ಕಾನೂನು ರಕ್ಷಣೆಯಾಗಬೇಕು; ಉರುಳಾಗಬಾರದು!


Team Udayavani, Apr 13, 2018, 1:19 PM IST

13-April-14.jpg

ಚುನಾವಣೆಯ (ಮೇ 12) ಪೂರ್ವಭಾವಿಯಾಗಿ ಅತ್ಯಂತ ಸುದ್ದಿಯ ಸದ್ದನ್ನು ಉಂಟು ಮಾಡಿದೆ. ಭಾರತೀಯ ಚುನಾವಣಾ ಆಯೋಗದ ನಿಯಮಗಳಿಗೆ ಅನುಸಾರವಾಗಿ ರಾಜ್ಯ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಮೇಲ್ನೋಟಕ್ಕೆ ಹೇಳಬಹುದು. ಆದರೆ ಇದು ಈಗಾಗಲೇ ಅನೇಕಾನೇಕ ವಿರೋಧಾಭಾಸಗಳನ್ನು ಉಂಟು ಮಾಡಿದೆ.

ಚುನಾವಣೆಯ ಅಧಿಕೃತ ಘೋಷಣೆಯಾದ ಕೂಡಲೇ ಈ ನಿಯಮಗಳು ಅನುಷ್ಠಾನಗೊಳ್ಳುತ್ತವೆ. ಆದರೆ ದೈನಂದಿನ ಜೀವನಕ್ಕೆ ಅಡೆತಡೆ ಉಂಟಾಗುವಂತೆ ಈ ಹಿಂದೆಂದೂ (ಈ ಕ್ರಮಗಳ ಅನುಷ್ಠಾನದ ರೂವಾರಿಯಾಗಿದ್ದ ಟಿ. ಎನ್‌. ಶೇಷನ್‌ ಅವರು ಭಾರತದ ಮುಖ್ಯ ಚುನಾವಣಾಧಿಕಾರಿ ಆಗಿದ್ದಾಗಲೂ ಕೂಡ) ಅನುಷ್ಠಾನದ ಪ್ರಭಾವವಿರಲಿಲ್ಲ. ಮದುವೆ ಇತ್ಯಾದಿ ಶುಭ ಕಾರ್ಯಗಳಿಗೂ ಚುನಾವಣಾ ಕಾನೂನಿಗೂ ಏನು ಸಂಬಂಧ?

ಅನುಷ್ಠಾನದ ಅಧಿಕಾರಿಗಳು ಒಂದಿಷ್ಟು ‘ಅತ್ಯುತ್ಸಾಹ’ ತೋರಿದ್ದಾರೆ ಮತ್ತು ಅನುಷ್ಠಾನವನ್ನು ಸಮರ್ಪಕವಾಗಿ ವ್ಯಾಖ್ಯಾನಿಸಿಲ್ಲ ಎಂಬುದು ಸಾರ್ವಜನಿಕರ ಮತ್ತು ರಾಜಕೀಯ ರಂಗದಲ್ಲಿ ಇರುವವರ ಕಳವಳದ ಸಾರಾಂಶ. ಇದರ ಬಿಸಿ ಕರ್ನಾಟಕದ ಮುಖ್ಯಮಂತ್ರಿ- ಮಾಜಿ ಮುಖ್ಯಮಂತ್ರಿಗಳಿಗೂ ತಟ್ಟಿದೆ; ಅವರು ಸಿಡಿಮಿಡಿಗೊಂಡಿದ್ದಾರೆ ಎಂಬುದು ಇದಕ್ಕೆ ಸಾಕ್ಷಿ. ಕಾಫಿ ತಿಂಡಿ ವಿತರಿಸಬಾರದು, ತಂಪು ನೀರು ಕೊಡಬಾರದು ಎಂಬಷ್ಟರ ಮಟ್ಟಿಗೂ ಅಧಿಕಾರಿಗಳು ತಮ್ಮ ಅಧಿಕಾರವನ್ನು ತೋರ್ಪಡಿಸುತ್ತಿದ್ದಾರೆ. ಸಾರ್ವಜನಿಕ ಸಭೆ ಸಮಾರಂಭಗಳಿಗೆ ಅನುಮತಿಯನ್ನು ಪಡೆದಿದ್ದರೂ ಅಲ್ಲಿ ಮಧ್ಯ ಪ್ರವೇಶಿಸಿದ್ದಾರೆ. ಒಂದೆಡೆ ಮತದಾರರು ಸಕ್ರಿಯವಾಗಿ ಒಳಗೊಳ್ಳುವ ಆಶಯದ ಸ್ವೀಪ್‌ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದರೆ, ಇನ್ನೊಂದೆಡೆ ಚುನಾವಣಾ ಪ್ರಕ್ರಿಯೆ ಒಂದು ರೀತಿಯಲ್ಲಿ ಯುದ್ಧದ ಅಥವಾ ತುರ್ತು ಪರಿಸ್ಥಿತಿಯ ಅಥವಾ ಕರ್ಫ್ಯೂ ನೆನಪಿಸುವ ರೀತಿಯಲ್ಲಿದೆ ಎಂಬ ಆಕ್ಷೇಪಗಳು ಮಾಧ್ಯಮ ಕಚೇರಿಗೆ ಬರುತ್ತಿವೆ.

ಬಿಜೆಪಿಯ ರಾಷ್ಟ್ರೀಯ ಪ್ರಮುಖರ ನಿಯೋಗ ಈಗಾಗಲೇ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಿದೆ. ‘ಪ್ರಚಾರ ಕಾರ್ಯಕ್ಕೆ ಅಧಿಕಾರಿಗಳಿಂದ ಉಂಟಾಗಿರುವ ಅಡ್ಡಿ ಆತಂಕಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದೆ.

ದ. ಕನ್ನಡ- ಉಡುಪಿ ಜಿಲ್ಲೆಗಳಲ್ಲಿಯೂ ಅಸಮಾಧಾನದ ಸ್ವರ ಕೇಳಿಸುತ್ತಿದೆ. ಕಾನೂನು ಪಾಲನೆಯಲ್ಲಿ ಮುಂಚೂಣಿಯಲ್ಲಿರುವ ಜಿಲ್ಲೆ ಇದು. ಇಲ್ಲಿ ಕೂಡ ಈ ಸಮಸ್ಯೆ ಕಾಡಿದೆ ಎಂದರೆ… ಕಾನೂನು ಪಾಲನೆಯಾಗಬೇಕೇ ಹೊರತು ಉರುಳಾಗಬಾರದು. ಇಲ್ಲಿನ ದೇವಾಲಯಗಳ ಸಹಿತ ಧಾರ್ಮಿಕ ಕೇಂದ್ರಗಳಲ್ಲಿಯೂ ಪೊಲೀಸರು ಕಣ್ಗಾವಲು ಇರಿಸಿದ್ದಾರೆ. ರಾಜಕೀಯ ಉದ್ದೇಶದ ಸಭೆಗಳನ್ನು ಇಲ್ಲಿ ಯಾರಾದರೂ ನಡೆಸಬಹುದು ಎಂಬುದು ಅವರ ಶಂಕೆ. ಈ ಹಿಂದಿನ ಯಾವ ಚುನಾವಣೆಯಲ್ಲೂ ಇಂತಹ ಪರಿಸ್ಥಿತಿ ಬಂದಿರಲಿಲ್ಲ.

 ಮನೋಹರ ಪ್ರಸಾದ್‌

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.