ಅಂತಾರಾಜ್ಯ ಸಂಪರ್ಕ ರಸ್ತೆ ಅಭಿವೃದ್ಧಿಗೆ ಇಚ್ಛಾಶಕ್ತಿಯ ಕೊರತೆ


Team Udayavani, Dec 24, 2018, 11:27 AM IST

24-december-4.gif

ಈಶ್ವರಮಂಗಲ : ಗಡಿನಾಡ ಅಭಿವೃದ್ಧಿಗೆ ಸರಕಾರಗಳು ಹಲವು ರೀತಿಯ ಯೋಜನೆಗಳ ಅನುದಾನಗಳನ್ನು ಇರಿಸಿವೆ. ಜನರಿಗೆ ಮೂಲ ಸೌಕರ್ಯವನ್ನು ಒದಗಿಸುವ ಜವಾಬ್ದಾರಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಇದೆ. ಆದರೆ ಈಶ್ವರಮಂಗಲ ಪದಡ್ಕ ಸುಳ್ಯಪದವು ಅಂತರ್‌ ರಾಜ್ಯ ಸಂಪರ್ಕಿಸುವ ರಸ್ತೆ ಕಳೆದ ಕೆಲವು ದಶಕಗಳಿಂದ ನಾದುರಸ್ತಿಯಲ್ಲಿದ್ದು, ಅಭಿವೃದ್ಧಿಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯೇ ಕಾರಣವಾಗಿದೆ.

ಈಶ್ವರಮಂಗಲದಿಂದ ಪದಡ್ಕದ ಮೂಲಕ ಸುಳ್ಯಪದವಿಗೆ ಸುಮಾರು 5 ಕಿ.ಮೀ. ದೂರ ಇದೆ. ವರ್ಷ ವರ್ಷ ಕೆಲವು ಅನುದಾನದಿಂದ 50 ಮೀ., 100ಮೀ. ಹೀಗೆ ಕಾಂಕ್ರೀಟ್‌ ರಸ್ತೆಯಾಗಿ ಅಭಿವೃದ್ಧಿಗೊಳ್ಳುತ್ತಿದೆ. ಜನರ ಬೇಡಿಕೆಯಂತೆ ಪೂರ್ಣ ಪ್ರಮಾಣದಲ್ಲಿ ರಸ್ತೆ ಅಭಿವೃದ್ಧಿ ಮರೀಚಿಕೆಯಾಗಿ ಉಳಿದಿದೆ. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಸರಕಾರ ಇದ್ದಾಗ ಸುಮಾರು 58 ಲಕ್ಷ ರೂ. ವೆಚ್ಚದಲ್ಲಿ ಸುಮಾರು 2 ಕಿ.ಮೀ. ಡಾಮರು ಕಾಮಗಾರಿ ಆಗಿದೆ. ಆದರೆ ಕಳೆದ 3 ದಶಕಗಳಿಂದ ಈ ರಸ್ತೆಗೆ ದೊಡ್ಡ ಮೊತ್ತದ ಅನುದಾನ ಒದಗಿ ಬಂದಿಲ್ಲ.

