ಮಳೆಕೊಯ್ಲು ಅಳವಡಿಕೆ ಇನ್ನಷ್ಟು ಜನರಿಗೆ ಸ್ಫೂರ್ತಿಯಾಗಲಿ

"ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನ ಯಶಸ್ವಿ

Team Udayavani, Jun 28, 2019, 11:30 AM IST

male-koylu

ಮಹಾನಗರ: ಜಲ ಸಾಕ್ಷರತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ “ಉದಯವಾಣಿ’ ಹಮ್ಮಿಕೊಂಡ “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಅಭಿಯಾನದಿಂದ ಪ್ರೇರಿತರಾಗಿ ತಮ್ಮ ಮನೆಗಳಲ್ಲಿಯೂ ಜನ ಮಳೆಕೊಯ್ಲು ಅಳವಡಿಸುತ್ತಿದ್ದು, ತಮ್ಮ ಮನೆಗಳಲ್ಲಿ ಅಳವಡಿಸಿದ ಮಳೆಕೊಯ್ಲು ವ್ಯವಸ್ಥೆಯ ಚಿತ್ರವನ್ನು ನಮ್ಮ ಕಚೇರಿಗೆ ಕಳುಹಿಸಿಕೊಡುತ್ತಿದ್ದಾರೆ. ಇದು ಇನ್ನಷ್ಟು ಜನರಿಗೆ ಸ್ಫೂರ್ತಿಯಾಗಲಿ.

ಕುಡುಪು ಪಾಲ್ದನೆಯಲ್ಲಿ ಲಿಯೋನೆಲ್‌ ಎವ್‌ಲಿನ್‌ ಸೆರಾವೋ ಅವರು ಎರಡು ವಾರಗಳ ಹಿಂದೆ ತಮ್ಮ ಮನೆಯಲ್ಲಿ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದಾರೆ. ಮನೆಯ ಛಾವಣಿ ನೀರನ್ನು ಡ್ರಮ್‌ಗೆ ಬಿಟ್ಟು ಅಲ್ಲಿಂದ ಫಿಲ್ಟರಿಂಗ್‌ ಮಾಡಿ ಶುದ್ಧ ನೀರನ್ನು ಬಾವಿಗೆ ಬೀಳುವಂತೆ ನೋಡಿಕೊಂಡಿದ್ದಾರೆ.  ಕೆಲವು ತಿಂಗಳ ಹಿಂದಷ್ಟೇ ಪಾಲ್ದನೆಯಲ್ಲಿ ವಾಸ ಮಾಡುತ್ತಿರುವ ಅವರು, ಮುಂದೆ ನೀರಿನ ಅಭಾವ ಉಂಟಾಗದಂತೆ ತಡೆಯಲು ಈ ಸರಳ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ.

ಮಾಹಿತಿ ಸಹಕಾರಿ
“ಸುದಿನ’ದಲ್ಲಿ ಮಳೆ ಕೊಯ್ಲು ವ್ಯವಸ್ಥೆ ಬಗ್ಗೆ ಬಂದ ಮಾಹಿತಿಯೂ ಸಹಕಾರಿಯಾಯಿತು’ ಎನ್ನುತ್ತಾರೆ ಎವ್‌ಲಿನ್‌.

