ಇನ್ನು ನಗರದ ಸರಕಾರಿ ಕಚೇರಿಗಳಿಗೆ ಎಲ್‌ಇಡಿ ಬಲ್ಬ್ ಮೆರುಗು!


Team Udayavani, Jun 4, 2019, 6:00 AM IST

R-21

ಮಹಾನಗರ: ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ನಗರದ ಸರಕಾರಿ ಕಚೇರಿಗಳಿಗೆ ಎಲ್‌ಇಡಿ ಬಲ್ಬ್ ಅಳವಡಿಸುವ ಪ್ರಕ್ರಿಯೆ ಆರಂಭವಾಗಿದೆ. ನಗರದ ರಸ್ತೆಗಳು, ಸರಕಾರಿ ಕಚೇರಿಗಳಿಗೆ ಎಲ್‌ಇಡಿ ಬಲ್ಬ್ಗಳನ್ನು ಅಳವಡಿಸಿ ವಿದ್ಯುತ್‌ ಉಳಿತಾಯ ಮಾಡುವ ಪರಿಕಲ್ಪನೆಯನ್ನು ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಅಳವಡಿಸಲಾಗಿತ್ತು. ಅದರಂತೆ ಮೊದಲ ಹಂತದಲ್ಲಿ ಸರಕಾರಿ ಕಚೇರಿಗಳಲ್ಲಿ ಎಲ್‌ಇಡಿ ಅಳವಡಿಸಲಾಗುತ್ತಿದೆ. ಬೀದಿ ದೀಪಗಳಿಗೆ ಟೆಂಡರ್‌ ಪ್ರಕ್ರಿಯೆ ನಡೆಯಬೇಕಾಗಿದ್ದು, ಆ ಬಳಿಕ ಕಾಮಗಾರಿ ಆರಂಭಗೊಳ್ಳಲಿದೆ.

ನಗರದಲ್ಲಿ ಕಾರ್ಯಚರಿಸುತ್ತಿರುವ ಸರಕಾರಿ ಕಚೇರಿಗಳಲ್ಲಿ ಈ ಹಿಂದೆ ಮಾಮೂಲಿ ದೀಪಗಳನ್ನು ಬಳಸಲಾಗುತ್ತಿದ್ದು, ಇದರಿಂದ ಇಂಧನ ಹೆಚ್ಚು ವ್ಯರ್ಥವಾಗುತ್ತಿತ್ತು. ಇಂಧನ ಉಳಿತಾಯ ಮಾಡುವ ಉದ್ದೇಶದಿಂದ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ 1.68 ಕೋಟಿ ರೂ. ವೆಚ್ಚದಲ್ಲಿ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುತ್ತಿದೆ. ಆ ಮೂಲಕ ಸರಕಾರಿ ಕಚೇರಿಗಳಿಂದಲೇ ಇಂಧನ ಉಳಿಸುವ ಕೆಲಸ ಆರಂಭವಾಗಲಿದೆ. ಪ್ರಸ್ತುತ ನಗರದ ಜಿಲ್ಲಾಧಿಕಾರಿ ಕಚೇರಿ, ಬಿಎಸ್‌ಎನ್‌ಎಲ್‌ ಕಚೇರಿಯಲ್ಲಿ ಎಲ್‌ಇಡಿ ಬಲ್ಬ್ಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ಮುಂದಿನ ತಿಂಗಳೊಳಗೆ ಬಹುತೇಕ ಕಚೇರಿಗಳಲ್ಲಿ ಎಲ್‌ಇಡಿ ಬಲ್ಬ್ ಅಳವಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲೆಲ್ಲಿ ಎಲ್‌ಇಡಿ ದೀಪ ಬಳಕೆ
ನಗರದಲ್ಲಿರುವ ಪ್ರಮುಖ ಸರಕಾರಿ ಕಚೇರಿಗಳಾದ ಪೊಲೀಸ್‌ ಕಮಿಷನರ್‌ ಕಚೇರಿ, ಎಸಿಪಿ ಕಚೇರಿ, ಬಂದರ್‌ ಪೊಲೀಸ್‌ ಠಾಣೆ, ಪ್ರಧಾನ ಅಂಚೆ ಕಚೇರಿ ಪಾಂಡೇಶ್ವರ, ಮೀನುಗಾರಿಕೆ ಅಭಿವೃದ್ಧಿ ನಿಗಮ, ಅಗ್ನಿಶಾಮಕ ದಳದ ಕಚೇರಿ ಪಾಂಡೇಶ್ವರ, ಟೆಲಿಕಾಂ ಕಚೇರಿ ಪಾಂಡೇಶ್ವರ, ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಪಾಂಡೇಶ್ವರ, ವಾಣಿಜ್ಯ ತೆರಿಗೆ ಕಚೇರಿ ಪಾಂಡೇಶ್ವರ, ಮಿನಿವಿಧಾನ ಸೌಧ, ಲೇಡಿಗೋಷನ್‌ ಆಸ್ಪತ್ರೆ, ಆರ್‌ಟಿಒ ಕಚೇರಿ, ವೆನಲಾಕ್ ಆಸ್ಪತ್ರೆ, ಪುರಭವನ, ಜಿಲ್ಲಾಧಿಕಾರಿ ಕಚೇರಿ, ಬಿಎಸ್‌ಎನ್‌ಎಲ್‌ ಟೆಲಿಫೋನ್‌ ಎಕ್ಸ್‌ಚೇಂಜ್‌ ಕಟ್ಟಡ, ಮೀನುಗಾರಿಕ ಇಲಾಖೆ ಬಂದರ್‌, ಲೋಕೋಪಯೋಗಿ ಇಲಾಖೆಯ ಉಪ ಕಚೇರಿ, ಜಿಯೋಲಾಜಿಕಲ್‌ ಸರ್ವೇ ಆಫ್‌ ಇಂಡಿಯಾ, ಹಳೆ ಬಂದರು ಕಚೇರಿ, ವೆಟ್‌ವೆಲ್‌ ಕಾಂಪೌಂಡ್‌ ಕುದ್ರೋಳಿ, ಅರ್ಬನ್‌ ಪ್ರೈಮರಿ ಹೆಲ್ತ್‌ ಸೆಂಟರ್‌ ಜಪ್ಪು, ಐಜಿಪಿ ಕಚೇರಿ, ಅತಿಥಿಗೃಹ, ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆ ಕಟ್ಟಡಗಳಲ್ಲಿ ಎಲ್‌ಇಡಿ ಬಲ್ಪ್ಗಳನ್ನು ಅಳವಡಿಸಲಾಗುತ್ತದೆ.

