ರಾ. ಹೆದ್ದಾರಿ 169 ಚತುಷ್ಪಥ ಕಾಮಗಾರಿ: ಭೂಮಾಲಕರ ಸಮಸ್ಯೆ ಶೀಘ್ರ ಇತ್ಯರ್ಥ: ಸಚಿವ ಸುನಿಲ್‌


Team Udayavani, Jun 14, 2022, 5:20 AM IST

ರಾ. ಹೆದ್ದಾರಿ 169 ಚತುಷ್ಪಥ ಕಾಮಗಾರಿ: ಭೂಮಾಲಕರ ಸಮಸ್ಯೆ ಶೀಘ್ರ ಇತ್ಯರ್ಥ: ಸಚಿವ ಸುನಿಲ್‌

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಕುಲಶೇಖರ-ಸಾಣೂರು ಭಾಗದ ಚತುಷ್ಪಥ ಕಾಮಗಾರಿಗೆ ಕುರಿತಂತೆ ಕೃಷಿ ಭೂಮಿ ಮತ್ತು ಪರಿವರ್ತಿತ ಭೂಮಿ ಎಂದು ತಾರತಮ್ಯ ಮಾಡಿ ಹತ್ತು ಪಟ್ಟು ಕಡಿಮೆ ಪರಿಹಾರ ನೀಡುತ್ತಿರುವ ರಾ. ಹೆ. ಪ್ರಾಧಿಕಾರದ ಧೋರಣೆಯಿಂದ ಆಗುವ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥ ಪಡಿಸುವುದಾಗಿ ಸಚಿವ ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಹೆದ್ದಾರಿ ಭೂಮಾಲಕರ ಹೋರಾಟ ಸಮಿತಿಯ ನಿಯೋಗದವರು ಸಚಿವರು ಹಾಗೂ ಸಂಸದ ನಳಿನ್‌ ಕುಮಾರ್‌, ಶಾಸಕ ಡಾ| ವೈ. ಭರತ್‌ ಶೆಟ್ಟಿ ಮತ್ತಿತರರನ್ನು ಭೇಟಿ ಮಾಡಿ ತಮಗಾದ ಅನ್ಯಾಯದ ಬಗ್ಗೆ ವಿವರಿಸಿದರು.

ಪದವು ಮತ್ತು ಉಳಿಪಾಡಿ ಗ್ರಾಮಗಳ ಮತ್ತೆ ಕೆಲವು ಗ್ರಾಮಗಳ ಅವಾರ್ಡ್‌ ಬೆಂಗಳೂರಿನ ಪ್ರಾದೇಶಿಕ ಕಚೇರಿಯಲ್ಲಿ ಬಾಕಿ ಇದ್ದು ಆದಷ್ಟು ಬೇಗ ಇತ್ಯರ್ಥ ಮಾಡಲಿದ್ದೇವೆ ಎಂದು ಯೋಜನಾ ಧಿಕಾರಿ ತಿಳಿಸಿದರು.

ಈ ತನಕ ಭೂಸ್ವಾ ಧೀನ ಆಗಿರುವ ಭೂಮಿಯ ವಿವರಗಳು ಮತ್ತು ಪರಿಹಾರ ನೀಡಿರುವ ಮತ್ತು ನೀಡಲು ಬಾಕಿ ಇರುವ ಭೂಮಿಯ ವಿವರ, ರಾಜ್ಯ ಹೈಕೋರ್ಟಿನಲ್ಲಿ ತಡೆಯಾಜ್ಞೆ ತಂದಿರುವ ಸುಮಾರು 270 ಜನರಿಗೆ ಸಂಬಂಧಿ ಸಿದ ಭೂಮಿಯ ವಿವರಗಳನ್ನು ಸಭೆಯಲ್ಲಿ ನೀಡಲಾಯಿತು.

