“ಕಲಿತದ್ದು ಕಲಿಸಿದ್ದು’ ಆಕರ ಕೋಶ: ಪ್ರೊ| ನಾವಡ

ಡಾ| ಬಿ.ಎ. ವಿವೇಕ ರೈ ಅವರ ಕೃತಿ ಬಿಡುಗಡೆ

Team Udayavani, Dec 16, 2019, 5:52 AM IST

1512MLR19

ಮಂಗಳೂರು: ಕರಾವಳಿಯ ಸಾಂಸ್ಕೃತಿಕ ಮತ್ತು ಸಾಹಿತ್ಯ ಚರಿತ್ರೆಯ ದಾಖಲಾತಿ ಕೊರತೆ ಇದೆ. ಅದನ್ನು ನೀಗಿಸುವಲ್ಲಿ ಡಾ| ಬಿ.ಎ. ವಿವೇಕ ರೈ ಅವರ “ಕಲಿತದ್ದು ಕಲಿಸಿದ್ದು’ ಕೃತಿ ಆಕರ ಕೋಶವಾಗಲಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ| ಎ.ವಿ. ನಾವಡ ಹೇಳಿದರು.

ಬೆಂಗಳೂರಿನ ಸಾವಣ್ಣ ಪ್ರಕಾಶನ, ಮಂಗಳೂರಿನ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಆಕೃತಿ ಆಶಯ ಪಬ್ಲಿಕೇಶನ್ಸ್‌ ವತಿಯಿಂದ ಕೊಡಿಯಾಲಬೈಲ್‌ ಕರ್ಣಾಟಕ ಬ್ಯಾಂಕ್‌ ಸಭಾಂಗಣದಲ್ಲಿ ರವಿವಾರ ಜರಗಿದ “ಕಲಿತದ್ದು ಕಲಿಸಿದ್ದು’ ಕೃತಿ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಮಾಜಿಕ ಬದಲಾವಣೆಯ ನಿರೂಪಣೆ
ಕೃತಿ ಬಿಡುಗಡೆಗಳಿಸಿದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಡಾ| ಪಿ. ಈಶ್ವರ ಭಟ್‌ ಮಾತನಾಡಿ, ಈ ಕೃತಿಯು ಕಲಿಕೆ, ಕಲಿಸುವಿಕೆಯ ನಿರೂಪಣೆಯ ಜತೆಗೆ ಅಂದಿನ ಕಾಲದಿಂದ ಬೆಳೆದುಬಂದ ಸಾಮರಸ್ಯದ ಬದುಕನ್ನು ಕೂಡ ಅನಾವರಣಗೊಳಿಸುತ್ತದೆ ಎಂದರು.

ವಿವೇಕ ರೈ ಅವರ ಸಹಪಾಠಿಗಳಾದ ಪುಣಚದ ಪ್ರಗತಿಪರ ಕೃಷಿಕ ಬೈಲುಗುತ್ತು ಮಾರಪ್ಪ ಶೆಟ್ಟಿ ಮತ್ತು ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಬಿ. ಗೋಪಾಲಕೃಷ್ಣ ಪುತ್ತೂರು ಅತಿಥಿಗಳಾಗಿದ್ದರು. ಸಾವಣ್ಣ ಪ್ರಕಾಶನದ ಜಮೀಲ್‌ ಸಾವಣ್ಣ, ಆಕೃತಿ ಪ್ರಕಾಶನದ ಕಲ್ಲೂರು ನಾಗೇಶ್‌ ಉಪಸ್ಥಿತರಿದ್ದರು. ಶಶಿರಾಜ್‌ ರಾವ್‌ ಕಾವೂರು ವಂದಿಸಿದರು. ಡಾ| ಆರ್‌. ನರಸಿಂಹ ಮೂರ್ತಿ ನಿರ್ವಹಿಸಿದರು.

ಸಮ್ಮಾನ
ವಿವೇಕ ರೈ ಅವರು ಕಲಿತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಕುಟುಂಬದವ ರಾದ ಪುಣಚ ಪರಿಯಾಲ್ತಡ್ಕ ಅನು ದಾನಿತ ಹಿ.ಪ್ರಾ. ಶಾಲೆಯ ಮುಖ್ಯೋ ಪಾಧ್ಯಾಯ ಸಿ. ಶ್ರೀಹರ್ಷ ಶಾಸಿŒ, ಪುತ್ತೂರು ಬೋರ್ಡ್‌ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯರಾಗಿದ್ದ ಎಂ. ಅಣ್ಣಪ್ಪ ಅವರ ಮಗ ರತನ್‌ ಕುಮಾರ್‌ ಕೆ. ಪುತ್ತೂರು, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಿಯೋ ನೊರೊನ್ಹ, ಮಂಗಳೂರು ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಮತ್ತು ಮಂಗಳಗಂಗೋತ್ರಿ ಕನ್ನಡ ವಿಭಾಗದ ಮುಖ್ಯಸ್ಥರಾಗಿದ್ದ ಪ್ರೊ| ಎಸ್‌.ವಿ. ಪರಮೇಶ್ವರ ಭಟ್ಟ ಅವರ ಪುತ್ರ ಎಸ್‌.ಪಿ. ರಾಮಚಂದ್ರ ಬೆಂಗಳೂರು ಅವರನ್ನು ಸಮ್ಮಾನಿಸಲಾಯಿತು.

“ಕಲಿತದ್ದು ಕಲಿಸಿದ್ದು’ ಕೃತಿ ಹುಟ್ಟಿದ್ದು ಆಕಸ್ಮಿಕ. “ಉದಯವಾಣಿ’ ಸಾಪ್ತಾಹಿಕ ಸಂಪದದ ಒತ್ತಾಸೆಗಾಗಿ ಎರಡು ಮೂರು ಕಂತು ಬರೆಯಲು ಆರಂಭಿಸಿದೆ. ಜನ ಓದುತ್ತಾರೆ, ಸಂಭ್ರಮಿಸುತ್ತಾರೆ ಎಂದು ತಿಳಿದು 21 ಕಂತು ಬರೆದೆ. ನಾನು ಶಿಕ್ಷಣ, ಸಾಹಿತ್ಯಕ್ಕೆ ಬಂದು 50 ವರ್ಷವಾಗಿ 50ಕ್ಕೂ ಅಧಿಕ ಪುಸ್ತಕ ಬರೆದಿದ್ದೆ. ಆದರೆ ನನ್ನ ಯಾವುದೇ ಪುಸ್ತಕ ಓದದವರು ಕೂಡ “ಉದಯವಾಣಿ’ಯಲ್ಲಿ ಪ್ರಕಟವಾದ ಈ ಅಂಕಣ ಓದಿರುವುದು ನನ್ನಲ್ಲಿ ಬೆರಗು ಮೂಡಿಸಿತು. ಕೃತಿಯಾಗಿ ಪ್ರಕಟಿಸುವಾಗ ಮತ್ತಷ್ಟು ವಿಚಾರಗಳನ್ನು ಸೇರಿಸಿದ್ದೇನೆ.
– ಡಾ| ಬಿ.ಎ. ವಿವೇಕ ರೈ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.