ಭಾರೀ ಮಳೆ ಭೂ ಕುಸಿತ, ಮನೆಗಳಿಗೆ ಹಾನಿ


Team Udayavani, Jun 15, 2018, 2:40 AM IST

bhukusita-14-6.jpg

ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ಭಾರೀ ಮಳೆಯಿಂದಾಗಿ ಭೂ ಕುಸಿತ ಹಾಗೂ ಮನೆಗಳಿಗೆ ಹಾನಿ ಉಂಟಾಗಿದ್ದು, ಶಾಸಕ ಹರೀಶ್‌ ಪೂಂಜ ಅವರು ಸಂಬಂಧಿತ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ, ಸಮಸ್ಯೆ ಬಗೆಹರಿಸುವ ಭರವಸೆಯಿತ್ತರು. ರೆಂಕೆದ ಗುತ್ತು ಬಳಿ ಮಹಿಳೆಯರು ವಾಸವಿದ್ದ ಮನೆಗೆ ಹಾನಿಯಾಗಿದೆ. ಇಂದಬೆಟ್ಟು ಗ್ರಾಮದ ಫಾತಿಮಾ ಹಾಗೂ ಬಂಗಾಡಿಯ ಮಹಮದ್‌ ಅವರ ಮನೆಗೆ ಹಾನಿಯಾಗಿದೆ. ಲಾೖಲ ಗ್ರಾಮದ ಕಾವಟೆ ನಿವಾಸಿ ನಟರಾಜ್‌ ಗೌಡ ಅವರ ಮನೆ ಮೇಲೆ ಗುಡ್ಡ ಕುಸಿದಿದ್ದು, ಕಿಟಕಿ ಮೂಲಕ ಮಣ್ಣು ಮನೆಯ ಒಳಗೆ ಬಂದಿದೆ. ಇದರಿಂದಾಗಿ ಮನೆ ಪೂರ್ತಿ ಕೆಸರಿನಿಂದ ಆವೃತವಾಗಿದೆ. ಅಂಕಾಜೆಯ ಉಮೇಶ್‌ ಗೌಡ ಅವರ ಮನೆ ಬಳಿ ಗುಡ್ಡ ಕುಸಿದು ಹಾನಿಯಾಗಿದೆ. ಪ್ರಕಾಶ್‌, ಆನಂದ್‌, ಕಲಾವತಿ, ಲಲಿತಾ ಅವರ ಮನೆಗಳೂ ಅಪಾಯದ ಸ್ಥಿತಿಯಲ್ಲಿದ್ದು, ಶಾಸಕ ಹರೀಶ್‌ ಪೂಂಜ ಭೇಟಿ ನೀಡಿದರು.

ಸಂಚಾರ ಸ್ಥಗಿತ
ಲಾೖಲ – ಅಗರಿ ಸಡಕ್‌ ರಸ್ತೆಯಲ್ಲಿ ಕಾವಟೆ ಬಳಿ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಆಗಮಿ ಸಿದ ಶಾಸಕ ಹರೀಶ್‌ ಪೂಂಜ ಕ್ರಮ ಕೈಗೊಳ್ಳಲು ಸೂಚಿಸಿದರು.

