ಮಾರುಕಟ್ಟೆಯಲ್ಲಿ ತರಕಾರಿ ಕೊರತೆ


Team Udayavani, Sep 8, 2018, 10:15 AM IST

8-sepctember-3.jpg

ಮಹಾನಗರ: ಕೆಥೋಲಿಕ್‌ ಕ್ರೈಸ್ತರ ತೆನೆ ಹಬ್ಬ ‘ಮೊಂತಿ ಫೆಸ್ತ್’ ಗೆ ಈ ವರ್ಷ ಹರಿವೆ, ಅಲಸಂಡೆ, ಹರಿವೆ ದಂಟು, ಕೆಸುವುದಂಟು ವಿರಳವಾಗಿದ್ದು, ಮಾರುಕಟ್ಟೆಯಲ್ಲಿ ಈ ನಾಲ್ಕು ತರಕಾರಿಗಳ ತೀವ್ರ ಕೊರತೆ ಕಂಡು ಬಂದಿದೆ. ಮಳೆ ಜಾಸ್ತಿ ಬಂದು ಬೆಳೆ ನಾಶವಾದ ಕಾರಣ ಹಾಗೂ ಅಳಿದುಳಿದ ಗಿಡಗಳಲ್ಲಿ ಫಸಲು ಕಡಿಮೆಯಾದ ಹಿನ್ನೆಲೆಯಲ್ಲಿ ಅಲಸಂಡೆ ಮತ್ತು ಹರಿವೆಯ ಅಭಾವ ಕಂಡು ಬಂದಿದೆ ಎನ್ನಲಾಗಿದೆ. ಕೆಸುವು ದಂಟಿಗೆ ಹೆಚ್ಚು ಬೇಡಿಕೆ ಇರಲಾರದೆಂಬ ಭಾವನೆ ಇದ್ದ ಕಾರಣ ಅದು ಸಾಕಷ್ಟು ಪ್ರಮಾಣದಲ್ಲಿ ಮಾರುಕಟ್ಟೆಗೆ ಪೂರೈಕೆ ಆಗಿಲ್ಲ ಎಂದು ಹೇಳಲಾಗುತ್ತಿದೆ.

ಕೆಥೋಲಿಕರು ಸೆ. 8ರಂದು ಆಚರಿಸುವ ತೆನೆ ಹಬ್ಬ ಎಂದರೆ ಅದು ಶಾಕಾಹಾರಿಯ ಹಬ್ಬ. ಅಂದು ಹಸಿರು ತರಕಾರಿಯ ಖಾದ್ಯಗಳೇ ಪ್ರಧಾನ. ಐದು, ಏಳು ಅಥವಾ ಒಂಬತ್ತು ಬಗೆಯ ತರಕಾರಿ ಪದಾರ್ಥಗಳನ್ನು ತಯಾರಿಸುವುದು ರೂಢಿ. ಆದರೆ ಈ ವರ್ಷ ಕೆಲವು ತರಕಾರಿಗಳೇ ವಿರಳವಾಗಿವೆ.

ಸ್ಥಳೀಯ ಬೆಂಡೆ ಬೆಲೆ ಏರಿಕೆ
ಪ್ರತಿ ವರ್ಷದಂತೆ ಈ ವರ್ಷ ಕೂಡ ಸ್ಥಳೀಯ ಬೆಂಡೆ ದುಬಾರಿಯಾಗಿದೆ; ಸಾಮಾನ್ಯವಾಗಿ ಸ್ಥಳೀಯ ಬೆಂಡೆ ಕೆ.ಜಿ.ಗೆ 50- 60 ರೂ. ಬೆಲೆ ಇರುತ್ತಿದ್ದು, ತೆನೆ ಹಬ್ಬದ ಮುಂಚಿನ ದಿನವಾದ ಶುಕ್ರವಾರ ನಗರದ ಸೆಂಟ್ರಲ್‌ ಮಾರ್ಕೆಟ್‌ನಲ್ಲಿ ಇದರ ಬೆಲೆ 120 ರೂ. ಇತ್ತು. ಸ್ಥಳೀಯ ಮುಳ್ಳು ಸೌತೆ (60 ರೂ.) ಮತ್ತು ಸ್ಥಳೀಯ ಹೀರೆ ಕಾಯಿ (50 ರೂ.)ಗೆ ಎಂದಿನ ದರಕ್ಕಿಂತ ತಲಾ 10 ರೂ. ಜಾಸ್ತಿಯಾಗಿದೆ. ಹರಿವೆ ದಂಟು ಬೆಲೆ 50 ರೂ. ಗಳಷ್ಟಿವೆ.

ಕೃಷ್ಣಾಷ್ಟಮಿ, ತೆನೆ ಹಬ್ಬ ಮತ್ತು ಚೌತಿ ಹಬ್ಬಗಳು ಕೆಲವು ದಿನಗಳ ಅಂತರದಲ್ಲಿ ಬಂದಿರುವುದರಿಂದ ಹಾಗೂ ಕೇರಳದಲ್ಲಿ ಪ್ರವಾಹದ ಕಾರಣ ಓಣಂ ಆಚರಣೆ ಇಲ್ಲದಿರುವುದರಿಂದ ಈ ವರ್ಷ ತರಕಾರಿಗಳ ಬೆಲೆ ಅಧಿಕ ಪ್ರಮಾಣದಲ್ಲಿ ಏರಿಕೆಯಾಗಿಲ್ಲ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಖರೀದಿ ಭರಾಟೆ 
ತೆನೆ ಹಬ್ಬದ ಪ್ರಯುಕ್ತ ಶುಕ್ರವಾರ ಮಾರುಕಟ್ಟೆಯಲ್ಲಿ ತರಕಾರಿಗಳ ಖರೀದಿಯ ಭರಾಟೆ ಕಂಡು ಬಂದಿತ್ತು. ಕೆಲವೊಂದು ತರಕಾರಿಗಳ ಕೊರತೆ ಇದ್ದ ಕಾರಣ ಈ ತರಕಾರಿಗಳು ಇರುವ ಅಂಗಡಿಗಳಲ್ಲಿ ಗ್ರಾಹಕರ ಒತ್ತಡ ಜಾಸ್ತಿ ಇತ್ತು. 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.