ಪ್ರಧಾನ ಮಂತ್ರಿಗಳ ಕಚೇರಿಗೆ ಸಾಮಾಜಿಕ ಕಾರ್ಯಕರ್ತ ಚಂದ್ರಹಾಸ ಮುಂಡ್ಯ ಅವರು ಪತ್ರ ಬರೆದು ರಸ್ತೆ ಅಭಿವೃದ್ಧಿಗೊಳಿಸುವಂತೆ 2 ವರ್ಷಗಳ ಹಿಂದೆ ಆಗ್ರಹಿಸಿದ್ದರು. ಪ್ರಧಾನಿ ಕಾರ್ಯಾಲಯ ಸ್ಪಂದಿಸಿ, ಜಿ.ಪಂ. ಇಲಾಖೆಯಿಂದ ವರದಿಯನ್ನು ಕಳುಹಿಸಿ ಕೊಡಲಾಗಿತ್ತು. ಆದರೆ ಫಲಿತಾಂಶ ಮಾತ್ರ ಶೂನ್ಯ.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು ಈ ರಸ್ತೆಯ ಬಗ್ಗೆ ಹೆಚ್ಚಿನ ಪ್ರಯತ್ನ ಮಾಡಿದರು. ಪದಡ್ಕದಿಂದ ಶಬರಿನಗರದ ವರೆಗೆ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯ ಮೂಲಕ ರಸ್ತೆ ಅಭಿವೃದ್ಧಿಗೊಳಿಸಿದರು. ಪದಡ್ಕ-ಈಶ್ವರಮಂಗಲ ಮಧ್ಯೆ 200 ಮೀ. ರಸ್ತೆ ಕಾಂಕ್ರೀಟ್‌ಗೊಳಿಸಿ ಅಭಿವೃದ್ಧಿಗೊಳಿಸಿದರು. ಇದೀಗ ಶಾಸಕ ಸಂಜೀವ ಮಠಂದೂರು ಅವರು ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೊಳಿಸುವ ಬಗ್ಗೆ ಹಾಗೂ ಈ ರಸ್ತೆಯನ್ನು ನಮ್ಮ – ಗ್ರಾಮ ನಮ್ಮ – ರಸ್ತೆ ಯೋಜನೆಗೆ ಸೇರಿಸಿ ರಸ್ತೆ ಅಭಿವೃದ್ಧಿಗೊಳ್ಳುತ್ತದೆ ಎಂದು ಸಾರ್ವಜನಿಕ ಮಾತು ಕೇಳಿ ಬರುತ್ತಿದೆ. ಊಹಾಪೋಹಗಳಿಗೆ  ಅಧಿಕಾರಿಗಳು, ಜನಪ್ರತಿನಿಧಿಗಳು ಉತ್ತರಿಸಬೇಕಾಗಿದೆ.

ಅಂತರ್‌ ರಾಜ್ಯ ಸಂಪರ್ಕ ರಸ್ತೆ
ಈಶ್ವರಮಂಗಲ-ಪದಡ್ಕ- ಸುಳ್ಯಪದವು ರಸ್ತೆ ಅಭಿವೃದ್ಧಿಗೊಂಡರೆ ಕೇರಳ ರಾಜ್ಯದ ಮುಳ್ಳೇರಿಯಾ, ಚೆರ್ಕಳ, ಮಧುರೂ, ಕಾಸರಗೋಡು, ಮಲ್ಲ ಕೇತ್ರಗಳಿಗೆ ಹತ್ತಿರವಾಗಲಿದೆ. ಸರಿಯಾದ ಬಸ್‌ನ ವ್ಯವಸ್ಥೆಗಳು ಇಲ್ಲದೇ ಹತ್ತಿರ ದಾರಿಯನ್ನು ಬಿಟ್ಟು ಸುತ್ತಿ ಬಳಸಿ ಹೋಗಬೇಕಾಗುತ್ತದೆ. ಇದರಿಂದ ಸಮಯ, ಹಣ ವ್ಯರ್ಥವಾಗುತ್ತದೆ.

ಚರಂಡಿಯಲ್ಲಿ ಮೆಸ್ಕಾಂ ಕಂಬ!
ಪಡುವನ್ನೂರು- ನೆಟ್ಟಣಿಗೆ ಮುಟ್ನೂರು ಗ್ರಾಮಗಳಲ್ಲಿ ಹಾದುಹೋಗುವ ಈ ರಸ್ತೆಯಲ್ಲಿ ಚರಂಡಿ ಮೆಸ್ಕಾಂ ಇಲಾಖೆ ಕಂಬವನ್ನು ಆಳವಡಿಸಿ, ಚರಂಡಿಯನ್ನು ಮುಚ್ಚಲಾಗಿದೆ. ಚರಂಡಿಯಲ್ಲಿ ಬಡಗನ್ನೂರು ಗ್ರಾ.ಪಂ.ನ ಕುಡಿಯುವ ನೀರಿನ ಯೋಜನೆಯ ಕೊಳವೆ ಬಾವಿ ಕೊರೆಸಲಾಗಿದೆ. ಇದರಿಂದ ರಸ್ತೆ ಬದಿಯ ಚರಂಡಿಯನ್ನು ಮುಚ್ಚಲಾಗಿದ್ದು, ರಸ್ತೆಯಲ್ಲಿಯೇ ನೀರು ಹರಿದು ಡಾಮರು ರಸ್ತೆ ಕಿತ್ತು ಹೋಗಿದೆ.

