ಎಡಪದವು ವಿಶೇಷ ಗ್ರಾಮಸಭೆ


Team Udayavani, Nov 17, 2017, 2:15 PM IST

17-Nov–8.jpg

ಎಡಪದವು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಸರಕಾರದ ಸವಲತ್ತು ತೆಗದುಕೊಂಡು ಅದಕ್ಕೆ ಫಲಕ ಹಾಕಲು ಕೆಲವರಿಗೆ ಮುಜುಗರವಾಗುತ್ತಿದೆ ಎಂದು ಯೋಜನೆಯ ತಾಲೂಕು ಸಂಯೋಜಕಿ ಪವಿತ್ರಾ ಹೇಳಿದರು.

ಅವರು ಗುರುವಾರ ಎಡಪದವು ಗ್ರಾ.ಪಂ. ಕಚೇರಿಯಲ್ಲಿ ಎಡಪದವು ಗ್ರಾ.ಪಂ.ನ 2017-18ನೇ ಸಾಲಿನ ದ್ವಿತೀಯ ಹಂತದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನಾ ವಿಶೇಷ ಗ್ರಾಮ ಸಭೆಯಲ್ಲಿ ಯೋಜನೆಯ ಬಗ್ಗೆ ಮಾತನಾಡಿದರು.

ಯೋಜನೆಯಡಿ ಪೂರ್ಣಗೊಂಡ 30 ಕಾಮಗಾರಿಯಲ್ಲಿ ಕೇವಲ 4 ಕಡೆಗಳಲ್ಲಿ ಮಾತ್ರ ನಾಮಫಲಕ ಹಾಕಿದ್ದಾರೆ. ಕೆಲವೆಡೆ ಮನೆಯಲ್ಲಿಟ್ಟಿದ್ದಾರೆ ಎಂದು ಸಂಯೋಜಕಿ ಪವಿತ್ರಾ ತಿಳಿಸಿದರು.

ಗ್ರಾಮ ಪಂಚಾಯತ್‌ನಲ್ಲಿ 6,248 ಜನಸಂಖ್ಯೆ ಇದ್ದು, 279 ಸಕ್ರಿಯ ಉದ್ಯೋಗ ಚೀಟನ್ನು ಹೊಂದಿದ್ದಾರೆ. 279 ಕುಟುಂಬ
ನೋಂದಣಿಯಾಗಿದ್ದು, 31 ಕಾಮಗಾರಿ ನಡೆದಿದೆ. ಇದರಲ್ಲಿ 30 ವೈಯಕ್ತಿಕ 1 ಸಾರ್ವಜನಿಕ ಕಾಮಗಾರಿಯಾಗಿದೆ. 7 ಕಾಮಗಾರಿಗಳು ಮುಕ್ತಾಯಗೊಂಡಿದೆ. 30 ಕಾಮಗಾರಿಗಳು ಉತ್ತಮ ರೀತಿಯಲ್ಲಿ ಕಡತ ನಿರ್ವಹಣೆ ಮಾಡಿವೆ. ಕ್ರಿಯಾ ಯೋಜನೆ ತಯಾರಿಗೆ ತಾಲೂಕಿನ ಅನುಮೋದನೆ ಆಗಿಲ್ಲ. ಬ್ರಿಂಡೇಲು ಎಂಬಲ್ಲಿ ದನಹಟ್ಟಿ ರಚನೆ ಸಮರ್ಪಕವಾಗಿಲ್ಲ ಎಂದರು.

ಎಂಜಿನಿಯರ್‌ ಜಯಪ್ರಸಾದ್‌ ಮಾತನಾಡಿ, ಇಂಗುಗುಂಡಿ, ಎರೆಹುಳ ಗೊಬ್ಬರ ತಯಾರಿ, ಹಟ್ಟಿ ರಚನೆ, ಸರಕಾರಿ ಬಾವಿ, ಕಾಂಕ್ರಿಟ್‌ ರಸ್ತೆ, ಕಾಂಪೌಂಡ್‌, ಅಂಗನವಾಡಿ, ಕಿಂಡಿ ಅಣೆಕಟ್ಟುಗಳನ್ನು ನರೇಗಾ ಯೋಜನೆಯಡಿ ಮಾಡಬಹುದು ಎಂದು ಮಾಹಿತಿ ನೀಡಿದರು.

ಕೃಷಿ ಹೊಂಡ ಮಹತ್ವ ನೀಡಿ
ಕೃಷಿ ಹೊಂಡಕ್ಕೆ ರೈತರು ಹೆಚ್ಚು ಮಹತ್ವ ನೀಡಬೇಕು ಎಂದು ಕೃಷಿ ಸಹಾಯಕ ಅಧಿಕಾರಿ ಎಸ್‌.ಕುಲಕರ್ಣಿ ಮಾಹಿತಿ ನೀಡಿದರು. ನೋಡಲ್‌ ಅಧಿಕಾರಿಯಾಗಿ ಆಗಮಿಸಿದ್ದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್‌ ಮಾತನಾಡಿ, ಸರಕಾರಿ ಯೋಜನೆಗಳನ್ನು ಸದುಪಯೋಗಿಸಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ ಮಾಲತಿ, ಈ ಯೋಜನೆಯಡಿಯಲ್ಲಿ ಸಾರ್ವಜನಿಕ ಕಾಮಗಾರಿಯ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕು ಇದರಿಂದ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದರು. ಗ್ರಾಮ ಸಂಪನ್ಮೂಲ ವ್ಯಕ್ತಿ ಉಷಾರಾಣಿ, ಗ್ರಾಮ ಪಂಚಾಯತ್‌ ಸದಸ್ಯ ಸುಕುಮಾರ್‌, ಎಪಿಎಂಸಿ ಸದಸ್ಯ ರುಕ್ಮಯ ನಾಯ್ಕ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್‌ ಆಭಿವೃದ್ಧಿ ಅಧಿಕಾರಿ ಭೋಗ ಮಲ್ಲಣ್ಣ ಸ್ವಾಗತಿಸಿದರು. ಗ್ರಾಮ ಸಂಪನ್ಮೂಲ ವ್ಯಕ್ತಿ ಸುನೀತಾ ನಿರೂಪಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.