ಹೊಳೆ: ನಿವಾಸಿಗಳಿಗೆ ಜಾಗ
ಲಾೖಲ ಗಾಂಧಿನಗರ ಬಳಿ ಹೊಳೆ ಬದಿ ವಾಸಿಸುತ್ತಿದ್ದ ವಸಂತಿ, ಜಗನ್ನಾಥ, ಶ್ರೀಧರ, ಜಗನ್ನಾಥ್‌, ಶಾರದಾ, ಚಂದ್ರಶೇಖರ ಅವರ ಜಾಗ ಹೆಚ್ಚು ಮಳೆ ಬಂದಾಗ ಮುಳುಗಡೆಯಾಗುತ್ತಿದ್ದು, ಸಮೀಪದಲ್ಲಿದ್ದ ಡಿಸಿ ಮನ್ನಾ ಭೂಮಿ ಗುರುತಿಸಿ 6 ಕುಟುಂಬಗಳಿಗೂ ತಲಾ 2.5 ಸೆಂಟ್ಸ್‌ ಜಾಗ ನೀಡಲು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಸ್ಥಳದಲ್ಲಿ ಕಂದಾಯಾಧಿಕಾರಿ ರವಿ, ಪಿಡಿಒ ಪ್ರಕಾಶ್‌ ಶೆಟ್ಟಿ, ಕಾನಿಷ್ಕಾ, ಗ್ರಾ.ಪಂ ಉಪಾಧ್ಯಕ್ಷ ಗಿರೀಶ್‌ ಡೋಂಗ್ರೆ, ತಾ.ಪಂ. ಸದಸ್ಯ ಸುಧಾಕರ, ಕೃಷ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಪೂಂಜ ಅಭಯ
ಶಾಸಕ ಹರೀಶ್‌ ಪೂಂಜ ಅವರು ಫೇಸ್‌ ಬುಕ್‌ ಮೂಲಕ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ. ತಾಲೂಕಿನಲ್ಲಿ ಸಮಸ್ಯೆಗಳಾದಲ್ಲಿ ನೇರವಾಗಿ ಸಂಪರ್ಕಿಸಲು ದೂರವಾಣಿ ಸಂಖ್ಯೆಯನ್ನು ನೀಡಿದ್ದಾರೆ. ಜಾಗರೂಕರಾಗಿರಿ, ನಿಧಾನವಾಗಿ ವಾಹನ ಚಲಾಯಿಸಿ ಎನ್ನುವ ಮೂಲಕ ಕಾಳಜಿ ಮೆರೆದಿದ್ದಾರೆ. ತಮ್ಮ ಊರುಗಳಲ್ಲಿ ಜನರಿಗೆ ಸಹಾಯ ಬೇಕಾಗಬಹುದು, ಅಗತ್ಯ ವಸ್ತುಗಳು, ಔಷಧ ಮೊದಲಾದ ವ್ಯವಸ್ಥೆ ಬೇಕಾದವರಿಗೆ ಸಹಾಯ ಮಾಡುವಂತೆ ಸ್ವಯಂ ಸೇವಕರು, ಬಿಜೆಪಿ ಕಾರ್ಯಕರ್ತರು, ಯುವ ಮೋರ್ಚಾ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

10 ಕೋ. ರೂ. ಬಿಡುಗಡೆ ಮಾಡಿ
ತಾಲೂಕಿನಲ್ಲಿ ಮಳೆಯಿಂದ ಹಾನಿಯಾಗಿದ್ದು, ಸೂಕ್ತ ಕ್ರಮಕೈಗೊಳ್ಳಲು ಹಾಗೂ ಪರ್ಯಾಯ ವ್ಯವಸ್ಥೆಗೆ ಸೂಚಿಸಲಾಗಿದೆ. ತಾಲೂಕಿನಲ್ಲಿ ಗರಿಷ್ಠ ಹಾನಿಯಾಗಿದ್ದು, ರಾಜ್ಯ ಸರಕಾರದ ಕಂದಾಯ ಸಚಿವರು ಕೂಡಲೇ ತಾಲೂಕಿಗೆ ವಿಶೇಷ ನಿಧಿಯಾಗಿ 10 ಕೋಟಿ ರೂ. ಬಿಡುಗಡೆ ಮಾಡಬೇಕಿದೆ. ಸುರಕ್ಷತಾ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದು, ಸಮಸ್ಯೆ ಕುರಿತು ತತ್‌ ಕ್ಷಣ ವರದಿ ನೀಡುವಂತೆ ಸೂಚಿಸಲಾಗಿದೆ.
– ಹರೀಶ್‌ ಪೂಂಜ, ಶಾಸಕರು

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.