ವಸತಿ ನಿಲಯಗಳು ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ: ಡಾ| ಎಚ್.ಆರ್. ತಿಮ್ಮಯ್ಯ
Team Udayavani, Feb 14, 2024, 11:08 PM IST
ಮಂಗಳೂರು: ಜಿಲ್ಲೆಯ ವಸತಿನಿಲಯಗಳಲ್ಲಿ ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ನಿಲಯಗಳ ಮುಖ್ಯಸ್ಥರು, ಬಿಸಿಯೂಟ ವಿತರಿಸುವ ಶಾಲೆಗಳು ಕಟ್ಟು ನಿಟ್ಟಾಗಿ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಬೇಕು. ಮಾರ್ಗಸೂಚಿ ಪಾಲಿಸದೇ ಇರುವುದು ಕಂಡು ಬಂದಲ್ಲಿ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್.ಆರ್. ತಿಮ್ಮಯ್ಯ ಹೇಳಿದರು.
ಮಂಗಳವಾರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ನಿಲಯ ಪಾಲಕರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಆಹಾರ, ನೀರಿನ ಸುರಕ್ಷತೆ ಬಗ್ಗೆ ಸುಮಾರು 25 ನಿಯಮಗಳನ್ನು ಸಿದ್ಧಪಡಿಸಿ ವಿತರಿಸಲಾಗಿದೆ. ಅವುಗಳು ಚಾಚು ತಪ್ಪದೆ ಪಾಲನೆಯಾಗಬೇಕು. ಪ್ರತೀ ಸಂಸ್ಥೆಯಲ್ಲೂ ಆಹಾರ ಭದ್ರತಾ ಸಮಿತಿ ರಚಿಸಬೇಕು. ಅದರಲ್ಲಿ ವಿದ್ಯಾರ್ಥಿಗಳನ್ನು ಸೇರಿಕೊಂಡು, ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಸಭೆ ನಡೆಸಿದ ಹಾಗೂ ಕೈಗೊಂಡ ಕ್ರಮದ ಫೋಟೋ ಸಹಿತ ವರದಿಯನ್ನು ಪ್ರತೀ ತಿಂಗಳು ಇಲಾಖೆಗೆ ನೀಡಬೇಕು ಎಂದರು.
ಆರೋಗ್ಯ ಇಲಾಖೆಯ ಮೂಲಕ ಸಿಬಂದಿಗಳ ತಂಡ ರಚಿಸಿ ತಿಂಗಳಿಗೆ ಒಂದು ಬಾರಿ ಪರಿಶೀಲನೆ ನಡೆಯಲಿದೆ. ಈ ವೇಳೆ ನಿಯಮ ಉಲ್ಲಂಘಿಸಿದ್ದು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ಮಂಗಳೂರು ನಗರದಲ್ಲಿ ಅನೇಕ ಪೇಯಿಂಗ್ ಗೆಸ್ಟ್ಗಳಿದ್ದು ಅವುಗಳನ್ನು ನೋಂದಣಿ ಮಾಡಬೇಕು. ಈ ನಿಟ್ಟಿನಲ್ಲಿ ನಗರದ ಎಲ್ಲಾ ಪಿಜಿ ಮಾಲಕರೊಂದಿಗೆ ಶೀಘ್ರವೇ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’
Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ
Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