ಕರಾವಳಿ, ಮಲೆನಾಡಿನಲ್ಲಿ ಮಳೆ ಕೊರತೆ !
Team Udayavani, Aug 5, 2021, 3:30 AM IST
ಮಹಾನಗರ: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತೀ ಹೆಚ್ಚು ಮಳೆ ಸುರಿಯುವುದು ವಾಡಿಕೆ. ಆದರೆ ಈ ಬಾರಿ ಮುಂಗಾರು ವೇಳೆ ರಾಜ್ಯದಲ್ಲೇ ಅತೀ ಹೆಚ್ಚು ಮಳೆ ಕೊರತೆ ಇದೇ ಭಾಗದಲ್ಲಿ ಸೃಷ್ಟಿಯಾಗಿದೆ.
ಕೆಲವು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿಯಲ್ಲಿ ಉತ್ತಮ ಮಳೆ ಸುರಿಯುತ್ತಿದ್ದರೂ ವಾಡಿಕೆಯಂತೆ ಇನ್ನೂ ಮಳೆಯಾಗಿಲ್ಲ. ರಾಜ್ಯದ ಮೈಸೂರು (ಶೇ. 17) ಹೊರತುಪಡಿಸಿ ಉತ್ತರ ಒಳ ನಾಡಿನ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ ಉತ್ತಮ ಸುರಿದಿದೆ. ಮಲೆನಾಡು ವಿಭಾಗದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಕರಾವಳಿ ವಿಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಕೊರತೆ ಇದೆ.
ರಾಜ್ಯ ಕರಾವಳಿ ಭಾಗಕ್ಕೆ ಜೂನ್ 4ರಂದು ಮುಂಗಾರು ಪ್ರವೇಶಿಸಿತ್ತು. ಆದರೆ ಕೆಲವೇ ದಿನಗಳಲ್ಲಿ ಕ್ಷೀಣಿಸಿದ್ದು, ಮಳೆ ಪ್ರಮಾಣ ಕಡಿಮೆಯಾಗಿತ್ತು. ಬಳಿಕ ದೊಡ್ಡ ಪ್ರಮಾಣದಲ್ಲಿ ಮಳೆಯಾಗಲಿಲ್ಲ. ಕೆಲವು ದಿನಗಳಿಂದ ಕರಾವಳಿ, ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದರೂ ಜೂನ್ ಮತ್ತು ಜುಲೈ ಮಧ್ಯಭಾಗದಲ್ಲಿ ಆದಂತಹ ಕೊರತೆಯಿಂದಾಗಿ ವಾಡಿಕೆ ಮಳೆ ಪ್ರಮಾಣ ಕಡಿಮೆಯಾಗಿದೆ.
ಕಳೆದ ವರ್ಷವೂ ಇದೇ ಪರಿಸ್ಥಿತಿ:
ಕರಾವಳಿ ಭಾಗದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಭಾರಿಯೂ ಮಳೆ ಕೊರತೆ ಉಂಟಾಗಿದೆ. ಕಳೆದ ವರ್ಷ ಜೂನ್ 1ರಿಂದ ಆ. 3ರ ವರೆಗೆ ಕರಾವಳಿ ಭಾಗದಲ್ಲಿ 2,081 ಮಿ.ಮೀ. ವಾಡಿಕೆ ಮಳೆಯಲ್ಲಿ 1,718 ಮಿ.ಮೀ. ಮಳೆಯಾಗಿ ಶೇ. 17ರಷ್ಟು ಮಳೆ ಕಡಿಮೆಯಾಗಿತ್ತು. ಈ ಬಾರಿ 1,773.7 ಮಿ.ಮೀ. ಮಳೆಯಾಗಿ ಶೇ.15ರಷ್ಟು ಮಳೆ ಕಡಿಮೆ ಸುರಿದಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಮಲೆನಾಡಿನಲ್ಲಿ 1,011 ಮಿ.ಮೀ. ವಾಡಿಕೆ ಮಳೆಯಲ್ಲಿ 627 ಮಿ.ಮೀ. ಮಳೆಯಾಗಿ ಅತೀ ಹೆಚ್ಚು ಅಂದರೆ ಶೇ.38ರಷ್ಟು ಮಳೆ ಪ್ರಮಾಣ ಕಡಿಮೆಯಾಗಿತ್ತು. ಈ ವರ್ಷ 868 ಮಿ.ಮೀ. ಮಳೆಯಾಗಿ ಶೇ.14ರಷ್ಟು ಮಳೆ ಪ್ರಮಾಣ ಕಡಿಮೆಯಾಗಿದೆ.
ವಿಭಾಗವಾರು ಮಳೆ ಕೊರತೆ :
ವಿಭಾಗ ಮಳೆ ಕೊರತೆ (ಶೇ.)
ಮಲೆನಾಡು
ಶಿವಮೊಗ್ಗ 10
ಹಾಸನ 7
ಚಿಕ್ಕಮಗಳೂರು 16
ಕೊಡಗು 24
ಕರಾವಳಿ
ದಕ್ಷಿಣ ಕನ್ನಡ 32
ಉಡುಪಿ 22
ಉತ್ತರ ಕನ್ನಡ 1
ಹವಾಮಾನ ಇಲಾಖೆಯ ಸದ್ಯದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಭಾಗದಲ್ಲಿ ಸದ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಯುವುದು ಅನುಮಾನ. ಸದ್ಯ ಕರಾವಳಿ ಭಾಗದಲ್ಲಿ ಮೋಡಗಳು ಸೃಷ್ಟಿಯಾಗದ ಪರಿಣಾಮ ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಮಳೆ ಸುರಿಯಬಹುದು. ಕರಾವಳಿಯಲ್ಲಿ ಮಳೆ ಕಡಿಮೆಯಾದರೂ ಯಾವುದೇ ರೀತಿಯ ತೊಂದರೆಯಾಗದು. -ಡಾ| ರಾಜೇಗೌಡ, ಕೃಷಿ ವಿ.ವಿ. ಹವಾಮಾನ ವಿಜ್ಞಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ
Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ
ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’
D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್ ನಲ್ಲಿ 6 ಬೆಡ್ ಮೀಸಲು
May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್ ಯಾತ್ರೆ