![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ದೇಹದಾನ ಮಾಡಿ ಎಲ್ಲರಿಗೂ ಮಾದರಿಯಾದ ಬಾಲಕಿ
Team Udayavani, Nov 2, 2018, 4:15 AM IST
![prateeksha-2-11.jpg](https://www.udayavani.com/wp-content/uploads/2018/11/1/prateeksha-2-11.jpg)
ಮಂಗಳೂರು: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ದೇಹದಾನ, ಅಂಗಾಂಗ ದಾನಗಳ ಕುರಿತು ಜನರಲ್ಲಿ ಸಾಕಷ್ಟು ಅರಿವು ಮೂಡುತ್ತಿರುವ ದಿನಗಳಲ್ಲಿ ಈಕೆಯೂ ಅಂಥದ್ದೇ ಒಂದು ಉದಾಹರಣೆಯನ್ನು ಉಳಿಸಿಹೋಗಿದ್ದಾಳೆ. ಅಶೋಕ ನಗರದ ಪ್ರತೀಕ್ಷಾ (16) ಪ್ರತಿಭಾವಂತ ವಿದ್ಯಾರ್ಥಿನಿ. ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಳು. ಆಕೆಗೆ ಸಾವೇ ಖಚಿತ ಎನಿಸತೊಡಗಿದ್ದಾಗ ತನ್ನ ಪೋಷಕರಲ್ಲಿ, “ನಾನು ಒಂದುವೇಳೆ ಇಲ್ಲವಾದರೆ ದೇಹವನ್ನು ದಾನ ಮಾಡಿ’ ಎಂದಿದ್ದಳಂತೆ. ಅದು ಅವಳ ಕೊನೆ ಇಚ್ಛೆ. ಅದೃಷ್ಟ ಕೈಗೂಡಲಿಲ್ಲ; ಕೊನೆಯುಸಿರೆಳೆದಳು. ಆಕೆಯ ಪೋಷಕರಾದ ಕುಮಾರಸ್ವಾಮಿ ಕೊಕ್ಕಡ ಹಾಗೂ ವಂದನಾ ದಂಪತಿ ತಮ್ಮ ಮಗಳ ಇಚ್ಛೆಯನ್ನು ಗುರುವಾರ ನೆರವೇರಿಸಿದರು.
ಮೂವರೂ ಪ್ರತಿಭಾವಂತರು
ಕುಮಾರಸ್ವಾಮಿ – ವಂದನಾ ದಂಪತಿಗೆ ಮೂವರು ಮಕ್ಕಳು. ಹಿರಿಯ ಪುತ್ರ ಪ್ರಜ್ವಲ್ ಕೃಷ್ಣ ಸಂತ ಅಲೋಶಿಯಸ್ ಕಾಲೇಜಿನ ದ್ವಿತೀಯ ವರ್ಷದ ಪದವಿ ಕಲಿಯುತ್ತಿದ್ದರೆ, ಅನಂತರ ಹುಟ್ಟಿದ ಪ್ರತೀಕ್ಷಾ ಮತ್ತು ಪ್ರೀತಂ ಅವಳಿ ಮಕ್ಕಳು. ಇಬ್ಬರೂ ಈಗ ಕೊಡಿಯಾಲ್ಬೈಲ್ನ ಶಾರದಾ ವಿದ್ಯಾಲಯದಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದರು. ಪ್ರತೀಕ್ಷಾಳಿಗೆ 6ನೇ ತರಗತಿ ಓದುತ್ತಿದ್ದಾಗ ಎಲುಬಿನ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಎರಡು ವರ್ಷಗಳ ಚಿಕಿತ್ಸೆಯ ಬಳಿಕ ಗುಣಮುಖ ಹೊಂದಿದ್ದಳು. ಆದರೆ ಒಂದೇ ವರ್ಷದಲ್ಲಿ ಕಾಯಿಲೆ ಮರುಕಳಿಸಿತ್ತು. ಆ ಬಳಿಕ ಚಿಕಿತ್ಸೆ ಪಡೆಯುತ್ತಲೇ ವ್ಯಾಸಂಗವನ್ನು ಮುಂದುವರಿಸಿದ್ದಳು. ಒಟ್ಟು ಐದು ವರ್ಷಗಳ ಸುದೀರ್ಘ ಅವಧಿಯ ಚಿಕಿತ್ಸೆಯೂ ಫಲಕಾರಿಯಾಗದೆ ಬುಧವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಳು.
