ಬೆಳ್ತಂಗಡಿಯಲ್ಲಿ ಮನೆಗೆ ಹೋಗುವ ದಾರಿಯ ವಿವಾದ ಕೊಲೆಯಲ್ಲಿ ಅಂತ್ಯ: ಆರೋಪಿ ತಂದೆ-ಮಗ ಸೆರೆ
Team Udayavani, Feb 10, 2020, 12:02 PM IST
ಬೆಳ್ತಂಗಡಿ: ಸಂಬಂಧಿಗಳ ನಡುವಿನ ಜಾಗದ ವಿವಾದವೊಂದು ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾದ ಘಟನೆ ಇಲ್ಲಿನ ಲಾಯಿಲ ಗ್ರಾಮದ ಪುತ್ರಬೈಲಿನಲ್ಲಿ ನಡೆದಿದೆ. ಸದ್ಯ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.
ರವಿವಾರ ರಾತ್ರಿ ಕೊಲೆ ನಡೆದಿದ್ದು, ಉಮೇಶ್ ಸಮಗಾರ (50 ವರ್ಷ) ಕೊಲೆಯಾದ ವ್ಯಕ್ತಿ.
ತಂದೆ ಮಗ ಸೇರಿ ಈ ಕೊಲೆ ಮಾಡಿದ್ದು, ಆರೋಪಿಗಳಾದ ತಂದೆ ಯೋಗೀಶ್ ಮತ್ತು ಮಗ ಜೀವನ್ ರನ್ನು ಬಂಧಿಸಲಾಗಿದೆ.
ಕೊಲೆಯಾದ ಉಮೇಶ್ ಸಮಗಾರ ಅವರು ಮುಂಬೈನಲ್ಲಿ ಕೆಲಸದಲ್ಲಿದ್ದರು. ಊರಿಗೆ ಬಂದಿದ್ದ ವೇಳೆ ನಿನ್ನೆ ರಾತ್ರಿ ಮನೆಗೆ ಹೋಗುವ ದಾರಿಯ ವಿಚಾರದಲ್ಲಿ ಯೋಗೀಶ್ ಮತ್ತು ಜೀವನ್ ರ ಜೊತೆಗೆ ಜಾಗದ ಬಗ್ಗೆ ಚರ್ಚೆ ನಡೆದಿದೆ. ಈ ವೇಳೆ ಯೋಗೀಶ್ ಮತ್ತು ಜೀವನ್ ಅವರು ಉಮೇಶ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು.
ಮಧ್ಯರಾತ್ರಿ 2.30ರ ಸುಮಾರಿಗೆ ಉಮೇಶ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಆರೋಪಿಗಳಿಬ್ಬರನ್ನು ಸೋಮವಾರ ಬೆಳಿಗ್ಗೆ ಬಂಧಿಸಲಾಗಿದೆ.
ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