ಲೋಕಕಲ್ಯಾಣಕ್ಕೆ ಪ್ರಾರ್ಥಿಸೋಣ: ಕೃಷ್ಣಾಪುರ ಶ್ರೀ

ಪರ್ಯಾಯ ಪೀಠಾರೋಹಣಗೈಯಲಿರುವ ಕೃಷ್ಣಾಪುರ ಮಠಾಧೀಶರಿಗೆ ಪೌರ ಸಮ್ಮಾನ

Team Udayavani, Jan 10, 2022, 5:30 AM IST

ಲೋಕಕಲ್ಯಾಣಕ್ಕೆ ಪ್ರಾರ್ಥಿಸೋಣ: ಕೃಷ್ಣಾಪುರ ಶ್ರೀ

ಮಂಗಳೂರು: ಪ್ರಸ್ತುತ ಬಂದಿರುವ ಕೊರೊನಾ ಸಂಕಷ್ಟ ನಿವಾರಣೆಯಾಗಿ ಲೋಕಕ್ಕೆ ಕಲ್ಯಾಣವಾಗಲಿ ಎಂದು ನಾವೆಲ್ಲರೂ ಶುದ್ಧ ಮನಸ್ಸಿನಿಂದ ಪ್ರಾರ್ಥಿಸೋಣ ಎಂದು ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿಯವರು ಹೇಳಿದ್ದಾರೆ.

ಉಡುಪಿ ಶ್ರೀಕೃಷ್ಣಮಠದ ಪರ್ಯಾಯ ಪೀಠಾರೋಹಣಗೈಯಲಿರುವ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿ ಯವರಿಗೆ ಶರವು ಶ್ರೀ ಮಹಾ ಗಣಪತಿ ದೇವಸ್ಥಾನದ ಪ್ರಾಂಗಣದಲ್ಲಿ ರವಿವಾರ ಆಯೋಜಿ ಸಿದ್ದ ಪೌರ ಸಮ್ಮಾನ ಸ್ವೀಕರಿಸಿ ಅಶೀ ರ್ವಚನ ನೀಡಿದ ಅವರು ಪರಿ ಶುದ್ಧ ಮನಸ್ಸು ಮತ್ತು ಭಕ್ತಿಗೆ ಭಗವಂತನ ಸ್ಪಂದನೆ ಸದಾ ಇರುತ್ತದೆ. ಎಲ್ಲರೂ ಪ್ರೀತಿ ಯಿಂದ ಹಾಗೂ ಲೋಕಕಲ್ಯಾಣದ ನಿರೀಕ್ಷೆ ತುಂಬಿರುವ ಸಮ್ಮಾನ ನೀಡಿ ದ್ದೀರಿ, ಅದರಿಂದಾಗಿ ನನಗೆ ಭರವಸೆ ಮೂಡಿದೆ. ಒಬ್ಬೊಬ್ಬನಿಗೆ ವ್ಯಕ್ತಿಗತವಾಗಿ ಬರುವ ಆಪತ್ತು ತೊಲಗಿಸುವುದು ಸುಲಭ, ಆದರೆ ಇದು ಲೋಕಕ್ಕೆ ತಗಲಿರುವ ಕಂಟಕ, ಇದನ್ನು ತೊಲಗಿಸುವುದು ಸುಲಭ ವಲ್ಲ. ಆದರೆ ಪರಮಾತ್ಮನ ಏಕಾಂತ ಭಕ್ತರೆನಿಸಿ ಕೊಂಡ ಮಧ್ವರು, ವಾದಿರಾಜರಿಗೆ ಅದು ಸಾಧ್ಯ. ನಾನು ಶುದ್ಧ ಮನಸ್ಸಿನಿಂದ ಇದನ್ನು ಅವರಿಗೆ ಅರ್ಪಿಸುತ್ತೇನೆ, ಅದು ಅವರ ಚಿತ್ತಕ್ಕೆ ಬರಲಿ, ಆ ಮೂಲಕ ಎಲ್ಲರ ಇಷ್ಟಾರ್ಥ ಸಿದ್ಧಿಯಾಗಲಿ ಎಂದರು.

