“ಕನಕದಾಸರ ಕೀರ್ತನೆಗಳಿಂದ ಜೀವನ ಮೌಲ್ಯ’
Team Udayavani, Apr 17, 2019, 6:00 AM IST
ಕನಕ ಸ್ಮತಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ| ವಿದ್ಯಾಭೂಷಣ ಮಾತನಾಡಿದರು.
ಮಂಳಗಂಗೋತ್ರಿ: ಕನಕದಾಸರು ಭಗವಂತನ ಸ್ಮತಿಯೊಂದಿಗೆ ಜೀವನದ ಮೌಲ್ಯಗಳನ್ನು ಸಮಾಜಕ್ಕೆ ತಿಳಿಯಪಡಿಸುವ ಕಾರ್ಯವನ್ನು ಕೀರ್ತನೆಗಳ ಮೂಲಕ ಮಾಡಿದ್ದಾರೆ ಎಂದು ಸಂಗೀತ ವಿದ್ಯಾನಿಧಿ
ಡಾ| ವಿದ್ಯಾಭೂಷಣ ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರದ ಆಶ್ರಯದಲ್ಲಿ ಮಂಗಳೂರು ವಿವಿಯ ಹಳೆ ಸೆನೆಟ್ ಸಭಾಂಗಣದಲ್ಲಿ ನಡೆದ ಕನಕ ಸ್ಮತಿ ವಿಶೇಷ ಉಪನ್ಯಾಸ ಹಾಗೂ ಕನಕ ಪುರ ಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು, ನನ್ನದು ಎಂಬ ಮನೋ ಭಾವವು ನಮ್ಮಿಂದ ದೂರವಾದರೆ ನಾವು ಮೋಕ್ಷವನ್ನು ಪಡೆಯಲು ಸಾಧ್ಯ ಎಂಬುದು ಕನಕದಾಸರ ವಾದವಾಗಿತ್ತು. ಕನಕ ದಾಸರು ಮತ್ತು ಪುರಂದರದಾಸರು ಬೇರೆ ಬೇರೆಯಲ್ಲ. ಅವರಿಬ್ಬರ ಚಿಂತನೆಗಳು ಒಂದೇ ರೀತಿಯಾಗಿದ್ದಿತು. ಹರಿದಾಸ ಪರಂಪರೆಯಿಂದ, ಪುರಂದರದಾಸರಿಂದ ಕನಕದಾ ಸರನ್ನು ಸರ್ಕಾರಗಳು ಬೇರ್ಪಡಿಸಲು ಪ್ರಯತ್ನಿಸಿದರೂ ಹರಿದಾಸ ಸಂಬಂಧದಿಂದ ದೂರ ಗೊಳಿಸಲು ಸಾಧ್ಯವಿಲ್ಲ ಎಂದರು.
ದೇವರನ್ನು ಕೇವಲ ಪ್ರತಿಮೆಯಲ್ಲಿ ಮಾತ್ರ ಕಾಣದೆ ಎಲ್ಲ ಕಡೆಯೂ ಕಾಣುವಂತಾ ಗಬೇಕು. ಹಾಗೆಯೇ ಅಂತರಂಗದೊಳಗಿನ ದೇವರನ್ನು ಕಂಡುಕೊಳ್ಳುವ ಬಗೆಯನ್ನು ಕನಕದಾಸರ ಕೀರ್ತನೆಯಲ್ಲಿ ಕಾಣಬಹುದು ಎಂದರು. ಇದೇ ಸಂದರ್ಭದಲ್ಲಿ ಡಾ| ವಿದ್ಯಾಭೂಷಣ ಅವರು ಕನಕದಾಸ ಹಾಗೂ ಪುರಂದರ ದಾಸರ ಕೀರ್ತನೆಗಳನ್ನು ಪ್ರಸ್ತು ತಪಡಿಸಿ ವಿವರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಪ್ರಭಾರ ಕುಲಪತಿ ಪ್ರೊ| ಕಿಶೋರಿ ನಾಯಕ್ ಮಂಗಳೂರು ವಿಶ್ವವಿದ್ಯಾಲಯದ ಕನಕದಾಸ ಸಂಶೋಧನ ಕೇಂದ್ರವು ಹಲವಾರು ವರ್ಷಗಳಿಂದ ಪ್ರೊ| ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ಉತ್ತಮ ಯೋಜನೆಗಳನ್ನು ಹಮ್ಮಿ ಕೊಂಡು ಮುನ್ನಡೆಯುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
ಗೌರವ ಪುರಸ್ಕಾರ
ಕಾರ್ಯಕ್ರಮದಲ್ಲಿ ಕನಕದಾಸ ಸಂಶೋ ಧನ ಕೇಂದ್ರವು ಹಮ್ಮಿಕೊಂಡಿದ್ದ ಕನಕ ದಾಸ ಕೀರ್ತನ ಗಾಯನ ಕಾರ್ಯ ಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ವಿಜೇತರಾದವರಿಗೆ ನಗದು ಪುರಸ್ಕಾರದೊಂದಿಗೆ ಗೌರವಿಸ ಲಾಯಿತು. ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕರಾದ ಪ್ರೊ| ಬಿ.ಶಿವರಾಮ ಶೆಟ್ಟಿ ಅವರು ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಶೋಧನ ಸಹಾಯಕ ಆನಂದ ಎಂ. ಕಿದೂರ್ ವಂದಿಸಿದರು. ಅರ್ಪಿತಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