ಮಳೆಕೊಯ್ಲು ಅಳವಡಿಸಲು 17 ಕರೆ
ಡಾ| ನಾನಾ ಸಾಹೇಬ್‌ ಧರ್ಮಾಧಿಕಾರಿ ಪ್ರತಿಷ್ಠಾನವು ನಾಲ್ಕು ವರ್ಷಗಳಿಂದ ಮಳೆಕೊಯ್ಲು ವ್ಯವಸ್ಥೆ ಅಳವಡಿಸಿಕೊಡುವಲ್ಲಿ ಸಕ್ರಿಯವಾಗಿದ್ದು, ಈಗ ಹಲವರು ಪ್ರತಿಷ್ಠಾನದ ಸದಸ್ಯರನ್ನು ಸಂಪರ್ಕಿಸಿ ತಮ್ಮ ಮನೆ, ಅಪಾರ್ಟ್‌ಮೆಂಟ್‌ಗಳಲ್ಲಿ ಮಳೆಕೊಯ್ಲು ಅಳವಡಿಸಿಕೊಡುವಂತೆ ವಿನಂತಿಸುತ್ತಿದ್ದಾರೆ. ವಾರದಿಂದೀಚೆಗೆ ಸುಮಾರು 17ಕ್ಕೂ ಹೆಚ್ಚು ಮಂದಿ ತಮ್ಮನ್ನು ಸಂಪರ್ಕಿಸಿರುವುದಾಗಿ ಪ್ರತಿಷ್ಠಾನದ ಸದಸ್ಯರು ಹೇಳುತ್ತಾರೆ. ಮಳೆಕೊಯ್ಲು ವ್ಯವಸ್ಥೆ ಅಳವಡಿಸಬೇಕಾದವರಿಗೆ ಉಚಿತವಾಗಿಯೇ ಮಾಡಿಕೊಡುತ್ತೇವೆ. ಆದರೆ, ಅದಕ್ಕೆ ಬೇಕಾದ ಸಲಕರಣೆಗಳನ್ನು ಅವರೇ ಹೊಂದಿಸಿಕೊಳ್ಳಬೇಕಾಗುತ್ತದೆ ಎನ್ನುತ್ತಾರೆ ಪ್ರತಿಷ್ಠಾನದ ಸದಸ್ಯರು. ಪ್ರತಿಷ್ಠಾನದಲ್ಲಿ ವಿವಿಧ ಉದ್ಯೋಗದಲ್ಲಿರುವ ಸದಸ್ಯರಿದ್ದು, ತಮ್ಮ ಉದ್ಯೋಗದ ನಡುವೆಯೂ ಬಿಡುವಿನ ವೇಳೆಯಲ್ಲಿ ಈ ಸೇವಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಸಸ್ಯಗುಂಡಿಗಳಿಗೆ ನೀರಿಂಗಿಸಿದ ವೆಂಕಟೇಶ್‌ ಗಟ್ಟಿ

ಕೋಟೆಕಾರ್‌ನ ಸತ್ಯನಾರಾಯಣ ನಗರ ನಿವಾಸಿ ಎಂ.ಎಸ್‌. ವೆಂಕಟೇಶ್‌ ಗಟ್ಟಿ ಅವರು ತಮ್ಮ ಮನೆಯಲ್ಲಿ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದಾರೆ.  ವೆಂಕಟೇಶ್‌ ಅವರು ಸರಳ ಮಾದರಿಯಲ್ಲೇ ಮಳೆಕೊಯ್ಲು ಅಳವಡಿಕೆ ಮಾಡಿದ್ದು, ಮನೆಯ ಛಾವಣಿ ನೀರನ್ನು ಪೈಪ್‌ ಮುಖಾಂತರ ಬಾವಿಯ ಸನಿಹದಲ್ಲಿ ಮೊದಲೇ ಇದ್ದ 6 ಅಡಿ ಅಗಲ, 3 ಅಡಿ ಉದ್ದದ ಸಸ್ಯಗುಂಡಿಗಳಿಗೆ ಬಿಟ್ಟಿದ್ದಾರೆ. ಸಸ್ಯ ಗುಂಡಿಗಳಿಗೆ ನೀರಿಂಗಿಸಿದರೆ ಸಸ್ಯದ ಬೇರುಗಳು ನೀರನ್ನು ಇಂಗಿಸಲು ಸಹಕರಿಸುತ್ತವೆ ಎಂದು ಮಳೆಕೊಯ್ಲು ತಜ್ಞ ಶ್ರೀ ಪಡ್ರೆಯವರು ಸಲಹೆ ನೀಡಿದ ಹಿನ್ನೆಲೆಯಲ್ಲಿ ವೆಂಕಟೇಶ್‌ ಅವರೂ ಇದೇ ಮಾದರಿಯಲ್ಲಿ ಮಳೆಕೊಯ್ಲು ಮಾಡಿದ್ದಾರೆ.
“ಉದಯವಾಣಿ’ ಮನೆಮನೆಗೆ ಮಳೆಕೊಯ್ಲು ಅಭಿಯಾನದಲ್ಲಿ ಭಾಗವಹಿಸಿದ್ದೆ. ಅಲ್ಲಿ ಸಿಕ್ಕಿದ ಮಾಹಿತಿಯನುಸಾರ ಮಳೆಕೊಯ್ಲು ಅಳವಡಿಸಿದ್ದೇನೆ. ನನ್ನ ಮನೆಯಲ್ಲಿ ಅಳವಡಿಸಿಕೊಳ್ಳಲು ಈ ಅಭಿಯಾನ ಪ್ರೇರಣೆಯಾಯಿತು’ ಎಂದು ಹೇಳುತ್ತಾರೆ ವೆಂಕಟೇಶ್‌.

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸುತ್ತಿದ್ದಾರೆ. ಜತೆಗೆ ತಮ್ಮ ಖುಷಿಯನ್ನು ಉಳಿದವರೊಂದಿಗೂ ಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ, “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆಗಳಲ್ಲಿ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೊ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ.
9900567000

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.