ಜೀವನ ಮೌಲ್ಯಗಳು ಯಶಸ್ವಿ ಬದುಕಿನ ತಳಹದಿ: ಉಲ್ಲಾಸ ಕಾಮತ್
ಕ್ಷಮತಾ ಯು ಗೆಟ್ ಇನ್ ಡೈಮಂಡ್ಸ್ ಶಿಬಿರ
Team Udayavani, Jun 25, 2019, 5:53 AM IST
ಮಹಾನಗರ: ಯುವ ಜನತೆ ಉತ್ತಮ ಮೌಲ್ಯಗಳನ್ನು ಅಳವ ಡಿಸಿಕೊಂಡು, ಉನ್ನತ ಗುರಿಯನ್ನು ಇರಿಸಿ ಕೊಂಡು ಸಾಧಿಸುವ ಛಲದೊಂದಿಗೆ ಮುನ್ನಡೆದಾಗ ಬದುಕಿನಲ್ಲಿ ಸಾರ್ಥ ಕತೆಯನ್ನು ಕಂಡುಕೊಳ್ಳಲು ಸಾಧ್ಯ ವಾಗುತ್ತದೆ ಎಂದು ಮುಂಬಯಿ ಜ್ಯೋತಿ ಲ್ಯಾಬೊರೆಟರೀಸ್ ಸಂಸ್ಥೆ (ಉಜಾಲಾ) ಜಂಟಿ ಆಡಳಿತ ನಿರ್ದೇಶಕ, ಸಿಇಒ ಉಲ್ಲಾಸ ಕಾಮತ್ ಹೇಳಿದರು.
ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ ಕ್ಷಮತಾ ಯೋಜನೆಯಡಿಯಲ್ಲಿ ಅಂತಿಮ ವರ್ಷದ ಡಿಗ್ರಿ ವಿದ್ಯಾರ್ಥಿಗಳಿಗೆ ಹಾಗೂ ಪದವೀಧರರಿಗೆ ಹಲವು ನಿಯೋಜನೆಗಳೊಂದಿಗೆ ಉದ್ಯೋಗ ಸಾಮರ್ಥ್ಯಕ್ಕೆ ಸಹಾಯವಾಗುವಂತೆ ರೂಪಿಸಿರುವ 18 ದಿವಸಗಳ ಅವಧಿಯ ಕ್ಷಮತಾ ಯು ಗೆಟ್ ಇನ್ ಡೈಮಂಡ್ಸ್ ಶಿಬಿರದ ಸಮಾರೋಪದಲ್ಲಿ ಅವರು ಆಶಯ ಭಾಷಣ ಮಾಡಿದರು.
ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕ ಅಧ್ಯಕ್ಷ ಬಸ್ತಿ ವಾಮನ ಶೆಣೈ ಅಧ್ಯಕ್ಷತೆ ವಹಿಸಿ ತರಬೇತಿ ಶಿಬಿರ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದೆ ಎಂದರು. ವಿಶನ್ ಟಿವಿಎಂ 2030 ಪೂರಕವಾಗಿರುವ ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕಾಲೇಜುಗಳ ಆಯ್ದ ಅಂತಿಮ ವರ್ಷದ 63 ವಿದ್ಯಾರ್ಥಿಗಳನ್ನು ಶಿಬಿರಕ್ಕೆ ಆಹ್ವಾನಿಸಲಾಗಿತ್ತು. ಈ ಶಿಬಿರದಲ್ಲಿ ಹಲವು ತಜ್ಞರಿಂದ ಬೋಧನ ತರಗತಿಗಳನ್ನು ಕೂಡ ಏರ್ಪಡಿಸಲಾಗಿತ್ತು. ಶಿಬಿರ ಸಂಚಾಲಕ ಸಿಎ ಗಿರಿಧರ ಕಾಮತ್, ವಿಶ್ವ ಕೊಂಕಣಿ ಕೇಂದ್ರ ಕಾರ್ಯದರ್ಶಿ ಬಿ. ಪ್ರಭಾಕರ ಪ್ರಭು, ವಿಶ್ವ ಕೊಂಕಣಿ ಭಾಷಾ ಸಂಸ್ಥಾನ ಸಹಾಯಕ ನಿರ್ದೇಶಕ ಗುರುದತ್ತ ಬಂಟ್ವಾಳಕಾರ್, ಉಪಸ್ಥಿತರಿದ್ದರು.
ವಿವಿಧ ಜಿಲ್ಲೆಗಳಿಂದ ಬಂದ ವಿದ್ಯಾರ್ಥಿಗಳ ಹೆತ್ತವರನ್ನು ಹಾಗೂ ಪಾಲಕರನ್ನು ಕೂಡ ಸಮಾರೋಪಕ್ಕೆ ವಿಶೇಷವಾಗಿ ಆಹ್ವಾನಿಸಲಾಗಿತ್ತು. ಉಲ್ಲಾಸ ಕಾಮತ್ ಯೋಜನೆಯ ಪ್ರಾಯೋಜಕರಾಗಿದ್ದರು. ಶಿಬಿರಾ ರ್ಥಿಗಳು ತಮ್ಮ ಅಭಿಪ್ರಾಯ ತಿಳಿಸಿದರು. ಮುಖ್ಯ ಅತಿಥಿಗಳು ಶಿಬಿರಾರ್ಥಿಗಳಿಗೆ ಬಹುಮಾನ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!