ತಡೆಯಾಜ್ಞೆ ತೆರವಿಗೆ ಕ್ರಮ
ಸಾಣೂರು ಗ್ರಾಮದಿಂದ ಪ್ರಾರಂಭಿಸಿ ಕುಲಶೇಖರ ತನಕ 92 ಹೆಕ್ಟೇರ್‌ ಖಾಸಗಿ ಜಮೀನಿಗೆ ನೋಟಿಫಿಕೇಶನ್‌ ಆಗಿದ್ದು ಇದರಲ್ಲಿ 65 ಹೆಕ್ಟೇರ್‌ ಜಮೀನಿಗೆ ಅವಾರ್ಡ್‌ ಆಗಿದೆ. 27 ಹೆಕ್ಟೇರ್‌ ಜಮೀನಿಗೆ ಅವಾರ್ಡ್‌ ಇನ್ನೂ ಬಾಕಿ ಇದೆ. ಅವಾರ್ಡ್‌ ಆಗಿರುವಂತಹ 65 ಹೆಕ್ಟೇರ್‌ನಲ್ಲಿ 30 ಹೆಕ್ಟೇರ್‌ ಜಮೀನಿಗೆ ತಡೆಯಾಜ್ಞೆ ಇದೆ. ಜೂ.16ರ ಒಳಗೆ ಎಲ್ಲಾ ತಡೆಯಾಜ್ಞೆಗಳಿಗೆ ಕೋರ್ಟಿನಲ್ಲಿ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ಯೋಜನಾಧಿಕಾರಿ ವಿವರಿಸಿದರು.

ಪರಿಹಾರದ ಮೊತ್ತವನ್ನು ನಿರ್ಧರಿಸುವಾಗ ಗ್ರಾಮೀಣ ಭಾಗದಲ್ಲಿ 12.5 ಸೆಂಟ್ಸ್‌ ಮತ್ತು ನಗರ ವ್ಯಾಪ್ತಿಯಲ್ಲಿ 20 ಸೆಂಟ್ಸ್‌ ಜಾಗಗಳ ರಿಜಿಸ್ಟ್ರೇಷನ್‌ ಬೆಲೆಯನ್ನು ಗಣನೆಗೆ ತೆಗೆದುಕೊಂಡಿಲ್ಲ, ಆದರೆ ಹಿಂದೆ ಕುಂದಾಪುರ-ಸುರತ್ಕಲ್‌ ಭಾಗದ ಹೈವೇ ಭೂಸ್ವಾಧೀನದಲ್ಲಿ ಅದನ್ನು ಪರಿಗಣಿಸಲಾಗಿತ್ತು, ಇಲ್ಲಿ ಅದನ್ನು ಕೈಬಿಟ್ಟಿರುವುದರಿಂದ ಭೂಮಾಲಕರಿಗೆ ವಂಚನೆಯಾಗಿದೆ ಎಂದು ಹೋರಾಟ ಸಮಿತಿಯವರು ಸಚಿವರಿಗೆ ತಿಳಿಸಿದರು.

ಕೆಲಸ ತ್ವರಿತಕ್ಕೆ ಸಂಸದರ ಸೂಚನೆ
ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಪೂರ್ವಸಿದ್ಧತೆಯ ಕೆಲಸಗಳನ್ನು ಕೈಗೊಳ್ಳಬೇಕು ಎಂದು ಸಂಸದ ನಳಿನ್‌ ಇದೇ ವೇಳೆ ಗುತ್ತಿಗೆದಾರ ಕಂಪೆನಿ ಡಿಬಿಎಲ್‌ ಪ್ರತಿನಿಧಿಗಳಿಗೆ ಸೂಚಿಸಿದರು.

ಹೆದ್ದಾರಿ ಹೋರಾಟ ಸಮಿತಿಯ ಮರಿಯಮ್ಮ ಥಾಮಸ್‌, ಸಂಚಾಲಕ ಪ್ರಕಾಶ್‌ ಚಂದ್ರ, ಕಾರ್ಯದರ್ಶಿ ವಿಶ್ವಜಿತ್‌, ಸದಸ್ಯರಾದ ಜಯರಾಮ್‌ ಪೂಜಾರಿ, ರತ್ನಾಕರ ಶೆಟ್ಟಿ, ಬೃಜೇಶ್‌ ಶೆಟ್ಟಿ, ನರಸಿಂಹ ಕಾಮತ್‌, ಭೂ ಮಾಲಕರಾದ ಅನ್ನ ಮರಿಯ, ಪವನ್‌ ಕೋಟ್ಯಾನ್‌, ಪ್ರಸಾದ್‌ ಸಭೆಯಲ್ಲಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.