ವೃತ್ತಿ ವ್ರತವಾದಾಗ ಬದುಕು ಸುಂದರ: ಸಂಸದ


Team Udayavani, Mar 12, 2018, 9:48 AM IST

12-March-1.jpg

ಮೂಡಬಿದಿರೆ: ಎಲ್ಲ ವೃತ್ತಿಗಳೂ ಸಮಾನವಾಗಿ ಗೌರವಾರ್ಹ. ವೃತ್ತಿ ವ್ರತವಾದಾಗ ವ್ಯವಸ್ಥೆ ಸುಂದರವಾಗಿರುತ್ತದೆ. ವ್ಯವಸ್ಥೆ ಸುಂದರವಾಗಿದ್ದಾಗ ನಮ್ಮ ಬದುಕು ಸುಂದರವಾಗಿರಲು ಸಾಧ್ಯವಾಗುತ್ತದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಶಿವಮೊಗ್ಗದ ಸೃಷ್ಟಿ ಚಾರಿಟೆಬಲ್‌ ಟ್ರಸ್ಟ್‌ ಸಹಯೋಗದಲ್ಲಿ ಮೂಡಬಿದಿರೆ ಹೆಬ್ರಿ ತಿಮ್ಮ ಸೋಮಯ್ಯ ಮಡಿವಾಳ ಪ್ರತಿಷ್ಠಾನದ ವತಿಯಿಂದ ರವಿವಾರ ಮೂಡಬಿದಿರೆಯ ಪದ್ಮಾವತಿ ಕಲಾಮಂದಿರದಲ್ಲಿ ಕಾಬೆಟ್ಟು ಓಬಯ್ಯ ಮಡಿವಾಳ ವೇದಿಕೆಯಲ್ಲಿ ನಡೆದ ರಾಜ್ಯಮಟ್ಟದ ಮಡಿವಾಳರ ಸಂಸ್ಕೃತಿ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಎಲ್ಲ ಸಮುದಾಯಗಳ ಜನರನ್ನು ಶುಭ್ರವಾಗಿ ಕಾಣುವಂತೆ ಮಾಡುವ ಮಡಿವಾಳರು ನಿಷ್ಠೆ ಮತ್ತು ವಿಶ್ವಾಸಕ್ಕೆ ಹೆಸರಾದವರು ಎಂದರು.

ಮಡಿವಾಳರು ಶಿಕ್ಷಣ, ರಾಜಕೀಯ ಮತ್ತು ಉದ್ಯಮಗಳಲ್ಲಿ ಗುರುತಿಸಿಕೊಳ್ಳುತ್ತಿದ್ದು, ಸಮುದಾಯದ ಶ್ರೇಷ್ಠ ಪರಂಪರೆಯನ್ನು ಯುವಜನರು ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು ಎಂದು ಅವರು ಕರೆನೀಡಿದರು.

ದಾರಿದ್ರ್ಯಾ,ಆಲಸ್ಯ, ಕೀಳರಿಮೆ ಬಿಡಿ
ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದ ಸಾಹಿತಿ ಡಾ| ವರದಾ ಶ್ರೀನಿವಾಸ್‌ ಮಾತನಾಡಿ, ಮಡಿವಾಳ ಜನಾಂಗವು ಆರ್ಥಿಕ, ಸಾಮಾಜಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಹಿಂದುಳಿಯುವಿಕೆ ಜತೆಗೆ ಮೇಲುಜಾತಿಯವರ ಹಿಡಿತ ಈ ಜಾತಿಯ ಹಿಂದುಳಿಯುವಿಕೆಗೆ ಕಾರಣವಾಗಿದೆ. ಈ ಜನಾಂಗದಲ್ಲಿ ಇನ್ನೂ ಜೀವಂತವಾಗಿರುವ ದಾರಿದ್ರ್ಯಾ,ಆಲಸ್ಯ, ಕೀಳರಿಮೆ, ಮೂಢನಂಬಿಕೆ, ಸಂಕುಚಿತ ಮನೋಭಾವ, ದಾಸ್ಯಪರತೆ ಎಲ್ಲವೂ ದೂರವಾಗಬೇಕಾಗಿದೆ. ಈ ದಿಶೆಯಲ್ಲಿ ಮಡಿವಾಳ ಜನಾಂಗದವರು ಆರ್ಥಿಕವಾಗಿ ಸಬಲರಾಗಬೇಕಾದರೆ ಮೊದಲು ಬೇಕಾದುದು ಶಿಕ್ಷಣ. ಆಯಾ ಜನಾಂಗದ ಜಾತಿ ಸಂಘ, ಸಂಸ್ಥೆಗಳು ಶಿಕ್ಷಣಕ್ಕೆ ಹುರಿದುಂಬಿಸಬೇಕು ಎಂದು ಹೇಳಿದರು.

ಶಾಸಕ ಕೆ. ಅಭಯಚಂದ್ರ ಅವರು ಹಿಂದುಳಿದ ವರ್ಗದವರ ಅಭಿವೃದ್ಧಿ ಹಿಂದುಳಿದ ವರ್ಗದವರಿಂದಲೇ ಸಾಧ್ಯ ಎಂದು ಹೇಳಿದರು.