ಹಳೆ ದೀಪಗಳ ವಿಲೇವಾರಿ
ಸರಕಾರಿ ಕಚೇರಿಗಳಿಗೆ, ಬೀದಿ ದೀಪಗಳನ್ನು ಎಲ್‌ಇಡಿ ಗೆ ಪರಿವರ್ತಿಸುವ ಹಿನ್ನೆಲೆಯಲ್ಲಿ ಈ ಹಿಂದೆ ಬಳಸಲಾಗುತ್ತಿದ್ದ ದೀಪಗಳನ್ನು ಟೆಂಡರ್‌ ಮೂಲಕ ಇ-ವೇಸ್ಟ್‌ ಡಿಸ್‌ಪೋಸ್‌ ಮಾಡಲಾಗುತ್ತದೆ. ಇಂಧನ ಉಳಿಸುವ ನಿಟ್ಟಿನಲ್ಲಿ ದೀಪಗಳನ್ನು ಬದಲಾಯಿಸಿದರೂ ಈ ಹಿಂದೆ ಇದ್ದ ದೀಪಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕಾಗುತ್ತದೆ. ಆ ಕಾರಣಕ್ಕಾಗಿ ಟೆಂಡರ್‌ ಕರೆಯಲಾಗುತ್ತದೆ.

ಕಾಮಗಾರಿ ಆರಂಭವಾಗಿದೆ
ಕಡಿಮೆ ಇಂಧನ ವ್ಯಯಿಸುವ ಸಲುವಾಗಿ ಸರಕಾರಿ ಕಚೇರಿಗಳಿಗೆ ಎಲ್‌ಇಡಿ ಬಲ್ಬ್ಗಳನ್ನು ಅಳವಡಿಸುವ ಯೋಜನೆ ರೂಪಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿ ಕಚೇರಿ, ಬಿಎಸ್‌ಎನ್‌ಎಲ್‌ ಕಚೇರಿಯಲ್ಲಿ ಅಳವಡಿಕೆ ಕಾರ್ಯ ಆರಂಭವಾಗಿದೆ.
– ನಾರಾಯಣಪ್ಪ, ವ್ಯವಸ್ಥಾಪಕ ನಿರ್ದೇಶಕರು, ಸ್ಮಾರ್ಟ್‌ ಸಿಟಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.