ಲಾರಿ ಢಿಕ್ಕಿ: ದ್ವಿಚಕ್ರ ಸವಾರ ಸಾವು
Team Udayavani, Aug 14, 2018, 12:19 PM IST
ಪುತ್ತೂರು: ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಸಮೀಪ ಸೋಮವಾರ ಮಧ್ಯಾಹ್ನ ಈಚರ್ ಲಾರಿ ಢಿಕ್ಕಿ ಹೊಡೆದು ದ್ವಿಚಕ್ರ ಸವಾರ ಮೃತಪಟ್ಟಿದ್ದಾರೆ.
ಪಟ್ನೂರು ಗ್ರಾಮದ ಪರಮಾರು ನಿವಾಸಿ, ಕೃಷಿಕ ಮಾಯಿಲಪ್ಪ ಗೌಡ (45) ಮೃತಪಟ್ಟವರು. ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದ ಇವರು ಸೋಮವಾರ ಮಧ್ಯಾಹ್ನ ಪುತ್ತೂರು ಸಂತೆಯಿಂದ ತರಕಾರಿ ಖರೀದಿಸಿ ಮನೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ.
ಮೃತರು ಪತ್ನಿ ಮತ್ತು ತಾಯಿಯನ್ನು ಅಗಲಿದ್ದಾರೆ.
ಪುತ್ತೂರಿನಿಂದ ಬೈಪಾಸ್ ರಸ್ತೆಯಾಗಿ ನೆಹರೂನಗರ ಕಡೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಈಚರ್ ಲಾರಿ ಢಿಕ್ಕಿಯಾಗಿದೆ. ರಸ್ತೆಗೆ ಎಸೆಯಲ್ಪಟ್ಟ ಮಾಯಿಲಪ್ಪ ಅವರ ತಲೆ, ಬೆನ್ನು, ಕೈಗೆ ಗಂಭೀರ ಗಾಯವಾಗಿತ್ತು. ತತ್ಕ್ಷಣ ಲಾರಿ ಚಾಲಕ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಅವರು ದಾರಿ ಮಧ್ಯೆ ಕೊನೆಯುಸಿರೆಳೆದರು. ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್