ಉದ್ಘಾಟನೆ
ಕಲ್ಲಬೆಟ್ಟು ಎಕ್ಸಲೆಂಟ್‌ ಕಾಲೇಜಿನ ಅಧ್ಯಕ್ಷ ಯುವರಾಜ ಜೈನ್‌ ಸಮ್ಮೇಳನವನ್ನು ಉದ್ಘಾಟಿಸಿ, ಸಮ್ಮೇಳನಾಧ್ಯಕ್ಷೆ ಸಾಹಿತಿ ವರದಾ ಶ್ರೀನಿವಾಸ್‌ ಅವರ ‘ಮಡಿವಾಳ ಮಾಚಿದೇವ’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿ, ‘ಬಡವನಾಗಿ ಜನಿಸುವುದು ತಪ್ಪಲ್ಲ, ಆದರೆ, ಬಡವನಾಗಿಯೇ ಸಾಯದೆ, ಜೀವನದಲ್ಲಿ ಛಲದಿಂದ ಮುಂದೆ ಬರಲು ಮನಸ್ಸು ಮಾಡಬೇಕು’ ಎಂದರು.

ವಿಜಯಪುರದ ಉದ್ಯಮಿ ಸೂರಜ್‌ ಸಾಲ್ಯಾನ್‌, ಭದ್ರಾವತಿ ಮಡಿವಾಳ ಸಂಘದ ಅಧ್ಯಕ್ಷ ಬಿ. ವೆಂಕಟೇಶ್‌, ಕಾರ್ಕಳದ ಸುರೇಶ್‌ ಮಡಿವಾಳ, ಗಣೇಶ್‌ ಸಾಲ್ಯಾನ್‌, ಸೃಷ್ಟಿ ಚಾರಿಟೆಬಲ್‌ ಟ್ರಸ್ಟ್‌ನ ಪ್ರ.ಕಾರ್ಯದರ್ಶಿ ನಾಗರಾಜ್‌, ಶಿವಮೊಗ್ಗ ಜಿಲ್ಲಾ ಸಂಘದ ಪ್ರ. ಕಾರ್ಯದರ್ಶಿ ದಯಾನಂದ ಬಾಬು ಅತಿಥಿಗಳಾಗಿ ಭಾಗವಹಿಸಿದ್ದರು. ಎಚ್‌.ಟಿ. ಸೋಮಯ್ಯ ಮಡಿವಾಳ ಪ್ರತಿಷ್ಠಾನದ ಅಧ್ಯಕ್ಷ ಸಾಣೂರು ಸತೀಶ ಸಾಲ್ಯಾನ್‌ ಸ್ವಾಗತಿಸಿ, ಪ್ರಸ್ತಾವಿಸಿದರು. 

ದೀಕ್ಷಾ   ಮತ್ತು ಚಂದ್ರಕಾಂತ್‌ ಭಟ್‌ ಕಾರ್ಯಕ್ರಮ ನಿರೂಪಿಸಿದರು. ಮುಂಜಾನೆ ಎ. ಸುರೇಶ್‌ ತಂಡದವರಿಂದ ಮಂಗಳವಾದ್ಯ ಗೋಷ್ಠಿ, ರಾಮಕೃಷ್ಣ ಕಾಟುಕುಕ್ಕೆ ತಂಡದವರಿಂದ ವಚನಗಾಯನ, ದಾಸ ವಾಣಿ, ಪುರಸಭಾಸದಸ್ಯೆ ಪ್ರೇಮಾ ಎಸ್‌. ಸಾಲ್ಯಾನ್‌ ಅವರಿಂದ ಧ್ವಜಾರೋಹಣ ನಡೆಯಿತು. ಮಂಜೇಶ್ವರ ನಾಟ್ಯನಿಲಯಂ ಬಾಲಕೃಷ್ಣ ಮಂಜೇಶ್ವರ ತಂಡದವರಿಂದ ನೃತ್ಯ ಸಿಂಚನ, ಅಪರಾಹ್ನ ಸೋಮಯ್ಯ ಮಡಿವಾಳ ಪ್ರಶಸ್ತಿ, ಬಸವ ಮಾಚಿದೇವ ಪ್ರಶಸ್ತಿ, ಮಡಿವಾಳ ಮಾಚಿದೇವ ಪ್ರಶಸ್ತಿ ಪ್ರದಾನ ಮೊದಲಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ಮಡಿವಾಳ ಸಮಾಜಕ್ಕೆ ಪ್ರತ್ಯೇಕ ನಿಗಮಕ್ಕೆ ಆಗ್ರಹ 
ಅಖಿಲ ಭಾರತ ಮಡಿವಾಳ ಮಹಾಸಭಾದ ಅಧ್ಯಕ್ಷ ಎಂಜೀರಪ್ಪ ಮಾತನಾಡಿ, ರಾಜಕೀಯ ಪಕ್ಷಗಳು ನಮ್ಮ ಸಮಾಜಕ್ಕೆ ದ್ರೋಹ ಮಾಡುತ್ತಿವೆ. ಮಡಿವಾಳ ಸಮಾಜಕ್ಕೆ ಪ್ರತ್ಯೇಕ ನಿಗಮವನ್ನು ನೀಡಬೇಕೆಂದು ಆಗ್ರಹಿಸಿದರು. ರಾಜ್ಯ ಸಂಘಟನೆಯು ಐ.ಎ.ಎಸ್‌. ಮತ್ತು ಕೆ.ಎ.ಎಸ್‌. ಓದುವವರಿಗೆ ಉಚಿತ ಊಟ, ವಸತಿಯನ್ನು ಒದಗಿಸುವುದು ಹಾಗೂ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವವರಿಗೆ ಚುನಾವಣಾ ಖರ್ಚನ್ನು ಮಹಾಮಂಡಲದಿಂದ ನಿರ್ವಹಿಸಲಾಗುವುದು ಎಂದು ಘೋಷಿಸಿದರು.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.