೇಯರ್ ದಿವಾಕರ ಪಾಂಡೇಶ್ವರ, ಉಪ ಮೇಯರ್ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ, ಕಿರಣ್ ಕುಮಾರ್ ಹಾಜರಿದ್ದರು.
ಪ್ರತಿ ವಾರ್ಡ್ಗೆ ಮೋದಿ ಕಿಟ್
ಸಂಸದರು, ಮೇಯರ್ ನೇತೃತ್ವ ದಲ್ಲಿ ಪ್ರಮುಖ ಕಾರ್ಯಕರ್ತರ ಸಹಕಾರ ದೊಂದಿಗೆ ವಾರ್ಡ್ಗಳಿಗೆ ತಲಾ 50ರಂತೆ ಮಂಗಳೂರು ದಕ್ಷಿಣ ಕ್ಷೇತ್ರದ 38 ವಾರ್ಡ್
ಗಳಿಗೆ “ಮೋದಿ ಕಿಟ್’ ವಿತರಿಸುವ ಕಾರ್ಯ ಆರಂಭಿಸಲಾಗಿದೆ. 5 ಕೆಜಿ ಕುಚ್ಚಲಕ್ಕಿ, ತಲಾ ಒಂದು ಕೆಜಿ ಸಕ್ಕರೆ, ರವೆ, ಎಣ್ಣೆ, ಅರ್ಧ ಕೆಜಿ ಬೇಳೆ, ಪೇಸ್ಟ್, ಸೋಪ್ ಹಾಗೂ ಲಭ್ಯವಿರುವ ಧಾನ್ಯದ ತಲಾ 500 ರೂ. ಬೆಲೆಬಾಳುವ ಕಿಟ್ ಇದಾಗಿದೆ. ಅಗತ್ಯಕ್ಕನು ಸಾರವಾಗಿ 10,000 ಕಿಟ್ಗಳನ್ನು ತಯಾರು ಮಾಡಗುವುದು ಎಂದು ವೇದವ್ಯಾಸ್ ಕಾಮತ್ ತಿಳಿಸಿದರು.
ನಡೆದೇ ಹೋಗಿ
ಅಗತ್ಯ ವಸ್ತುಗಳು ಸ್ಥಳೀಯವಾಗಿಯೇ ಸಿಗುವ ವ್ಯವಸ್ಥೆ ಮಾಡಲಾಗುತ್ತಿದೆ. ಜನ ನಿಗದಿತ ಅವಧಿಯಲ್ಲಿ (ಬೆಳಗ್ಗೆ 7ರಿಂದ 12) ಸಮೀಪದ ಅಂಗಡಿಗಳಿಗೆ ಕಾಲ್ನಡಿಗೆಯಲ್ಲಿ ತೆರಳಿ ಖರೀದಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