ಜಮೀನು ವಿಭಾಗ ಪತ್ರ ನೋಂದಣಿಗೆ ಲಾಕ್‌ಡೌನ್‌ ಕುತ್ತು

ಸರ್ವೇ ಇಲಾಖೆಯಿಂದ ಅವೈಜ್ಞಾನಿಕ ವಿನಾಯಿತಿ ಅವಧಿ ನಿಗದಿ ; ಪರಿಷ್ಕರಣೆಗೆ ಒತ್ತಡ

Team Udayavani, Jul 1, 2020, 6:43 AM IST

ಜಮೀನು ವಿಭಾಗ ಪತ್ರ ನೋಂದಣಿಗೆ ಲಾಕ್‌ಡೌನ್‌ ಕುತ್ತು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಳ್ತಂಗಡಿ: ರೈತರು ತಮ್ಮ ಜಮೀನಿನ ವಿಭಾಗ ಪತ್ರ ನೋಂದಣಿಗೆ ಸರ್ವೇ ಇಲಾಖೆಯಿಂದ ಪಡೆದ 11 ಇ ನಕ್ಷೆಗಳ ಕಾಲಮಿತಿ ಮುಗಿದುದರಿಂದ ಅವರು ದುಬಾರಿ ಶುಲ್ಕ ಪಾವತಿಸಿ ಮತ್ತೂಮ್ಮೆ ಅಳತೆ ಮಾಡಿಸಬೇಕಾದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸತತ ಎರಡು ತಿಂಗಳು ಲಾಕ್‌ ಡೌನ್‌ ಇದ್ದುದರಿಂದ ಸರಕಾರಿ ಕೆಲಸಗಳು ಮಂದಗತಿಯಲ್ಲಿವೆ. ಈ ನಡುವೆ ಭೂ ಪರಭಾರೆಗೆ ಪಡೆದ 11ಇ ನಕ್ಷೆ ನೋಂದಣಿಗೆ ಸರ್ವೇ ಇಲಾಖೆ ಕೇವಲ 1 ತಿಂಗಳ ವಿನಾಯಿತಿ ನೀಡಿತ್ತು.

ಈ ಅವಧಿಯಲ್ಲಿ ಇದಕ್ಕಾಗಿ ಸರ್ವೇ ಇಲಾಖೆ ಟೋಕನ್‌ ವ್ಯವಸ್ಥೆ ಆರಂಭಿಸಿತ್ತು. ಹೆಚ್ಚಿನ ಮಂದಿ ದೂರದೂರಿನಲ್ಲಿ ಸಿಲುಕಿದ್ದು, ವಿನಾಯಿತಿ ಅವಧಿ ವಿಸ್ತರಿಸುವುದು ಅಗತ್ಯವಾಗಿತ್ತು.

ಪ್ರತೀ ಸರ್ವೇ ನಂ.ಗೆ 1,200 ರೂ.
ಈ ಮಧ್ಯೆ ಸರ್ವರ್‌ ಸಮಸ್ಯೆ ಮತ್ತಿತರ ತೊಂದರೆ ಎದುರಾದ್ದರಿಂದ ಈಗಾಗಲೇ ಅರ್ಜಿ ಸಲ್ಲಿಸಿದವರ ಕಾಲಮಿತಿ ಮುಗಿದಿದೆ. ವಿನಾಯಿತಿ ಅವಧಿ ವಿಸ್ತರಿಸದೆ ಇರುವುದರಿಂದ ಕಾಲಮಿತಿ ಮುಗಿದಿರುವ ರೈತರು ಒಂದು ಸರ್ವೇ ನಂಬರಿಗೆ 1,200 ರೂ.ಗಳಂತೆ ಪಾವತಿಸಿ ಮತ್ತೂಮ್ಮೆ ಅಳತೆಗೊಳಪಡಿಸಿ ಹೊಸ ನಕ್ಷೆ ತಯಾರಿಸಿಕೊಳ್ಳಬೇಕಾದ ಅನಿವಾರ್ಯತೆ ಒದಗಿದೆ.

