ಸೈನೈಡ್ ಮೋಹನನಿಗೆ ಜೀವನ ಪರ್ಯಂತ ಜೀವಾವಧಿ
Team Udayavani, Jul 19, 2019, 11:08 AM IST
ಸಂಗ್ರಹ ಚಿತ್ರ
ಮಂಗಳೂರು: ಕಾಸರಗೋಡು ಜಿಲ್ಲೆ ಪೈವಳಿಕೆಯ ಯುವತಿ ಕೊಲೆ ಪ್ರಕರಣದಲ್ಲಿ ಸೈನೈಡ್ ಕಿಲ್ಲರ್ ಖ್ಯಾತಿಯ ಮೋಹನ್ ಕುಮಾರನಿಗೆ ಗುರುವಾರ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವನ ಪರ್ಯಂತ ಜೀವಾವಧಿ ಶಿಕ್ಷೆ ವಿಧಿಸಿದೆ.
ಈ ಪ್ರಕರಣದಲ್ಲಿ ಈತನ ಮೇಲಿನ ಆರೋಪವು ಸಾಬೀತಾಗಿದೆ ಎಂದು ನ್ಯಾಯಾಧೀಶರಾದ ಸೈಯೀದುನ್ನೀಸಾ ಅವರು ಜು. 12ರಂದು ಘೋಷಿಸಿ, ಶಿಕ್ಷೆಯ ಪ್ರಮಾಣದ ವಿಚಾರಣೆಯನ್ನು ಜು. 18ಕ್ಕೆ ನಿಗದಿಪಡಿಸಿದ್ದರು.
ಶಿಕ್ಷೆಯ ವಿವರ
ಐಪಿಸಿ ಸೆಕ್ಷನ್ 302 (ಕೊಲೆ) ಅಪರಾಧಕ್ಕೆ ಜೀವನ ಪರ್ಯಂತ ಜೀವಾವಧಿ ಶಿಕ್ಷೆ ಹಾಗೂ 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಾದಾ ಸಜೆ, ಸೆಕ್ಷನ್ 328 (ವಿಷ ಉಣಿಸಿದ್ದು) ಅಪರಾಧಕ್ಕೆ 10 ವರ್ಷ ಜೈಲುಶಿಕ್ಷೆ ಹಾಗೂ 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 6 ತಿಂಗಳು ಸಾದಾ ಸಜೆ, ಸೆಕ್ಷನ್ 392 (ಚಿನ್ನಾಭರಣ ಸುಲಿಗೆ) ಅಪರಾಧಕ್ಕೆ 5 ವರ್ಷ ಕಠಿನ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಾದಾ ಸಜೆ, ಸೆಕ್ಷನ್ 394 (ಸುಲಿಗೆಗಾಗಿ ವಿಷ ಪ್ರಾಶನ) ಅಪರಾಧಕ್ಕೆ 10 ವರ್ಷ ಕಠಿನ ಶಿಕ್ಷೆ, 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 2 ವರ್ಷಗಳ ಕಾಲ ಸಾದಾ ಜೈಲು ಶಿಕ್ಷೆ, ಸೆಕ್ಷನ್ 417 (ವಂಚನೆ) ಅಪರಾಧಕ್ಕೆ 1 ವರ್ಷ ಸಾದಾ ಸಜೆ, ಸೆಕ್ಷನ್ 201 (ಸಾಕ್ಷಿನಾಶ) ಅಪರಾಧಕ್ಕೆ 7 ವರ್ಷ ಕಠಿನ ಶಿಕ್ಷೆ ಹಾಗೂ 5,000 ರೂ. ರೂ. ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಾದಾ ಜೈಲುಶಿಕ್ಷೆ ವಿಧಿಸಲಾಗಿದೆ. ಯುವತಿಯ ಹೆತ್ತವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ಪಡೆದುಕೊಳ್ಳಲು ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.
ಪ್ರಕರಣದಲ್ಲಿ 41 ಸಾಕ್ಷಿದಾರರು, 50 ದಾಖಲೆಗಳು ಹಾಗೂ 42 ಸಾಂದರ್ಭಿಕ ಸಾಕ್ಷಿಗಳನ್ನು ವಿಚಾರಣೆ ಮಾಡಲಾಗಿತ್ತು. ಆರೋಪಿಯು ಯುವತಿಯ ಚಿನ್ನಾಭರಣವನ್ನು ಮಾರಾಟ ಮಾಡಿದ್ದ ಮಳಿಗೆಯಿಂದ ವಾಪಸ್ ಪಡೆದು ಪೋಷಕರಿಗೆ ಒಪ್ಪಿಸಲಾಗಿದೆ. ಸರಕಾರದ ಪರವಾಗಿ ಜುಡಿತ್ ಒ.ಎಂ.ಕ್ರಾಸ್ತಾ ಅವರು ವಾದ ಮಂಡಿಸಿದ್ದರು.
ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷೆ ವಿವರ
ಬೆಳಗಾವಿಯ ಹಿಂಡಲಗಾ ಜೈಲಲ್ಲಿರುವ ಮೋಹನ ಕುಮಾರ್ನಿಗೆ ನ್ಯಾಯಾಧೀಶರಾದ ಸೈಯೀದುನ್ನೀಸಾ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷೆಯ ವಿವರ ನೀಡಿದರು.
15 ಕೇಸುಗಳಲ್ಲಿ ಜೀವಾವಧಿ ಶಿಕ್ಷೆ
ಮೋಹನ್ ಕುಮಾರ್ ವಿರುದ್ಧ 20 ಕೇಸುಗಳು ದಾಖಲಾಗಿದ್ದು, ಈ ಪೈಕಿ 15 ಕೇಸುಗಳಲ್ಲಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಐದು ಕೇಸುಗಳು ವಜಾಗೊಂಡಿದ್ದು, ಇನ್ನು ಐದು ಕೇಸುಗಳು ವಿಚಾರಣೆಗೆ ಬಾಕಿ ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