ಕರಾವಳಿಯಲ್ಲಿ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ
Team Udayavani, Aug 5, 2018, 11:00 AM IST
ಮಹಾನಗರ : ಕರಾವಳಿಯ ಉಭಯ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಹವಾಮಾನ ಇಲಾಖೆಯ ಅಂಕಿ ಅಂಶದ ಪ್ರಕಾರ ಜುಲೈ ತಿಂಗಳಿನಲ್ಲಿ ದ.ಕ. ಜಿಲ್ಲೆಯ ಮಂಗಳೂರು ತಾಲೂಕು ಮತ್ತು ಬಂಟ್ವಾಳ ತಾಲೂಕಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ ಮಳೆಗೆ ಹೋಲಿಕೆ ಮಾಡಿದರೆ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.
ಜುಲೈ ತಿಂಗಳಿನಲ್ಲಿ ಮಂಗಳೂರು ತಾಲೂಕಿನಲ್ಲಿ 1101.0 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. 840.4 ಮಿ.ಮೀ. ಮಳೆಯಾಗಿದೆ. ಅದೇರೀತಿ ಬಂಟ್ವಾಳ ತಾಲೂಕಿನಲ್ಲಿ 1203.0 ವಾಡಿಕೆ ಮಳೆಯಾಗಬೇಕಿತ್ತು. ಆದರೆ 1104.0 ಮಿ.ಮೀ. ಮಾತ್ರ ಮಳೆಯಾಗಿದೆ. ಒಟ್ಟಾರೆ ದ.ಕ. ಜಿಲ್ಲೆಯಲ್ಲಿ 1,217.0 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 1,249.0 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಕೊಂಚ ಹೆಚ್ಚು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ 1381.3 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 1,211.1 ಮಿ.ಮೀ. ಸರಾಸರಿ ಮಳೆಯಾಗಿದೆ.
ಜೂನ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ
ಜೂನ್ ತಿಂಗಳಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 977 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 1,397.0 ಮಿ.ಮೀ, ಮಳೆಯಾಗಿದೆ. ಮಂಗಳೂರು ತಾಲೂಕಿನಲ್ಲಿ 980.0 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 1195.0 ಮಿ.ಮೀ. ಮಳೆಯಾಗಿದೆ. ಪುತ್ತೂರು ತಾಲೂಕಿನಲ್ಲಿ 959 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 1186.2 ಮಿ.ಮೀ. ಮಳೆಯಾಗಿದೆ. ಬಂಟ್ವಾಳ ತಾಲೂಕಿನಲ್ಲಿ 990 ವಾಡಿಕೆ ಮಳೆಯಾಗಬೇಕು. ಆದರೆ 1,298.4 ಮಿ.ಮೀ. ಮಳೆಯಾಗಿದೆ. ಸುಳ್ಯ ತಾಲೂಕಿನಲ್ಲಿ 803 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 1,223.6 ಮಿ.ಮೀ., ಮಳೆಯಾಗಿದೆ. ಇದರೊಂದಿಗೆ ಜೂನ್ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ
ನಾಲ್ಕು ವರ್ಷ ವಾಡಿಕೆಗಿಂತ ಕಡಿಮೆ ಮಳೆ
ಹವಾಮಾನ ಇಲಾಖೆಯ ಅಂಕಿ-ಅಂಶ ಅವಲೋಕಿಸಿದರೆ, ಕರಾವಳಿ ಪ್ರದೇಶದಲ್ಲಿ 2013ರಿಂದ 2017ರ ಅವಧಿಯಲ್ಲಿ 2013 ಹೊರತುಪಡಿಸಿ ಉಳಿದ ನಾಲ್ಕು ಮಳೆಗಾಲದಲ್ಲಿಯೂ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಸಾಮಾನ್ಯವಾಗಿ ಮುಂಗಾರು ಋತುವಿನಲ್ಲಿ ಕರಾವಳಿ ಪ್ರದೇಶದಲ್ಲಿ 3,019 ಮಿ.ಮೀ. ವಾಡಿಕೆ ಮಳೆಯಾಗಬೇಕು. 2013ರಲ್ಲಿ 3206 ಮಿ.ಮೀ. ಮಳೆಯಾಗಿತ್ತು. ಆದರೆ 2014ರಲ್ಲಿ 2087 ಮಿ.ಮೀ. ಮಳೆಯಾಗಿದ್ದು, 2015ರಲ್ಲಿ 2,241 ಮಿ.ಮೀ. ಮಳೆಯಾಗಿದೆ. ಹಾಗೆಯೇ 2016ರಲ್ಲಿ 2,403 ಮಿ.ಮೀ. ಮಳೆಯಾಗಿದ್ದು ಮತ್ತು 2017ರಲ್ಲಿ 2579 ಮಿ.ಮೀ. ಮಳೆಯಾಗಿದೆ.
ಉತ್ತಮ ಮಳೆಯಾಗುವ ನಿರೀಕ್ಷೆ
ಕರಾವಳಿ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಪ್ರಮಾಣ ಇಳಿಕೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂಗಾರು ಸ್ವಲ್ಪ ಪ್ರಮಾಣದಲ್ಲಿ ಕ್ಷೀಣಿಸಿತ್ತು. ಮುಂದಿನ ಎರಡು ದಿನಗಳಿಂದ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
– ಶ್ರೀನಿವಾಸ ರೆಡ್ಡಿ,ರಾಜ್ಯ ನೈಸರ್ಗಿಕ ವಿಕೋಪ
ಉಸ್ತುವಾರಿ ಕೇಂದ್ರದ ನಿರ್ದೇಶಕ
ವಿಶೇಷ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