ಪ್ರತಿಯೊಂದು ಮಗುವು ಸಮಾಜಮುಖಿಯಾಗಲಿ: ದಿವ್ಯಜ್ಯೋತಿ


Team Udayavani, Oct 23, 2019, 5:07 AM IST

t-9

ಮಕ್ಕಳ ಹಕ್ಕುಗಳ ಸಂಸತ್ತು-2019 ಅನ್ನು ಉದ್ಘಾಟಿಸಲಾಯಿತು.

ಬೆಳ್ತಂಗಡಿ: ಶಿಕ್ಷಣ ವ್ಯವಸ್ಥೆಯಲ್ಲಿ ಪ್ರತಿಯೊಂದು ಮಗುವನ್ನು ಸಮಾಜ ಮುಖೀಯಾಗಿಸುವ ದೃಷ್ಟಿಯಿಂದ ಮಕ್ಕಳ ಹಕ್ಕುಗಳ ಸಂಸತ್ತನ್ನು ಪ್ರತಿ ಶಾಲೆಯಲ್ಲೂ ನಿರಂತರವಾಗಿ ನಡೆಸಬೇಕು ಎಂದು ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ ಹೇಳಿದರು.

ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದ.ಕ., ಶಿಕ್ಷಣ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ, ಪಡಿ-ಮಂಗಳೂರು ಸಹಯೋಗದಲ್ಲಿ ಬೆಳ್ತಂಗಡಿ ಎಸ್‌.ಡಿ.ಸಿ.ಸಿ. ಬ್ಯಾಂಕಿನ ಉತ್ಕೃಷ್ಟ ಸಭಾಂಗಣದಲ್ಲಿ ಮಂಗಳವಾರ ಜರಗಿದ ಮಕ್ಕಳ ಹಕ್ಕುಗಳ ಸಂಸತ್ತು-2019 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಚಿಂತನ ಶಕ್ತಿ ಬೆಳೆಸುವಲ್ಲಿ ಶಿಕ್ಷಕರು ಮಹತ್ತರ ಪಾತ್ರ ವಹಿಸಬೇಕು. ಮಕ್ಕಳ ಪ್ರಶ್ನೆಗೆ ಪರಿಹಾರ ಕೊಡಿಸುವಲ್ಲಿ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ ಮಾತನಾಡಿ, ಆಧುನಿಕ ಶಿಕ್ಷಣದಲ್ಲಿ ಗುಡಿ ಕೈಗಾರಿಕೆ, ಹೈನುಗಾರಿಕೆ, ಕೃಷಿ ಚಟುವಟಿಕೆ ಯುಳ್ಳ ಶಿಕ್ಷಣ ನೀಡಿದಾಗ ವಿದ್ಯಾರ್ಥಿಗಳು ಸಂಸ್ಕಾರ ಭರಿತರಾಗಲು ಸಾಧ್ಯ ಎಂದರು.

ಬೆಳ್ತಂಗಡಿ ಶಿಕ್ಷಣ ಸಂಪನ್ಮೂಲ ಕೇಂದ್ರ ಅಧ್ಯಕ್ಷ ಝಕ್ರಿಯಾ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಚೈಲ್ಡ್‌ಲೈನ್‌ನ ಸಂಯೋಜಕ ದೀಕ್ಷಿತ್‌ ಅಚಪ್ಪಾಡಿ ಮಾಹಿತಿ ನೀಡಿದರು. ಪಡಿ-ಮಂಗಳೂರು ಇದರ ತರಬೇತಿ ಸಂಯೋಜಕಿ ಕಸ್ತೂರಿ ಬೊಳ್ವಾರ್‌ ಸಂಪ ನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.

ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಝಕೀರ್‌ ಹುಸೇನ್‌ ಪ್ರಸ್ತಾವಿಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ತಾ| ಪ್ರಧಾನ ಕಾರ್ಯದರ್ಶಿ ವಾಲ್ಟರ್‌ ಪಿಂಟೋ ಉಪಸ್ಥಿತರಿದ್ದರು.