ಕಟೀಲು ಕ್ಷೇತ್ರದ ಶ್ರೀ ಲಕ್ಷ್ಮೀನಾರಾಯಣ ಆಸ್ರಣ್ಣ ಅವರು ಮಾತನಾಡಿ, ಗುರುಗಳು ಪೂರ್ಣ ದೇವರ ಪೂಜೆ, ಅನುಷ್ಠಾನ ಕರ್ತವ್ಯದಲ್ಲೇ ಇರುವವರು. ತ್ಯಾಗಿಯಾಗಿ, ಸನ್ಯಾಸಿ ಯಾಗಿ ಆದರ್ಶಪ್ರಾಯರಾಗಿ, ಅಪೇಕ್ಷೆ ಯಾವುದೂ ಇಲ್ಲದೆ, ಕೃಷ್ಣನ ಕುರಿತ ಆಲೋಚನೆ ಮಾತ್ರ ಮಾಡುವ ಮೂಲಕ ಆದರ್ಶಪ್ರಾಯರು. ಅವರ ಪರ್ಯಾಯ ಕಾಲದಲ್ಲಿ ಲೋಕಕ್ಕೆ ಮಂಗಳವಾಗಲಿ ಎಂದರು.

ಇದನ್ನೂ ಓದಿ:ಹಿಮವರ್ಷ : ರಾಜ್ಯದ 400ಕ್ಕೂ ಅಧಿಕ ಪ್ರಮುಖ ರಸ್ತೆಗಳು ಬಂದ್‌

ಅಭಿನಂದನೆಯ ನುಡಿಗಳನ್ನಾಡಿದ ಪರ್ಯಾಯೋತ್ಸವ ಸಮಿತಿ ಅಧ್ಯಕ್ಷ ಪ್ರೊ| ಎಂ. ಬಿ. ಪುರಾಣಿಕ್‌ ಅವರು ನಾಲ್ಕನೇ ಬಾರಿ ಪರ್ಯಾಯ ಪೀಠಾರೋಹಣಗೈಯಲಿರುವ ಕೆಲವೇ ಮಠಾಧೀಶರರಲ್ಲಿ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಓರ್ವ ರಾಗಿದ್ದಾರೆ. ಅವರಿಗೆ ಪೌರ ಸಮ್ಮಾನ ನಡೆಯುತ್ತಿರುವುದು ಎಲ್ಲರಿಗೂ ಅತ್ಯಂತ ಸಂತಸದ ಕ್ಷಣವಾಗಿದೆ ಎಂದರು.

ಶಾಸಕ ವೇದವ್ಯಾಸ ಕಾಮತ್‌ ಅವರು ಮಾತನಾಡಿ ಸ್ವಾಮೀಜಿಯವರ ಅನುಗ್ರಹ, ಅಶೀರ್ವಾದ ಸಮಾಜಕ್ಕೆ ಸದಾ ದೊರೆಯಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ಮೇಯರ್‌ ಪ್ರೇಮಾನಂದ ಶೆಟ್ಟಿ ಅವರು ಪರ್ಯಾಯ ಸ್ವಾಮೀಜಿ
ಯವರಿಗೆ ಪೌರ ಸಮ್ಮಾನ ಮಾಡುತ್ತಿರುವುದು ನಮ್ಮ ಪಾಲಿಗೆ ಸೌಭಾಗ್ಯದ ಸಂದರ್ಭವಾಗಿದೆ ಎಂದರು.

ಶ್ರೀ ಕ್ಷೇತ್ರದ ಶರವು ಶಿಲೆಶಿಲೆ ಮೊಕ್ತೇಸರ ಶರವು ರಾಘವೇಂದ್ರ ಶಾಸಿŒ, ಮಾಜಿ ಮೇಯರ್‌ ಶಶಿಧರ ಹೆಗ್ಡೆ, ಕಸಪಾ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಶ್ರೀ ಕ್ಷೇತ್ರ ಮಂಗಳಾದೇವಿಯ ಆಡಳಿತ ಮೊಕ್ತೇಸರ ರಮಾನಾಥ ಹೆಗ್ಡೆ, ಉಪಮೇಯರ್‌ ಸುಮಂಗಲ ರಾವ್‌, ಕಾರ್ಪೊರೇಟರ್‌ ಪೂರ್ಣಿಮಾ, ವಿಧಾನಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಕಿನ್ನಿಗೋಳಿಯ ಭುವನಾಭಿರಾಮ ಉಡುಪ, ಸುಧಾಕರ ರಾವ್‌ ಪೇಜಾವರ ಮತ್ತಿತರರು ಉಪಸ್ಥಿತರಿದ್ದರು.
ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಪ್ರಸ್ತಾವನೆಗೈದು ಸ್ವಾಗತಿಸಿದರು. ದಯಾ ನಂದ ಕಟೀಲು ನಿರೂಪಿಸಿದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.