ಮಂಗಳೂರು: ಭಾರಿ ಮಳೆಗೆ ಹಳಿ ಮೇಲೆ ಮಣ್ಣು ಕುಸಿತ ; ರೈಲುಗಳು ರದ್ದು
ಪಡೀಲ್ ಮತ್ತು ಮಂಗಳೂರು ಜಂಕ್ಷನ್ ನಡುವೆ ಮಣ್ಣು ಕುಸಿದು ಸಂಚಾರಕ್ಕೆ ತೊಡಕು
Team Udayavani, Jun 30, 2022, 2:39 PM IST
ಮಂಗಳೂರು : ಕರಾವಳಿಯಲ್ಲಿ ಬುಧವಾರ ಸಂಜೆಯಿಂದ ಭಾರಿ ಮಳೆ ಸುರಿಯುತ್ತಿದ್ದು, ರೈಲು ಸಂಚಾರದ ಮೇಲೂ ಪರಿಣಾಮ ಬೀರಿದೆ.
ಪಡೀಲ್ ಮತ್ತು ಮಂಗಳೂರು ಜಂಕ್ಷನ್ ನಡುವೆ ಗುರುವಾರ ಬೆಳಗ್ಗೆ ಹಳಿಗಳ ಮೇಲೆ ಮಣ್ಣು ಕುಸಿತ ಉಂಟಾಗಿದ್ದು, ಜೂನ್ 30ರಂದು ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಸೆಂಟ್ರಲ್ ಅನ್ ರಿಸರ್ವ್ಡ್ ಎಕ್ಸ್ಪ್ರೆಸ್ ವಿಶೇಷ ಸೇವೆ(ರೈಲು ಸಂಖ್ಯೆ06488) ಮತ್ತು ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರಸ್ತೆ ಕಾಯ್ದಿರಿಸದ ಎಕ್ಸ್ಪ್ರೆಸ್ ವಿಶೇಷ ಸೇವೆ(ರೈಲು ಸಂಖ್ಯೆ 06489) ರದ್ದುಗೊಳಿಸಲಾಗಿದೆ.
ಬುಧವಾರ ವಿಜಯಪುರದಿಂದ ಹೊರಟಿದ್ದ ರೈಲು ಸಂಖ್ಯೆ.07377 ವಿಜಯಪುರ-ಮಂಗಳೂರು ಜಂಕ್ಷನ್ ದೈನಂದಿನ ವಿಶೇಷ ಸೇವೆ ಬಂಟ್ವಾಳದಲ್ಲಿ ಕೊನೆಗೊಳ್ಳಲಿದೆ.
ಸಂಜೆಯ ವೇಳೆಗೆ ಹಳಿಯಲ್ಲಿ ಪುನಃ ರೈಲುಗಳ ಸಂಚಾರವನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