ನೋಂದಣಿ ಮೇಯಲ್ಲಿ ಆರಂಭಗೊಂಡರೂ ವೇಗವಾಗಿ ಆಗುತ್ತಿಲ್ಲ. ಪ್ರಸ್ತುತ ಜನರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ನೋಂದಣಿ ಕಚೇರಿಗೆ ಸ್ಕಾ éನ್‌ ಮಾಡಿದ ದಸ್ತಾವೇಜು ಪ್ರತಿ ಇಮೇಲ್‌ ಮಾಡಿ, ಬಳಿಕ ಉಪನೋಂದಣಾಧಿಕಾರಿಗಳು ನಿಗದಿಪಡಿಸಿದ ದಿನ ಕಡತ ಹಾಜರುಪಡಿಸಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಪ್ರಕ್ರಿಯೆಗೆ ಕನಿಷ್ಠ ಎರಡು ವಾರ ತಗಲುತ್ತದೆ.

ತಮ್ಮದಲ್ಲದ ತಪ್ಪಿನಿಂದ ಜನರಿಗೆ ಸಂಕಷ್ಟ
ಸರಕಾರವು ಎಲ್ಲ  ಕ್ಷೇತ್ರಗಳಲ್ಲಿ  ಕನಿಷ್ಠ 3 ತಿಂಗಳ ವಿನಾಯಿತಿ ಘೋಷಿಸಿದ್ದರೂ ಸರ್ವೇ ಇಲಾಖೆ ವ್ಯಾಪ್ತಿಗೆ ಕೇವಲ ಒಂದು ತಿಂಗಳು ಮಿತಿಗೊಳಿಸಿದೆ. ವಿನಾಯಿತಿ 3 ತಿಂಗಳು ಇದ್ದರೂ ಕೆಲವು ಕಡತಗಳಿಗೆ ಒಂದು ತಿಂಗಳ ಅವಧಿ ಸೂಚಿಸುತ್ತಿದೆ. ಈ ಕುರಿತು ಉಪನೋಂದಣಾಧಿಕಾರಿಗಳಿಗೂ ಸಮರ್ಪಕ ಮಾಹಿತಿ ಇಲ್ಲ.

ಇಲಾಖೆ ಈ ಬಗ್ಗೆ  ಸಾರ್ವಜನಿಕ ಪ್ರಕಟನೆ ನೀಡದಿರುವುದರಿಂದ ರೈತರಿಗೆ ಮಾಹಿತಿ ಲಭಿಸಿಲ್ಲ. ಇಲಾಖೆಯ ಈ ಕ್ರಮದಿಂದ 11ಇ ನಕ್ಷೆ ಪಡೆದು ಲಾಕ್‌ ಡೌನ್‌ನಿಂದಾಗಿ ನೋಂದಣಿಗೆ ಬಾಕಿಯಾಗಿರುವ ಎಲ್ಲ ಕಡತಗಳ ವಿಚಾರದಲ್ಲಿ ಜನರು ತಮ್ಮದಲ್ಲದ ತಪ್ಪಿಗೆ ದುಬಾರಿ ಮೊತ್ತ ತೆತ್ತು ಮತ್ತೆ ಅಳತೆ ಮಾಡಿಸಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗಿದೆ. ಇದರಿಂದ ಬ್ಯಾಂಕ್‌ ವ್ಯವಹಾರ, ಜಮೀನು ವಿಭಾಗ ಪರಭಾರೆಗೂ ಹೊಡೆತ ಬಿದ್ದಿದೆ.

ಆರಂಭದಲ್ಲಿ  11ಇ ನಕ್ಷೆ ಪಡೆದು ನೋಂದಣಿಗೆ 6 ತಿಂಗಳ ಅವಧಿ ನೀಡಲಾಗಿತ್ತು. ಕೋವಿಡ್‌ ಕಾರಣದಿಂದ ಮೂರು ತಿಂಗಳ ಹೆಚ್ಚುವರಿ ಅವಧಿ ನೀಡಲಾಗಿದೆ. ಈ ಮಧ್ಯೆಯೂ ತಾಂತ್ರಿಕ ದೋಷದಿಂದ ನೋಂದಣಿಗೆ ಬಾಕಿ ಉಳಿದಿರುವ ಕಡತಗಳಿದ್ದಲ್ಲಿ  ಮತ್ತೂಮ್ಮೆ  ಪರಿಶೀಲಿಸಲು ಉಪನೋಂದಣಾಧಿಕಾರಿಗಳಿಗೆ ಸೂಚಿಸುತ್ತೇನೆ.
– ಶ್ರೀಧರ್‌ ಹೆಚ್ಚುವರಿ ನಿರ್ದೇಶಕರು, ಸರ್ವೇ ಇಲಾಖೆ, ಬೆಂಗಳೂರು

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.