ಶಿಕ್ಷಣ ಸಂಪನ್ಮೂಲ ಕೇಂದ್ರದ ಜತೆ ಕಾರ್ಯದರ್ಶಿ ಸಿ.ಕೆ. ಚಂದ್ರಕಲಾ ಸ್ವಾಗತಿಸಿ, ಕೇಂದ್ರದ ಸದಸ್ಯೆಯರಾದ ಸುಧಾಮಣಿ ಆರ್‌. ನಿರೂಪಿಸಿ, ಮಲ್ಲಿಕಾ ವಂದಿಸಿದರು. ತಾ|ನ ವಿವಿಧ ಶಾಲೆ ಗಳಿಂದ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.

ಮುಖಾಮುಖಿ ಸಂವಾದ
ಶಾಲೆಗಳಿಗೆ ಕಟ್ಟಡಗಳ ಬೇಡಿಕೆ ಶೌಚಾಲಯ, ಕಂಪೌಂಡ್‌, ಶಿಕ್ಷಕರ ಬೇಡಿಕೆ, ಸರಕಾರಿ ಬಸ್‌ಗಳ ವ್ಯವಸ್ಥೆ, ಕಂಪ್ಯೂಟರ್‌, ಪಠ್ಯಪುಸ್ತಕ, ಸಮವಸ್ತ್ರ ಸಹಿತ ಸಮಸ್ಯೆಗಳ ಪಟ್ಟಿಯನ್ನು ಸಂವಾದದಲ್ಲಿ ಅಧಿಕಾರಿಗಳ ಮುಂದೆ ಮಕ್ಕಳು ತೆರೆದಿಟ್ಟರು.

ಉಜಿರೆ ಎಸ್‌ಡಿಎಂ ಅನುದಾನಿತ ಶಾಲಾ ಬಳಿ ತೆರೆದ ಚರಂಡಿ ಇದ್ದು, ಅದನ್ನು ಮುಚ್ಚಬೇಕು ಎಂದು ಅವನೀಶ್‌ ಮನವಿ ಮಾಡಿದರು. ಶಾಲಾ ಬಳಿ ರಸ್ತೆಗೆ ಬ್ಯಾರಿಕೇಡ್‌ ವ್ಯವಸ್ಥೆ ಮಾಡಿ ಎಂದು ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾರಾವಿಯ ನವನೀತ್‌ ಆಗ್ರಹಿಸಿದರು.

ತೋಟತ್ತಾಡಿ, ಪಡ್ಲಾಡಿ ಲಾೖಲ ಶಾಲೆ ಗಳಲ್ಲಿ ನೀರಿನ ಸಮಸ್ಯೆ, ಕೊರಂಜ, ನಡ, ಕರಾಯ, ಪೆರ್ಲಬೈಪಾಡಿ, ಮಾದರಿ ಶಾಲೆ ಬೆಳ್ತಂಗಡಿ ಸ.ಹಿ.ಪ್ರಾ. ಶಾಲೆ ಮುಗುಳಿ ಶಾಲೆಗಳಲ್ಲಿ ಕಟ್ಟಡದ ಸಮಸ್ಯೆ ಇರುವ ಬಗ್ಗೆ ವಿದ್ಯಾರ್ಥಿಗಳು ಗಮನಕ್ಕೆ ತಂದರು.

