ಲಾಯಿಲ: ಬೈಕ್ -ಬಸ್ ಅಪಘಾತ; ಯುವಕ ಸ್ಥಳದಲ್ಲೇ ಸಾವು
Team Udayavani, Dec 21, 2022, 12:37 AM IST
ಬೆಳ್ತಂಗಡಿ: ಇಲ್ಲಿನ ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್ ಸಮೀಪ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 20ರಂದು ಸಂಜೆ ನಡೆದಿದೆ.
ಉಜಿರೆ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸಕ್ಕಿದ್ದ ಬಂಟ್ವಾಳ ತಾಲೂಕಿನ ನಾವೂರು ಮಲೆಬಾವು ನಿವಾಸಿ ವಿಜಯ್ (25) ಮೃತಪಟ್ಟ ಯುವಕ. ಸಹಸವಾರ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬಾಂಬಿಲ ನಿವಾಸಿ ಶೈಲೇಶ್ (25). ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತ ವಿಜಯ್ ಮತ್ತು ಶೈಲೇಶ್ ಬಂಟ್ವಾಳದ ಮನೆ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಸಾರಿಗೆ ಬಸ್ ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ವಿಜಯ್ ಸ್ಥಳದಲ್ಲೇ ಮೃತಪಟ್ಟಿದ್ದು ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಪೊಲೀಸರು ಸ್ಥಳಕ್ಕಾಗಿಮಿಸಿ ಸ್ಥಳೀಯರ ಸಹಾಯದಿಂದ ಸಂಚಾರ ಸುಗಮಗೊಳಿಸಿದ್ದಾರೆ. ಬಸ್ ವಶಕ್ಕೆ ಪಡೆಯಲಾಗಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವಿಜಯ್ ತಂದೆ ಈ ಹಿಂದೆಯೇ ಮೃತಪಟ್ಟಿದ್ದು ತಾಯಿ ಹಾಗೂ ತಂಗಿಯೊಂದಿಗೆ ವಾಸವಾಗಿದ್ದರು. ಬಡಕುಟುಂಬದ ಮನೆಗೆ ಆಧಾರ ಸ್ಥಂಭವಾಗಿದ್ದ ವಿಜಯ್ ನನ್ನು ಕಳೆದುಕೊಂಡ ಕುಟುಂಬ ದುಃಖದಿಂದ ಮರುಗಿದೆ.
ಇದನ್ನೂ ಓದಿ: 7 ದಿನಗಳಲ್ಲಿ ಭೂ ಪರಿವರ್ತನೆ ಕಡ್ಡಾಯ: ರಾಜ್ಯದ ಇತರ ಜಿಲ್ಲೆಗಳಲ್ಲಿ ಹೂಡಿಕೆ ಉತ್ತೇಜನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