ಮಕ್ಕಳ ಸಾಗಾಟದ ವೇಳೆ ಕಾನೂನು, ನಿಯಮ ಪಾಲಿಸಿ

ಶಾಲಾ ವಾಹನಗಳ ಓಡಾಟದ ಭರಾಟೆಯೂ ಆರಂಭ

Team Udayavani, Jun 3, 2019, 6:00 AM IST

z-29

ಮಹಾನಗರ: ಶಾಲಾ ತರಗತಿಗಳು ಆರಂಭವಾಗಿದ್ದು, ಇದರೊಂದಿಗೆ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ಓಡಾಟದ ಭರಾಟೆಯೂ ಆರಂಭವಾಗಿದೆ. ಮಕ್ಕಳ ಸಾಗಾಟದ ವೇಳೆ ಕಾನೂನು, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.

ನಗರದ ಬಹುತೇಕ ಪ್ರಮುಖ ಶಿಕ್ಷಣ ಸಂಸ್ಥೆಗಳು ಶಾಲಾ ವಾಹನಗಳನ್ನು ಹೊಂದಿವೆ. ಆದರೆ ಎಲ್ಲ ಮಕ್ಕಳೂ ಈ ವಾಹನಗಳಲ್ಲಿ ಸಂಚರಿಸುತ್ತಿಲ್ಲ. ಖಾಸಗಿ ಬಾಡಿಗೆ ಟ್ಯಾಕ್ಸಿ ಅಥವಾ ಆಟೋ ರಿಕ್ಷಾಗಳಲ್ಲಿ ಬಹಳಷ್ಟು ಮಕ್ಕಳು ಪ್ರಯಾಣ ಮಾಡುತ್ತಾರೆ. ಖಾಸಗಿ ಬಾಡಿಗೆ ವಾಹನಗಳಲ್ಲಿ ಮಿತಿ ಮೀರಿ ಮಕ್ಕಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪ ಹಲವು ವರ್ಷಗಳಿಂದ ಇದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನ ಪೊಲೀಸ್‌ ಆಯುಕ್ತರು ಈ ವರ್ಷ ಶಾಲಾರಂಭದಲ್ಲಿಯೇ ಎಲ್ಲ ಶಿಕ್ಷಣ ಸಂಸ್ಥೆಗಳ ಆಡಳಿತದ ಪ್ರತಿನಿಧಿಗಳನ್ನು ಕರೆಸಿ ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆಯ ಅಧಿಕಾರಿಗಳು, ಬಸ್‌ ಮಾಲಕರು, ಟ್ಯಾಕ್ಸಿ ಮತ್ತು ರಿಕ್ಷಾ ಚಾಲಕ/ ಮಾಲಕರ ಸಂಘಟನೆಗಳ ಪದಾಧಿಗಳ ಸಮಕ್ಷಮ ಜಾಗೃತಿ ಕಾರ್ಯಕ್ರಮವನ್ನು ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ನೀಡಿದ ಮಾರ್ಗ ಸೂಚಿಗಳನ್ನು ಸಂಬಂಧ ಪಟ್ಟ ಎಲ್ಲರಿಗೂ ತಿಳಿ ಹೇಳಲಾಗಿದೆ. ಶಾಲಾ ವಾಹನಗಳ ಅಪಘಾತ ಮತ್ತು ಅಪರಾಧ ಪ್ರಕರಣಗಳನ್ನು ಆದಷ್ಟು ಕಡಿಮೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.

ಶಾಲಾ ಮಕ್ಕಳ ಸುರಕ್ಷತೆಯ ವಿಚಾರದಲ್ಲಿ ಶಾಲಾ ಆಡಳಿತಗಳಿಗೆ ಉತ್ತರದಾಯಿತ್ವವನ್ನು ನಿಗದಿ ಪಡಿಸಿ ಸುಪ್ರೀಂ ಕೋರ್ಟ್‌ ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್‌)ದ ಸಲಹೆಯೊಂದಿಗೆ ಕರಡು ಮಾರ್ಗಸೂಚಿಗಳನ್ನು ತಯಾರಿಸಿ 2018 ಎಪ್ರಿಲ್ನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ಕಳುಹಿಸಿ ಅವುಗಳನ್ನು 6 ತಿಂಗಳೊಳಗೆ ಜಾರಿಮಾಡುವಂತೆ ನಿರ್ದೇಶನ ನೀಡಿತ್ತು. ಸಚಿವಾಲಯವು ಈ ಮಾರ್ಗಸೂಚಿಗಳನ್ನು 2018 ಸೆಪ್ಟಂಬರ್‌ನಲ್ಲಿ ಎಲ್ಲ ರಾಜ್ಯ ಸರಕಾರಗಳ ಪ್ರಧಾನ ಕಾರ್ಯದರ್ಶಿಗಳಿಗೆ (ಶಿಕ್ಷಣ) ಕಳುಹಿಸಿ ಅನುಷ್ಠಾನಿಸುವಂತೆ ಸೂಚಿಸಿತ್ತು.

ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ಹೇಳುವಾಗ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳಿಗೂ ಸಂಬಂಧಿಸಿ ಮಾರ್ಗ ಸೂಚಿಗಳನ್ನು ಸುಪ್ರೀಂ ಕೋಟ್ ರಚಿಸಿದೆ.