ಮೂವರೂ ಮಕ್ಕಳು ಕಲಿಕೆಯಲ್ಲಿ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪ್ರತಿಭಾವಂತರು. ಸಂಗೀತ, ಯಕ್ಷಗಾನ ಮತ್ತು ಭರತನಾಟ್ಯವನ್ನು ಕಲಿತಿದ್ದರು. ಪ್ರತೀಕ್ಷಾ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ತೇರ್ಗಡೆ ಹೊಂದಿದ್ದಳು. ಪಠ್ಯ ವಿಷಯಗಳಲ್ಲಿ ಉತ್ತಮ ಅಂಕ ಗಳಿಸುತ್ತಿದ್ದಳು.
ದೇಹ ದಾನಕ್ಕೆ ಅಣ್ಣ ಪ್ರಜ್ವಲ್ ಕೃಷ್ಣ ಮುಖ್ಯ ಪ್ರೇರಣೆ. ಆತನಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಆಸಕ್ತಿ. ಶಾರದಾ ವಿದ್ಯಾಲಯದ ಅಧ್ಯಕ್ಷ ಎಂ.ಬಿ. ಪುರಾಣಿಕ್ ಅವರೂ ಈ ನಿಟ್ಟಿನಲ್ಲಿ ಉತ್ತೇಜನ ನೀಡುತ್ತಿದ್ದರು ಎನ್ನುತ್ತಾರೆ ತಂದೆ ಕುಮಾರಸ್ವಾಮಿ. ಪ್ರತೀಕ್ಷಾ 20 ದಿನಗಳ ಹಿಂದೆ, ತಾನು ಸತ್ತರೆ ದೇಹವನ್ನು ಕೆಎಂಸಿಗೆ ದಾನ ಮಾಡಬೇಕೆಂದು ತಾಯಿಯ ಬಳಿ ಹೇಳಿದ್ದಳು. ಅದರಂತೆ ಗುರುವಾರ ದೇಹವನ್ನು ಹಸ್ತಾಂತರಿಸಲಾಯಿತು.
ಡಾಕ್ಟರ್ ಆಗುವ ಆಸೆ ಇತ್ತು
ಪ್ರತೀಕ್ಷಾಳಿಗೆ ತಾನು ಡಾಕ್ಟರ್ ಆಗಬೇಕೆಂಬ ಆಸೆ ಇತ್ತು. ಇದಕ್ಕೆ ಪೂರಕವಾಗಿ ವಿಜ್ಞಾನದಲ್ಲಿ ಆಸಕ್ತಿ ಹೆಚ್ಚಿತ್ತು. ಈ ಹಿನ್ನೆಲೆಯಲ್ಲಿ ಆಕೆ ತನ್ನ ದೇಹದಾನ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿರಬಹುದು ಎಂದು ತಂದೆ ತಿಳಿಸಿದರು.
ಅವಳ ಇಚ್ಛೆ ಪೂರೈಸಿದೆವು
ದೇಹದಾನ ಎಂಬುದು ನಮ್ಮ (ಬ್ರಾಹ್ಮಣ) ಸಂಪ್ರದಾಯದಲ್ಲಿ ಇಲ್ಲ. ಆದರೂ ಆಕೆಯ ಇಚ್ಛೆಯನ್ನು ನಾವು ಈಡೇರಿಸುವ ನಿಟ್ಟಿನಲ್ಲಿ ಇದಕ್ಕೆ ಒಪ್ಪಿಗೆ ಸೂಚಿಸಿದೆವು.
– ಕುಮಾರಸ್ವಾಮಿ ಕೊಕ್ಕಡ, (ತಂದೆ)
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.