ಸಂಪರ್ಕ ಕಡಿತ: ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆ ಇಳಿಕೆ


Team Udayavani, Aug 22, 2018, 4:15 AM IST

dharmasthala-22-8.jpg

ಬೆಳ್ತಂಗಡಿ/ ಸುಬ್ರಹ್ಮಣ್ಯ/ಕೊಲ್ಲೂರು: ರಾಜ್ಯದ ಬಹುತೇಕ ಜಿಲ್ಲೆಗಳಿಂದ ಕರಾವಳಿ ಜಿಲ್ಲೆ ಸಂಪರ್ಕಿಸುವ ಇಲ್ಲಿನ ಘಾಟಿ ರಸ್ತೆಗಳು ಭಾರೀ ಮಳೆಗೆ ತುತ್ತಾಗಿ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ಕರಾವಳಿಯ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ವಾರದ ಎಲ್ಲ ದಿನಗಳಲ್ಲೂ ಭಕ್ತರಿಂದ ತುಂಬಿ ತುಳುಕುವ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಮೊದಲಾದ ದೇವಸ್ಥಾನಗಳು ಈಗ ಖಾಲಿ ಖಾಲಿಯಾಗಿವೆ. ಭಕ್ತರ ಸಂಖ್ಯೆ ಕಡಿಮೆ ಇರುವುದರಿಂದ ದೇವರ ದರ್ಶನವೂ ಬೇಗ ಸಿಗುತ್ತಿದೆ. ಸ್ಥಳೀಯ ಭಕ್ತರಷ್ಟೇ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದಾರೆ. ಮೈಸೂರು-ಮಡಿಕೇರಿ ಭಾಗದಿಂದ ಸಂಪರ್ಕ ಕಲ್ಪಿಸುವ ಸಂಪಾಜೆ ಘಾಟಿ ರಸ್ತೆ ಪೂರ್ಣ ಕುಸಿದಿದ್ದು, ಶಿರಾಡಿ ರಸ್ತೆಯಲ್ಲೂ ಸಂಚಾರ ನಿಷೇಧವಿದೆ. ಸದ್ಯಕ್ಕೆ ಚಾರ್ಮಾಡಿ ರಸ್ತೆ ಮಾತ್ರ ತೆರೆದಿದೆ. ಭೂಕುಸಿತ, ಟ್ರಾಫಿಕ್‌ ಜಾಮ್‌, ಸುತ್ತು ಬಳಸು ದಾರಿ ಇತ್ಯಾದಿ ಕಾರಣಗಳಿಂದ ಯಾತ್ರಿಕರು ಕರಾವಳಿಯತ್ತ ಬರಲು ಹಿಂಜರಿಯುತ್ತಿದ್ದಾರೆ.

ಗಣನೀಯ ಇಳಿಕೆ
ಧರ್ಮಸ್ಥಳ ಕ್ಷೇತ್ರದ ಮೂಲಗಳ ಪ್ರಕಾರ ಕ್ಷೇತ್ರಕ್ಕೆ ಈ ಅವಧಿಯಲ್ಲಿ ನಿತ್ಯ 8ರಿಂದ 9 ಸಾವಿರ ಭಕ್ತರು ಆಗಮಿಸುತ್ತಾರೆ. ಸೋಮವಾರ ಮತ್ತು ವಿಶೇಷ ದಿನಗಳಲ್ಲಿ ಭಕ್ತರ ಸಂಖ್ಯೆ 15 ಸಾವಿರ ದಾಟುತ್ತದೆ. ಆದರೆ ಪ್ರಸ್ತುತ ಒಂದರಿಂದ ಎರಡು ಸಾವಿರ ಭಕ್ತರು ಆಗಮಿಸುತ್ತಿದ್ದು, ಸೋಮವಾರ ಸುಮಾರು 5 ಸಾವಿರ ಭಕ್ತರು ಆಗಮಿಸಿದ್ದರು.
ಕೇರಳದಲ್ಲಿ ಭಾರೀ ಜಲಪ್ರಳಯ ಸಂಭವಿಸಿರುವುದರಿಂದ ಅಲ್ಲಿನ ಭಕ್ತರೇ ಹೆಚ್ಚಾಗಿ ಬರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲೂ ಭಕ್ತರ ಸಂಖ್ಯೆ ಬಹಳಷ್ಟು ವಿರಳವಾಗಿದೆ ಎಂದು ದೇಗುಲ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಶೆಟ್ಟಿ ತಿಳಿಸಿದ್ದಾರೆ.

ಕುಕ್ಕೆ ಕ್ಷೇತ್ರ ಖಾಲಿ ಖಾಲಿ

ಭಕ್ತರಿಂದ ತುಂಬಿರುತ್ತಿದ್ದ ಕುಕ್ಕೆಯಲ್ಲೀಗ ಜನಜಂಗುಳಿಯಿಲ್ಲ. ಮಂಗಳವಾರ ದೇಗುಲದಲ್ಲಿ 47 ಸರ್ಪಸಂಸ್ಕಾರ, 2 ತುಲಾಭಾರ, 98 ಆಶ್ಲೇಷಾ ಬಲಿ, 15 ನಾಗಪ್ರತಿಷ್ಠೆ, 11 ಮಹಾಪೂಜೆ, 21 ಪಂಚಾಮೃತಾಭಿಷೇಕ, 53 ಕಾರ್ತಿಕೇಯ ಹಾಗೂ 79 ಶೇಷಸೇವೆಗಳು ನಡೆದಿವೆ. ಅನ್ನದಾನ ಸೇವೆಗೆ ಕೇವಲ 15 ಸಾವಿರ ರೂ. ಪಾವತಿಯಾಗಿದೆ. ಉಳಿದ ದಿನಗಳಿಗೆ ಹೋಲಿಸಿದರೆ ಸೇವೆಗಳ ಸಂಖ್ಯೆಯಲ್ಲಿ ಶೇ. 80ರಷ್ಟು ಕುಸಿತವಾಗಿದೆ.

ಸೀಯಾಳಾಭಿಷೇಕ
ಮಳೆ ಕಡಿಮೆಯಾಗಿ, ಸುಖ- ಶಾಂತಿ ಸಿಗಲೆಂದು ಪ್ರಾರ್ಥಿಸಿ, ಕುಕ್ಕೆ ಸುಬ್ರಹ್ಮಣ್ಯ ದೇವರ ಸಾನ್ನಿಧ್ಯದಲ್ಲಿ ಮಂಗಳವಾರ ಪ್ರಾತಃಕಾಲ 108 ಸೀಯಾಳಾಭಿಷೇಕ ಸೇವೆ ನಡೆಸಲಾಯಿತು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.