ನಡ ಶಾಲೆಯಲ್ಲಿ ಬೆಂಚು-ಡೆಸ್ಕ್ ಕೊರತೆ ಬಗ್ಗೆ ರಕ್ಷಿತ್‌ ಗಮನಕ್ಕೆ ತಂದರು. ಶಾಲಾ ಹತ್ತಿರದ ಹುಲ್ಲು ತೆರವಿಗೆ ಕೊಯ್ಯೂರು ದೇವಸ್ಥಾನ ಶಾಲಾ ವಿದ್ಯಾರ್ಥಿನಿ ನಿಶ್ಮಿತಾ ಗಮನಕ್ಕೆ ತಂದರು. ಸರಕಾರಿ ಹಿ.ಪ್ರಾ. ಶಾಲೆ ಮುಗುಳಿಯಲ್ಲಿ ಶೌಚಾಲಯ ಬಳಕೆಗೆ ಅಯೋಗ್ಯವಾಗಿದೆ. ಕೂಡಲೇ ಬದಲಿ ವ್ಯವಸ್ಥೆ ಮಾಡಬೇಕು ಎಂದು ಸುದೇಶ್‌ ಆಗ್ರಹಿಸಿದರು. ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ ಅವರು ಪ್ರತಿಕ್ರಿಯಿಸಿ, ಸ್ಥಳೀಯ ಗ್ರಾ.ಪಂ.ಗಳ ಮೂಲಕ ನೀರಿನ ಬೇಡಿಕೆ ಈಡೇರಿಸಲು ಪ್ರಯತ್ನಿಸಲಾಗುವುದು ಎಂದರು.

ಸಂವಾದದಲ್ಲಿ ತಾ| ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಝಕ್ರಿಯ, ಮಂಗಳೂರು ಚೈಲ್ಡ್‌ಲೈನ್‌ನ ಸಂಯೋಜಕ ದೀಕ್ಷಿತ್‌ ಅಚಪ್ಪಾಡಿ, ಮಂಗಳೂರು – ಪಡಿ ಸಂಸ್ಥೆಯ ತರಬೇತಿ ಸಂಯೋಜಕಿ ಕಸ್ತೂರಿ ಬೊಳ್ವಾರ್‌, ತಾ| ಸಮಾಜ ಕಲ್ಯಾಣ ಇಲಾಖೆಯ ಧೀರಜ್‌, ಅಬಕಾರಿ ನಿರೀಕ್ಷಕಿ ಸೌಮ್ಯಲತಾ, ಪಂಚಾಯತ್‌ರಾಜ್‌ ಎಂಜಿ ನಿಯರಿಂಗ್‌ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತ ಚೆನ್ನಪ್ಪ ಮೊಲಿ, ನೀರಾವರಿ ಇಲಾಖೆಯ ಎಂಜಿನಿಯರ್‌ ಮಹಮ್ಮದ್‌ ಹನೀಫ್‌, ಶಿಕ್ಷಣ ಸಂಪನ್ಮೂಲ ಕೇಂದ್ರದ ಸುಧಾ ರಮಾನಂದ್‌, ರಘು ಉಪಸ್ಥಿತರಿದ್ದರು. ಝಾಕಿರ್‌ ಹುಸೀಬ್‌ ಕಾರ್ಯಕ್ರಮ ನಿರೂಪಿಸಿದರು.

ಸಂವಾದದಲ್ಲಿ ಸಮಸ್ಯೆಗಳ ಪಟ್ಟಿ ತೆರೆದಿಟ್ಟ ಮಕ್ಕಳು
ಸರಕಾರಿ ಬಸ್‌ ಸರಕಾರಿ ಬಸ್‌ಗಳ ಕೊರತೆಯಿದ್ದು, ತತ್‌ಕ್ಷಣ ಹೆಚ್ಚುವರಿ ಸರಕಾರಿ ಬಸ್‌ ನೀಡಿ ಎಂದು ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅವನಿ ಹೆಬ್ಟಾರ್‌ ಆಗ್ರಹಿಸಿದರು. ಈ ಬಗ್ಗೆ ತಾ.ಪಂ. ಸಾಮಾನ್ಯ ಸಭೆಯಲ್ಲಿ ಪ್ರಸ್ತಾವಿಸಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ ಹೇಳಿದರು.

