ಜಿಲ್ಲಾಧಿಕಾರಿಗಳ ಸಭೆಗಾಗಿ ಕಾಯುತ್ತಿರುವ ಜಮೀನು ಕಡತ


Team Udayavani, May 18, 2018, 10:45 AM IST

18-may-14.jpg

ಹಳೆಯಂಗಡಿ: ಹಲವು ವರ್ಷಗಳ ಬೇಡಿಕೆಯಾಗಿರುವ ಹಳೆಯಂಗಡಿ ಇಂದಿರಾನಗರದ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿ ಸಿದ ಜಮೀನು ಪರಾಬಾರೆಯ ಕಡತವು ದ.ಕ.ಜಿಲ್ಲಾಧಿಕಾರಿಗಳ ವಿಶೇಷ ಸಭೆಗಾಗಿ ಕಾಯುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಪಕ್ಷಿಕೆರೆಯಾಗಿ ಹಳೆಯಂಗಡಿ ಸಂಪರ್ಕಿಸುವ ಈ ಪ್ರಮುಖ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹಾಗೂ ಸಂಚಾರದ ಒತ್ತಡವನ್ನು ಸಂಪೂರ್ಣವಾಗಿ ಕಡಿಮೆ ಮಾಡುವ ಉದ್ದೇಶದಿಂದ ಇಲ್ಲಿನ ಗೇಟ್‌ ನಂ. 89ಗೆ ಮೇಲ್ಸೇತುವೆಯ ಪ್ರಸ್ತಾವನೆಯೂ ಜನಪ್ರತಿನಿಧಿಗಳ ಮೂಲಕ ನೀಡಲಾಗಿದೆ.

ಹಳೆಯಂಗಡಿ ಗ್ರಾಮ ಪಂಚಾಯತ್‌ನ ಗ್ರಾಮ ಸಭೆಯಲ್ಲಿ ಪ್ರಸ್ತಾವನೆ, ಮೂಲ್ಕಿ ಜನಸ್ಪಂದನ ಕಾರ್ಯಕ್ರಮದಲ್ಲಿ ಬೇಡಿಕೆ, ಸಂಸದ ನಳಿನ್‌ ಕುಮಾರ್‌ ಹಾಗೂ ಈ ಹಿಂದೆ ಶಾಸಕರಾಗಿದ್ದ ಕೆ.ಅಭಯಚಂದ್ರರಿಗೆ ಸ್ಥಳೀಯರು ಹಲವು ಬಾರಿ ಮನವಿ ಮಾಡಿಕೊಂಡಿದ್ದರು. ಸ್ಥಳೀಯ ಇಂದಿರಾನಗರದ ರಿಲಾಯನ್ಸ್‌ ಅಸೋಸಿಯೇಶನ್‌ ಸಾಮಾಜಿಕ ಸೇವಾ ಸಂಸ್ಥೆಯು ಪೋಸ್ಟ್‌ ಕಾರ್ಡ್‌ ಗಳ ಮೂಲಕ ಸಹಿ ಸಂಗ್ರಹದೊಂದಿಗೆ ಆಂದೋಲನವನ್ನು ಸಹ ನಡೆಸಿತ್ತು. ದಿನ ನಿತ್ಯ ಇಲ್ಲಿ ಸಂಚರಿಸುವ ವಾಹನಗಳ ಮಾಲಕರ ಅವ್ಯವಸ್ಥೆ ಕಂಡು ಕಿನ್ನಿಗೋಳಿಯ ಶಾಲಾ ಬಾಲಕಿಯೋರ್ವಳು ನೇರವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಗಮನ ಸೆಳೆದಿದ್ದಳು.

ಕಂದಾಯ ಇಲಾಖೆಯ ಮಾಹಿತಿಯಂತೆ ಇಲ್ಲಿ ಮೇಲ್ಸೇತುವೆಗೆ ಸ್ವತಃ ಕೊಂಕಣ ರೈಲ್ವೇ ಸಂಸ್ಥೆ ಮುಂದಾಗಿದೆ. ಅದಕ್ಕಾಗಿ ಮೂರು ಕಡೆಗಳಲ್ಲಿ ಜಮೀನನ್ನು ಸೂಚಿಸಲಾಗಿದೆ. ಅಂತಿಮವಾಗಿ ಕಲ್ಲಾಪು ರೈಲ್ವೇ ಕ್ರಾಸಿಂಗ್‌ ಹಾಗೂ ಹಳೆಯಂಗಡಿ ರೈಲ್ವೇ ಕ್ರಾಸಿಂಗ್‌ನ ನಡುವಿನ ಜಮೀನಿನಲ್ಲಿ (ಇಲ್ಲಿ ಸರಕಾರಿ ಜಮೀನು ಸಹ ಇದೆ) ಮೇಲ್ಸೇತುವೆ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ಇಲ್ಲಿಂದ ನೇರವಾಗಿ ಹೆದ್ದಾರಿಗೆ ಸಂಪರ್ಕಿಸುವ ಲ್ಯಾಂಡ್‌ ಮಾರ್ಕ್‌ನ್ನು ಗುರುತಿಸಲಾಗಿದ್ದು, ಇದಕ್ಕಾಗಿ ಖಾಸಗಿ ಜಮೀನನ್ನು ಸಹ
ಉಪಯೋಗಿಸುವ ಸಾಧ್ಯತೆ ಇದೆ.

