ಜಿಲ್ಲೆಯಲ್ಲಿ ನೀರಿನ ಕೊರತೆ: ಶಾಲಾರಂಭಕ್ಕೆ ಸಂಕಷ್ಟ
Team Udayavani, May 16, 2019, 6:00 AM IST
ಸಾಂದರ್ಭಿಕ ಚಿತ್ರ
ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿದ್ದು, ಈ ನಡುವೆ ಪಿಯುಸಿ ತರಗತಿ ಇನ್ನೇನು ಕೆಲವೇ ದಿನ ಗಳಲ್ಲಿ ಆರಂಭವಾಗಲಿದೆ. ನೀರಿನ ಕೊರತೆ ಶಾಲಾರಂಭಕ್ಕೂ ಸಂಕಷ್ಟ ಒಡ್ಡಲಿದೆ.
ಪಿಯುಸಿ ತರಗತಿಗಳು ಮೇ 20ರಿಂದ ಆರಂಭಗೊಳ್ಳಲಿದ್ದು, ಜಿಲ್ಲೆಗೆ ವಿವಿಧ ಭಾಗಗಳ ಸಾವಿರಾರು ವಿದ್ಯಾರ್ಥಿಗಳು ವಿವಿಧ ಕಾಲೇಜುಗಳಿಗೆ ಆಗಮಿಸಲಿದ್ದಾರೆ. ಸದ್ಯ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ತಾರಕಕ್ಕೇರಿದ್ದು, ಕಾಲೇಜು ಆರಂಭವಾದರೆ ಈ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ. ಈ ಹಿನ್ನೆಲೆಯಲ್ಲಿ ಪಿಯುಸಿ ಡಿಡಿಪಿಐ ಅವರು ಜಿಲ್ಲೆಯ ಕಾಲೇಜುಗಳಲ್ಲಿ ಇರುವ ನೀರಿನ ಸಮಸ್ಯೆಯ ಗಂಭೀರತೆ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.
ಕೆಲವು ಸರಕಾರಿ ಹಾಗೂ ಖಾಸಗಿ ಶಾಲಾ- ಕಾಲೇಜುಗಳಲ್ಲಿ ಸ್ವಂತ ಬಾವಿ, ಕೊಳವೆ ಬಾವಿ ವ್ಯವಸ್ಥೆಗಳಿಲ್ಲದೆ ಇರುವುದರಿಂದ ನಳ್ಳಿ ನೀರನ್ನೇ ಅವಲಂಬಿಸಲಾಗಿದೆ. ಸ್ವಂತ ಬಾವಿ, ಕೊಳವೆ ಬಾವಿ ಇರುವ ಶಾಲಾ ಕಾಲೇಜುಗಳಲ್ಲೂ ನೀರು ಬತ್ತಿಹೋಗುತ್ತಿದೆ.
ಕಾಲೇಜುಗಳು ಮೇ 20ರಂದು ಆರಂಭವಾದರೆ ಕುಡಿಯುವ ನೀರು ಮಾತ್ರವಲ್ಲ ಶೌಚಾಲಯ, ಕೈ ತೊಳೆಯುವುದು ಸೇರಿದಂತೆ ಇನ್ನಿತರ ಬಳಕೆಗಾಗಿ ಸಾವಿರಾರು ಲೀಟರ್ ನೀರು ಬೇಕಾಗುತ್ತದೆ. ಈ ಸಮಸ್ಯೆಯನ್ನು ಬಗ್ಗೆ ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ದ.ಕ. ಡಿಡಿಪಿಐ ಕುಶಾಲಾರತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್ ಕುಂಪಲ
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