ರಾಷ್ಟ್ರ ಮಟ್ಟದ ಲಗೋರಿ ಕ್ರೀಡಾಕೂಟ ಉದ್ಘಾಟನೆ
Team Udayavani, Jan 7, 2018, 11:10 AM IST
ಲಾಲ್ಬಾಗ್: ಗ್ರಾಮೀಣ ಕ್ರೀಡೆಗಳಿಗೆ ಸಮಾಜದಿಂದ ಪ್ರೋತ್ಸಾಹ ಸಿಗಬೇಕು. ಇದಕ್ಕಾಗಿ ಕ್ರೀಡಾಕೂಟಗಳನ್ನು ನಡೆಸಿ ಆ ಕ್ರೀಡೆಗಳನ್ನು ಮುಖ್ಯವಾಹಿನಿಗೆ ತರುವ ಅವಶ್ಯವಿದೆ ಎಂದು ಮೇಯರ್ ಕವಿತಾ ಸನಿಲ್ ಅಭಿಪ್ರಾಯಪಟ್ಟರು.
ಪಾಥ್ ವೇ ತಂಡದ ವತಿಯಿಂದ ಅಮೆಚೂರ್ ಲಗೋರಿ ಫೆಡರೇಶನ್ ಆಫ್ ಇಂಡಿಯಾದ ಸಹಯೋಗದೊಂದಿಗೆ ನಗರದ ಲಾಲ್ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ರಾಷ್ಟ್ರ ಮಟ್ಟದ ಲಗೋರಿ ಕ್ರೀಡಾಕೂಟವನ್ನು ಅವರು ಶನಿವಾರ ಉದ್ಘಾಟಿಸಿ, ಲಗೋರಿ ಆಟವು ಬಾಲ್ಯವನ್ನು ಮರುಕಳಿಸುವಂತೆ ಮಾಡುತ್ತದೆ. ಗ್ರಾಮೀಣ ಕ್ರೀಡೆಯಾದ
ಲಗೋರಿ ಇತ್ತೀಚೆಗೆ ಮರೆಯಾಗುತ್ತಿರುವ ಹಂತದಲ್ಲಿ ಪಾಥ್ ವೇ ತಂಡವು ಅದನ್ನು ಕ್ರೀಡಾಕೂಟವನ್ನಾಗಿ ಆಯೋಜಿಸಿ ಜನರಿಗೆ ಪರಿಚಯಿಸುತ್ತಿರುವುದು ಶ್ಲಾಘನೀಯ ಎಂದರು. ಕ್ರಿಕೆಟ್ ಮುಂತಾದ ಆಟಗಳಿಗೆ ಸಿಗುವ ಪ್ರೋತ್ಸಾಹ ಗ್ರಾಮೀಣ ಕ್ರೀಡೆ ಲಗೋರಿ ಸಹಿತ ಇತರ ಕ್ರೀಡೆಗಳಿಗೂ ಲಭಿಸುವಂತಾಗಬೇಕು ಎಂದು ಅವರು ಆಶಿಸಿದರು.
ದೈಹಿಕ ಸದೃಢತೆ ಸಾಧ್ಯ
ಮುಖ್ಯ ಅತಿಥಿಯಾಗಿದ್ದ ಕಾರ್ಪೊರೇಟರ್ ಜಯಂತಿ ಮಾತನಾಡಿ, ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ, ದೈಹಿಕ ಸದೃಢತೆ ಸಾಧ್ಯ. ವಿದ್ಯಾರ್ಥಿಗಳು ಕ್ರೀಡಾಮನೋಭಾವ ರೂಢಿಸಿಕೊಳ್ಳಬೇಕು ಎಂದರು.
ಅಂತಾರಾಷ್ಟ್ರೀಯ ಲಗೋರಿ ರೆಫ್ರಿ ಸಂದೀಪ್ ಗುರೋಲ್, ಪಾಥ್ ವೇ ಸಂಸ್ಥೆಯ ಮಾಲಕ ದೀಪಕ್ ಗಂಗೂಲಿ, ಲಗೋರಿ ರಾಯಭಾರಿ ಸಂಜನಾ, ನಟಿಯರಾದ ಅಪೇಕ್ಷಾ ಪುರೋಹಿತ್, ನೀತಾ ಮುರಳೀಧರ್ ರಾವ್ ಮತ್ತಿತರರು ಉಪಸ್ಥಿತರಿದ್ದರು. ಕರ್ನಾಟಕ, ಆಂಧ್ರಪ್ರದೇಶ, ಹೊಸದಿಲ್ಲಿ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಮಧ್ಯಪ್ರದೇಶ, ಪಾಂಡಿಚೇರಿ, ವಿಧರ್ಭ, ತೆಲಂಗಾಣ, ತಮಿಳುನಾಡು ಮತ್ತಿತರೆಡೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.
ಭಾಗವಹಿಸುವಿಕೆ ಮುಖ್ಯ
ಸೋಲು-ಗೆಲುವು ಪ್ರತಿ ಕ್ಷೇತ್ರದಲ್ಲಿಯೂ ಇರುತ್ತದೆ. ಕ್ರೀಡಾಕೂಟದಲ್ಲಿ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ. ಕ್ರೀಡಾಸ್ಫೂರ್ತಿಯಿಂದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮುಖಾಂತರ ವಿದ್ಯಾರ್ಥಿ ಯುವಜನರು ಬದುಕಿನಲ್ಲಿ ಯಶಸ್ಸಿನ ಔನತ್ಯಕ್ಕೇರಬೇಕು ಎಂದು ಮೇಯರ್ ಕವಿತಾ ಸನಿಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