ಮುಖ್ಯ ಶಿಕ್ಷಕರ ನೇಮಕ
ನಮ್ಮ ಶಾಲೆಯಲ್ಲಿ ಮುಖ್ಯ ಶಿಕ್ಷಕರಿಲ್ಲದೆ ಸಮಸ್ಯೆಯಾಗಿದೆ. ಕೂಡಲೇ ನೇಮಿಸುವಂತೆ ತೋಟತ್ತಾಡಿ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ನಿತಿನ್‌ ಮನವಿ ಮಾಡಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಸಂಯೋಜಕ ಸುಭಾಷ್‌ ಜಾದವ್‌ ಉತ್ತರಿಸಿ, ತಾ|ಗೆ 882 ಮುಖ್ಯ ಶಿಕ್ಷಕರ ಹುದ್ದೆ ಮಂಜೂರಾಗಿದ್ದು, ಇದರಲ್ಲಿ 791 ಹುದ್ದೆ ಭರ್ತಿ ಇದೆ. ಉಳಿದ ಹುದ್ದೆ ಖಾಲಿ ಇದ್ದು, ಕೌನ್ಸೆ‌ಲಿಂಗ್‌ ನಡೆಯುತ್ತಿದೆ. ಶೀಘ್ರ ಭರ್ತಿ ಮಾಡುವುದಾಗಿ ತಿಳಿಸಿದರು.

ಸವಿಗನ್ನಡ ಪಠ್ಯಪುಸ್ತಕ
ನಮ್ಮ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭವಾಗಿದೆ ಇದುವರೆಗೆ ಸವಿಗನ್ನಡ ಪಠ್ಯಪುಸ್ತಕ ಸಿಗಲಿಲ್ಲ, ತತ್‌ಕ್ಷಣ ವಿತರಿಸುವಂತೆ ನಾವೂರಿನ ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿ ಸಿಂಚನ್‌ ಮನವಿ ಮಾಡಿದರು. ಬಂದ ತತ್‌ಕ್ಷಣ ನೀಡಲಾಗುವುದು ಎಂದು ಶಿಕ್ಷಣ ಸಂಯೋಜಕರು ತಿಳಿಸಿದರು.

ಕಂಪ್ಯೂಟರ್‌ ವ್ಯವಸ್ಥೆ ಬದನಾಜೆ, ಮೆಲಂತಬೆಟ್ಟು, ನಡ, ಗೋವಿಂದೂರು ಶಾಲೆ ಗಳಲ್ಲಿ ಕಂಪ್ಯೂಟರ್‌ ವ್ಯವಸ್ಥೆಗೆ ವಿದ್ಯಾರ್ಥಿಗಳು ಆಗ್ರಹಿಸಿದರು. ಶಿಕ್ಷಣ ಸಂಯೋಜಕ ಸುಭಾಷ್‌ ಜಾದವ್‌ ಉತ್ತರಿಸಿ, ವಿದ್ಯಾರ್ಥಿಗಳ ಅನುಪಾತ ನೋಡಿ ಸರಕಾರದಿಂದ ಕಂಪ್ಯೂಟರ್‌ ನೀಡಲಾಗುತ್ತಿದೆ. ಕಡಿಮೆ ಮಕ್ಕಳಿದ್ದರೆ ಸ್ಥಳೀಯ ದಾನಿಗಳ ನೆರವಿನಿಂದ
ಕಂಪ್ಯೂಟರ್‌ ವ್ಯವಸ್ಥೆ ಮಾಡಿ ಕೊಂಡರೆ ಉತ್ತಮ ಎಂದರು.

ಕಳಪೆ ಸೈಕಲ್‌ ವಿತರಣೆ ಕರ್ನೋಡಿ ಸ.ಹಿ.ಪ್ರಾ. ಶಾಲೆಗೆ ಬಂದ ಸೈಕಲ್‌ ಕಳಪೆ ಗುಣಮಟ್ಟದ್ದಾಗಿದೆ ಎಂದು ವಿದ್ಯಾರ್ಥಿನಿ ನಂದಿನಿ ತಿಳಿಸಿದರು. ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ ಉತ್ತರಿಸಿ, ಕಳಪೆ ಸೈಕಲ್‌ ಬಂದರೆ ಹಿಂದಿರು ಗಿಸಿ, ಅಧಿಕಾರಿಗಳಿಗೆ ದೂರು ನೀಡಿ ಎಂದು ಸೂಚಿಸಿದರು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.