ಮಾರ್ಗಸೂಚಿ ವಿವರ

•ಶಾಲಾ ವಾಹನಗಳಿಗೆ ಹಳದಿ ಬಣ್ಣದ ಜತೆ ಸ್ಟಿಕ್ಕರ್‌ ಅಳವಡಿಸಿರಬೇಕು. ಬಾಡಿಗೆ ವಾಹನವಾಗಿದ್ದರೆ ‘ಆನ್‌ ಸ್ಕೂಲ್ ಡ್ಯೂಟಿ’ ಎಂದು ಬರೆದಿರಬೇಕು.
••ಪ್ರಥಮ ಚಿಕಿತ್ಸಾ ಪೆಟ್ಟಿಗೆ
•• ಕಿಟಿಕಿಯ ಭಾಗದಲ್ಲಿ ಗ್ರಿಲ್ಸ್ ಅಳವಡಿಸಿರಬೇಕು.
•• ಶಾಲೆಯ ಹೆಸರು ಮತ್ತು ಫೋನ್‌ ನಂಬ್ರ ಬರೆಯಬೇಕು.
•• ಮಕ್ಕಳ ಬ್ಯಾಗ್‌ ಇರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು.
•• ಬಸ್ಸಿನಲ್ಲಿ ಮಕ್ಕಳ ಮೇಲುಸ್ತುವಾರಿಗೆ ಸಿಬಂದಿ ನೇಮಕ
•• ಜಿಪಿಎಸ್‌ ತಂತ್ರಜ್ಞಾನ
•• ಪಾರದರ್ಶಕ ಕಿಟಕಿ
•• ವಿದ್ಯಾರ್ಥಿಗಳ ಪೂರ್ಣವಾದ ಮಾಹಿತಿ
•• ಚಾಲಕನ ವಿವರ ಇರಬೇಕು
•• ಸ್ಪೀಡ್‌ ಗವರ್ನರ್‌ ಅಳವಡಿಸಿರಬೇಕು
•• ಅಗ್ನಿಶಾಮಕ ವ್ಯವಸ್ಥೆ ಇರಬೇಕು
•• ವಾಹನಗಳ ಬಾಗಿಲಿಗೆ ಬೀಗ ಇರುವುದು ಕಡ್ಡಾಯ
•• ವಾಹನದಲ್ಲಿ ಮಕ್ಕಳನ್ನು ಮಿತಿ ಮೀರಿ ತುಂಬಿಸ ಬಾರದು; ಇನ್ನೊಂದು ಮಗುವಿನ ಮಡಿಲಿನಲ್ಲಿ ಕುಳ್ಳಿರಿಸ ಬಾರದು
•• ಚಾಲಕನಿಗೆ ಕನಿಷ್ಠ 5 ವರ್ಷಗಳ ಚಾಲನಾ ಅನುಭವ ಅಗತ್ಯ
•• ವರ್ಷದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಬಾರಿ ಮೋಟಾರು ವಾಹನ ನಿಯಮ ಉಲ್ಲಂಘನೆ ಅಥವಾ ಇತರ ಅಪರಾಧ ಎಸಗಿದವರನು ಚಾಲಕನಾಗಿ ನೇಮಿಸ ಬಾರದು.
•• ಮಿತಿ ಮೀರಿದ ವೇಗ, ಮದ್ಯಪಾನ ಮಾಡಿ ಅಥವಾ ಅಪಾಯಕಾರಿಯಾಗಿ ವಾಹನ ಚಲಾಯಿಸಿದ ಬಗ್ಗೆ ಒಂದು ಬಾರಿ ಕೇಸು ದಾಖಲಾದವರನ್ನು ಕೂಡ ನೇಮಿಸ ಬಾರದು.
•• ಮೋಟಾರು ವಾಹನ ಕಾಯ್ದೆ 1988ರ ಕಲಂ 74ರ ಪ್ರಕಾರ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳು ಒಪ್ಪಂದ ವಾಹನ ರಹದಾರಿ ಹೊಂದಿರಬೇಕು. ಚಾಲಕರು ನೀಲಿಬಣ್ಣದ ಸಮವಸ್ತ್ರ ಮತ್ತು ಕಪ್ಪು ಬಣ್ಣದ ಜೂಟ್ ಧರಿಸಿರಬೇಕು. 12 ವರ್ಷದ ಒಳಗಿನ ಮಕ್ಕಳನ್ನು ಆಟೋ ರಿಕ್ಷಾದಲ್ಲಿ 6 ಮಂದಿಯನ್ನು ಹಾಗೂ ಆಮ್ನಿ ವಾಹನದಲ್ಲಿ 8 ಮಂದಿಯನ್ನು ಮಾತ್ರ ಕರೆದೊಯ್ಯಲು ಅವಕಾಶವಿದೆ. 12 ವರ್ಷಕ್ಕಿಂತ ಮೇಲಿನ ಮಕ್ಕಳನ್ನು ವಾಹನದ ಸೀಟುಗಳ ಸಾಮರ್ಥ್ಯದಷ್ಟೇ ಕರೆದೊಯ್ಯಬೇಕು

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.