ಜೋಡುಪಾಲ: ಗುಡ್ಡ ಜರಿದು ಹಲವು ಮನೆ ನಾಶ
Team Udayavani, Aug 18, 2018, 2:35 AM IST
ಅರಂತೋಡು (ಸುಳ್ಯ ತಾ|): ಸಂಪಾಜೆ – ಮಡಿಕೇರಿ ಮಧ್ಯದ ಜೋಡುಪಾಲದಲ್ಲಿ ಗುಡ್ಡ ಜರಿದು ಮೂರು ಮನೆಗಳು ಸಂಪೂರ್ಣ ನಾಶವಾಗಿದ್ದು, ಮನೆಯಲ್ಲಿದ್ದವರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ. ಈ ಪೈಕಿ ಓರ್ವರ ಮೃತದೇಹ ಪತ್ತೆಯಾಗಿದ್ದು, ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿರಬೇಕೆಂದು ಶಂಕಿಸಲಾಗಿದೆ.
ಜೋಡುಪಾಲದ ಮೇಲ್ಬದಿಯ ಈ ಗುಡ್ಡ ಗುರುವಾರದಿಂದಲೇ ಕುಸಿಯತೊಡಗಿತ್ತು. ಅಲ್ಲಿರುವ ಮನೆಗಳ ನಿವಾಸಿಗಳನ್ನು ಪಕ್ಕದ ಶಾಲೆಗೆ ಸ್ಥಳಾಂತರಿಸಲಾಗಿತ್ತು. ಶುಕ್ರವಾರ ಪೂರ್ವಾಹ್ನ ಗುಡ್ಡ ಸಂಪೂರ್ಣ ಜಾರಿ ಅಲ್ಲಿರುವ ಮೂರು ಮನೆಗಳನ್ನು ಕಬಳಿಸಿದೆ. ರಸ್ತೆಯಿಡೀ ನೀರು ಹರಿದು ಬರುತ್ತಿದ್ದು, ಸುಮಾರು 3 ಕಿ.ಮೀ.ನಷ್ಟು ವಾಹನವಾಗಲಿ, ಜನರಾಗಲೀ ಹೋಗಲು ಸಾಧ್ಯವಿಲ್ಲದಂತಹ ವಾತಾವರಣ ನಿರ್ಮಾಣವಾಗಿದೆ. ಸುಮಾರು 800 ಜನರನ್ನು ಸ್ಥಳಾಂತರ ಮಾಡುವ ಕಾರ್ಯ ನಡೆದಿದೆ. ಭೂಕುಸಿತಗೊಂಡಿರುವ 2ನೇ ಮೊಣ್ಣಂಗೇರಿ ಪ್ರದೇಶದ ಗುಡ್ಡದಲ್ಲಿ ಇನ್ನೂ ಸುಮಾರು 80ರಿಂದ 100 ಜನರು ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಣೆ ಮಾಡುವ ಯತ್ನ ನಡೆಯಬೇಕಷ್ಟೇ.
ಗಂಜಿಕೇಂದ್ರಗಳಿಗೆ ಜನರ ಸ್ಥಳಾಂತರ
ಜೋಡುಪಾಲದ 2ನೇ ಮೊಣ್ಣಂಗೇರಿ ಪ್ರದೇಶ ಮತ್ತು ಜೋಡುಪಾಲ ಆಸುಪಾಸಿನ ಸುಮಾರು 600 ಜನರನ್ನು ಸಂಪಾಜೆ, ಚೆಂಬು ಮತ್ತು ಅರಂತೋಡಿನ ಶಾಲೆಗಳಿಗೆ ಸ್ಥಳಾಂತರಿಸಲಾಗಿದೆ. ಶಾಲೆಗಳಲ್ಲಿ ಗಂಜಿಕೇಂದ್ರಗಳನ್ನು ತೆರೆಯಲಾಗಿದೆ. ಜೋಡುಪಾಲದ ಸ.ಹಿ.ಪ್ರಾ. ಶಾಲೆಯಲ್ಲಿ ಸುಮಾರು 100 ನಿರಾಶ್ರಿತರು ಆಶ್ರಯ ಪಡೆದಿದ್ದು. ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲು ಸಾಧ್ಯ ಆಗುತ್ತಿಲ್ಲ.
ಈ ಪ್ರದೇಶ ಮಡಿಕೇರಿ ತಾಲೂಕು ವ್ಯಾಪ್ತಿಗೆ ಬರುವುದಾದರೂ ಈ ರಸ್ತೆಯಲ್ಲಿ ಈಗಾಗಲೇ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಯಾರೂ ಇಲ್ಲಿಗೆ ಬರುವ ಸಾಧ್ಯತೆ ಇರಲಿಲ್ಲ. ಸುಳ್ಯ ವೃತ್ತ ನಿರೀಕ್ಷಕ ಸತೀಶ್ ಕುಮಾರ್, ಎಸ್.ಐ. ಮಂಜುನಾಥ್ ಸಿಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಕೊಡಗು ಪೊಲೀಸರು, ಮಂಗಳೂರಿನಿಂದ ರಾಷ್ಟ್ರೀಯ ವಿಪತ್ತು ದಳ ಕೂಡ ಸ್ಥಳಕ್ಕೆ ಆಗಮಿಸಿ ಊರವರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಅಪರಾಹ್ನ ವೇಳೆಗೆ ಸುಳ್ಯ ಸರಕಾರಿ ಆಸ್ಪತ್ರೆಯ ಉದ್ಯೋಗಿ ಬಸಪ್ಪ ಅವರ ಮೃತದೇಹವನ್ನು ಹೊರತೆಗೆಯಲಾಗಿದೆ. ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಇನ್ನೂ ಪತ್ತೆಯಾಗಿಲ್ಲ. ಇಲ್ಲಿಯ ಹಮೀದ್ ಎಂಬವರ ಇಬ್ಬರು ಮಕ್ಕಳು ಕೂಡ ನಾಪತ್ತೆಯಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.
ಸಂತ್ರಸ್ತರ ರಕ್ಷಣೆ
ಈ ಮಧ್ಯೆ ಅಲ್ಲಿ ಶಾಲೆಯೊಳಗೆ ಸಿಲುಕಿಕೊಂಡಿದ್ದ ಸುಮಾರು 60ರಷ್ಟು ಮಂದಿಯನ್ನು ಹಗ್ಗದ ಸಹಾಯದಿಂದ ರಕ್ಷಿಸಿ ಕಲ್ಲುಗುಂಡಿ ಶಾಲೆ ಮತ್ತು ಅರಂತೋಡು ತೆಕ್ಕಿಲ್ ಶಾಲೆಗೆ ಸ್ಥಳಾಂತರಿಸಿರುವುದಾಗಿ ತಿಳಿದುಬಂದಿದೆ. ಇನ್ನೂ ನೂರಕ್ಕೂ ಅಧಿಕ ಮಂದಿ ಆ ಪ್ರದೇಶದಲ್ಲಿ ಸಿಲುಕಿದ್ದು ರಕ್ಷಣಾ ಕಾರ್ಯ ಸಾಗಿದೆ. ಊರವರು ಸಂತ್ರಸ್ತರಿಗೆ ಆಹಾರ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಕೂಡ ಬೃಹತ್ ಕಲ್ಲುಗಳೊಡನೆ ಧಾರಾಕಾರ ನೀರು ಗುಡ್ಡದಿಂದ ಇಳಿದು ಬರುತ್ತಿದ್ದು, ರಕ್ಷಣಾ ಕಾರ್ಯಕ್ಕೆ ತೊಡಕುಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್