ಈಗಾಗಲೇ ರೂಪಿಸಿರುವ ಸುಮಾರು 5 ಕೋ.ರೂ. ವೆಚ್ಚದ ಈ ಮೇಲ್ಸೇತುವೆ ನಿರ್ಮಾಣವಾದಲ್ಲಿ ಇಲ್ಲಿನ ಸಂಚಾರವು ಸುವ್ಯವಸ್ಥೆಯಾಗಿ ಸಾಗಲಿದೆ ಎಂಬ ಆಶಯ ಸ್ವತಃ ರೈಲ್ವೇ ಇಲಾಖೆಗೂ ಇದೆ.

ಮೇಲ್ಸೇತುವೆಗೆ ನಿರ್ಮಾಣಕ್ಕೆ ಇಲಾಖೆ ಸಿದ್ಧ
ಹಳೆಯಂಗಡಿ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ಇಲಾಖೆ ಹಾಗೂ ಸರಕಾರದ ಸಮಪಾತದಲ್ಲಿ ಕೊಂಕಣ ರೈಲ್ವೇ ಇಲಾಖೆ ಸಿದ್ಧವಿದೆ. ಜಮೀನು ಸರಕಾರದಿಂದ ಹಸ್ತಾಂತರವಾದರೆ ಯೋಜನೆಗೆ ಚಾಲನೆ ಸಿಕ್ಕಂತಾಗುತ್ತದೆ. ಅಧಿಕಾರಿಗಳ ಸಭೆಯಲ್ಲಿ ಪ್ರತೀ ಬಾರಿಯು ಸಂಸದರು ಹಾಗೂ ಶಾಸಕರು ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆದು ಅಂತಿಮ ನಿರ್ಧಾರ ಮಾತ್ರ ಬಾಕಿಯಾಗಿದೆ.
– ಸುಧಾ ಕೃಷ್ಣಮೂರ್ತಿ
ಸಾರ್ವಜನಿಕ ಸಂಪರ್ಕಾಧಿಕಾರಿ,
ಕೊಂಕಣ ರೈಲ್ವೇ ಮಂಗಳೂರು

ದಿನಕ್ಕೆ 60 ಬಾರಿ ಗೇಟ್‌
ರೈಲ್ವೇ ಇಲಾಖೆಯ ಟಿವಿಯುಎಸ್‌ ಸಮೀಕ್ಷೆ ಪ್ರಕಾರ ಕನಿಷ್ಠ 60 ಸಾವಿರ ವಾಹನಗಳ ಸಂಚಾರ ಇದ್ದರೆ (ನಾಲ್ಕು ಚಕ್ರಕ್ಕಿಂತ ಮೇಲೆ) ಮೇಲ್ಸೇತುವೆ ನಿರ್ಮಾಣ ಮಾಡಬೇಕು. ಅದರಂತೆ ಹಳೆಯಂಗಡಿಯಲ್ಲಿ ಪ್ರಸ್ತುತ 2 ಲಕ್ಷ ವಾಹನಗಳ ಸಂಚಾರವಿದೆ ಎಂದು ವರದಿ ನೀಡಿದೆ. ಇಲ್ಲಿ ದಿನಕ್ಕೆ ಅಂದಾಜು 30 ರೈಲು ಸಂಚರಿಸುವಾಗ 60 ಬಾರಿ ಗೇಟ್‌ ಹಾಕಲಾಗುತ್ತದೆ. ಆಗ ಇಲ್ಲಿ ಅಕ್ಕಪಕ್ಕ ನಿಲ್ಲುವ ವಾಹನಗಳು ಚಾಲನೆಯ ಸ್ಥಿತಿಯಲ್ಲಿಯೇ ಇದ್ದರೆ ಅದರಲ್ಲಿನ ಇಂಧನಗಳ ನಷ್ಟವು ಸಹ ಈ ಸಮೀಕ್ಷೆಯಲ್ಲಿ ವರದಿಯಾಗಿದೆ ಎಂದು ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.