ಖಾಸಗಿಯವರಿಂದ ಅತಿಕ್ರಮಣ
ಖಾಸಗಿಯವರು ರಸ್ತೆಯನ್ನು ಆಕ್ರಮಿಸಿ ಅವರ ಮನೆಗೆ ಹೋಗುವ ರಸ್ತೆಯನ್ನು ಮಾಡುವಾಗ ಚರಂಡಿಯನ್ನು ಮುಚ್ಚಿದ್ದಾರೆ. ಇದರಿಂದ ಮಳೆಯ ನೀರು ರಸ್ತೆಯಲ್ಲಿ ಹರಿದು ರಸ್ತೆ ನಾದುರಸ್ತಿಯಲ್ಲಿದೆ.

ಜಿ.ಪಂ. ಅನುದಾನ ಕಷ್ಟ
ಈಶ್ವರಮಂಗಲ – ಸುಳ್ಯಪದವು ಜಿಲ್ಲಾ ಪಂ. ರಸ್ತೆ ನಾದುರಸ್ತಿಯಲ್ಲಿದೆ. ರಸ್ತೆ ಅಭಿವೃದ್ಧಿಗೆ ಜಿ.ಪಂ.ನಿಂದ ದೊಡ್ಡಮಟ್ಟದ ಅನುದಾನವಿಲ್ಲ. ಶಾಸಕರು ಹೆಚ್ಚು ಅನುದಾನ ನೀಡಲು ಸಾಧ್ಯ.
-ಅನಿತಾ ಹೇಮನಾಥ ಶೆಟ್ಟಿ,
 ಅಧ್ಯಕ್ಷರು, ಜಿ.ಪಂ. ಸ್ಥಾಯೀ ಸಮಿತಿ, ಮಂಗಳೂರು

ತತ್‌ಕ್ಷಣ ಸ್ಪಂದಿಸಬೇಕಾಗಿದೆ
ಸುಳ್ಯಪದವು-ಈಶ್ವರಮಂಗಲ ರಸ್ತೆ ದುರಸ್ತಿಗೊಳಿಸುವಂತೆ ಹಲವಾರು ಮನವಿ ಮಾಡಲಾಗಿದೆ. ಯಾವುದೇ ಪ್ರಯೋಜನವಾಗಿಲ್ಲ. ರಿಕ್ಷಾ ಸ್ಟಾಂಡ್‌ ಕೂಡ ಇದೇ ರಸ್ತೆಯಲ್ಲಿ ಕಾರ್ಯಾಚರಿಸುತ್ತಿದೆ. ಜೀವನ ನಿರ್ವಹಣೆ ಕಷ್ಟಕರವಾಗಿದೆ. ಕೂಡಲೇ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಿ ತತ್‌ಕ್ಷಣ ರಸ್ತೆ ಅಭಿವೃದ್ಧಿಗೊಳಿಸಬೇಕು.
-ಉದಯ ಕುಮಾರ್‌ ಕೆ.,
ರಿಕ್ಷಾ ಚಾಲಕ ಸುಳ್ಯಪದವು

ಈಶ್ವರಮಂಗಲ ಪ್ರಮುಖ ವಾಣಿಜ್ಯ ಕೇಂದ್ರ ಪಡುವನ್ನೂರು, ಬಡಗನ್ನೂರು ನೆರೆಯ ಬೆಳ್ಳೂರು ಗ್ರಾ.ಪಂ.ನ ಗ್ರಾಮಸ್ಥರು ಬೆಳೆಯುತ್ತಿರುವ ಈಶ್ವರಮಂಗಲವನ್ನು ಅವಲಂಬಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್‌, ಪ್ರಾಥಮಿಕ ಆರೋಗ್ಯ ಕೇಂದ್ರ, ಕಂದಾಯ ಇಲಾಖೆ, ಮೆಸ್ಕಾಂ ಇಲಾಖೆ, ವಾಣಿಜ್ಯ ವ್ಯವಹಾರ, ಶೈಕ್ಷಣಿಕ ಕೇಂದ್ರ, ಧಾರ್ಮಿಕ ಕೇಂದ್ರಗಳಿರುವ ಇಲ್ಲಿ ಸರಿಯಾದ ರಸ್ತೆ ಸಂಪರ್ಕ ವ್ಯವಸ್ಥೆ ಇಲ್ಲದೇ ಜನರು ಪರದಾಡುತ್ತಿದ್ದಾರೆ.

ಮಾಧವ ನಾಯಕ್‌

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.