ಪುಷ್ಪಗಿರಿ ತಪ್ಪಲಿನ ಭಾಗದಲ್ಲಿ ನಿರಂತರ ಭೂಕುಸಿತ
Team Udayavani, Aug 19, 2018, 10:20 AM IST
ಸುಬ್ರಹ್ಮಣ್ಯ: ಪಶ್ಚಿಮ ಘಟ್ಟ ಸಾಲಿನ ಪುಷ್ಪಗಿರಿ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ಭಾರಿ ಭೂಕುಸಿತ ಕಂಡುಬರುತ್ತಿದೆ. ಗಾಳಿಬೀಡು, ಮಾಯಿಲಕೋಟೆ, ಕಡಮಕಲ್ಲು, ಕೂಜುಮಲೆ, ಕುತ್ತಿಬರೆ ಎಸ್ಟೇಟ್ ಮುಂತಾದೆಡೆ ಭೂ ಕುಸಿತವಾಗುತ್ತಿದೆ. ಮೇಲಿನಿಂದ ಹರಿದು ಬರುವ ಹೊಳೆಗಳ ನೀರು ಕೆಸರಿನಿಂದ ಕೂಡಿದೆ. ಕಲ್ಲುಗಳು ಮತ್ತು ಮರಗಳು ಕೂಡ ಮಳೆ ಕಡಿಮೆಯಾಗಿದ್ದರೂ ನದಿಗಳಲ್ಲಿ ಕೆಂಪು ನೀರು ಹರಿದು ಬರುತ್ತಿರುವುದು ಪರ್ವತ ಪ್ರದೇಶಗಳಲ್ಲಿ ಮಳೆ ಹಾಗೂ ಭೂಕುಸಿತ ನಿಂತಿಲ್ಲ ಎನ್ನುವುದನ್ನು ಸಾಬೀತುಪಡಿಸಿದೆ.
ಕಲ್ಮಕಾರಿನ ಮೆಂಟಕಜೆ, ಕೊಪ್ಪಡ್ಕ ಭಾಗದಲ್ಲಿ ಕೃಷಿ ಭೂಮಿ ಕೂಡ ಜರಿಯುತ್ತಿದೆ. ಬಾಳುಗೋಡು ಗ್ರಾಮದ ಉಪ್ಪುಕಳ, ಕೊತ್ನಡ್ಕ ಭಾಗಗಳಲ್ಲಿ ಕೂಡ ಗುಡ್ಡಗಳು ಜರಿಯುತ್ತಿವೆ. ಪರಿಸರದ ಜನತೆ ಭೀತಿಯಿಂದ ಸ್ಥಳಾಂತರಗೊಳ್ಳುತ್ತಿದ್ದಾರೆ. ಬಹುತೇಕ ಕುಟುಂಬಗಳು ಮನೆ ಮಠ ಬಿಟ್ಟು ಸಂಬಂಧಿಕರ ಮನೆ ಸೇರಿದ್ದಾರೆ.
ಕುಮಾರಪರ್ವತದ ಕೆಳಭಾಗದ ದೇವರಗದ್ದೆ, ಮಾನಾಡು ಭಾಗದಲ್ಲೂ ಭೂಕುಸಿತ ಸಂಭವಿಸಿವೆ. ಜನವಸತಿ ಇರುವ ತಳಭಾಗದ ಹಲವು ಸಂಪರ್ಕ ಸೇತುವೆಗಳು ಕೊಚ್ಚಿಹೋಗಿ ಸಂಪರ್ಕ ಕಡಿತಗೊಂಡಿದೆ.
ಜೋಡುಪಾಲಕ್ಕೆ ಖಾದರ್, ನಳಿನ್ ಭೇಟಿ
ಸುಳ್ಯ, ಆ. 18: ಕೊಡಗಿನಲ್ಲಿ ಪ್ರಾಕೃತಿಕ ವಿಕೋಪ ಹತೋಟಿಗೆ ಬರಬೇಕಿದೆ. ಅನಂತರ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ. ಖಾದರ್ ಹೇಳಿದರು.
ಜೋಡುಪಾಲ ಗುಡ್ಡ ಕುಸಿತ ಹಾಗೂ ಸಂತ್ರಸ್ತ ಶಿಬಿರಕ್ಕೆ ಭೇಟಿ ನೀಡಿದ ಬಳಿಕ ಪತ್ರಕರ್ತರ ಜತೆ ಮಾತನಾಡಿದರು. ಈಗಾಗಲೇ ಗಂಜಿಕೇಂದ್ರಗಳನ್ನು ತೆರೆದು ಸಂತ್ರಸ್ತರಿಗೆ ನೆರವು ನೀಡಲಾಗಿದೆ ಎಂದರು.
ಹಲವು ಕುಟುಂಬಗಳ ರಕ್ಷಣೆ
ಜೋಡುಪಾಲ, ಮದೆನಾಡು, ಸಂಪಾಜೆಯಲ್ಲಿ ಹಲವು ಕುಟುಂಬಗಳನ್ನು ರಕ್ಷಿಸಲಾಗಿದೆ. ಸ್ಥಳೀಯರು ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಹೇಳಿದರು. ಜೋಡುಪಾಲಕ್ಕೆ ಎಸ್ಪಿ ರವಿಕಾಂತೇ ಗೌಡ ಜತೆಗೆ ಭೇಟಿ ನೀಡಿ ಪರಿಶೀಲಿಸಿದ ಅನಂತರ ಪತ್ರಕರ್ತರ ಜತೆ ಮಾತನಾಡಿದ ಅವರು ಈಗಾಗಲೇ ಮೂರು ಕಡೆಗಳಲ್ಲಿ ಗಂಜಿ ಕೇಂದ್ರ ತೆರೆಯಲಾಗಿದೆ ಎಂದರು.
ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲು ಕೂಡ ಜೋಡುಪಾಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