“ಧನಾತ್ಮಕ ಚಿಂತನೆಗಳಿಂದ ಸಮಾಜಮುಖೀಯಾದಾಗ ಬದುಕು ಸಾರ್ಥಕ’


Team Udayavani, Oct 15, 2019, 5:54 AM IST

Danatmaka-chintane

ಬದಿಯಡ್ಕ: ಸಕಾರಾತ್ಮಕ ಕ್ರಿಯೆಗಳಿಂದ ಮಾನವ ಜೀವನ ಸುಖಮಯವಾಗಿ ಸಾಗುತ್ತದೆ. ನುಡಿ-ನಡೆ, ವೃತ್ತಿ- ಪ್ರವೃತ್ತಿಗಳಲ್ಲಿ ಧನಾತ್ಮಕ ಚಿಂತನೆಗಳೊಂದಿಗೆ ಸಮಾಜಮುಖೀಯಾಗಿ ವ್ಯವಹರಿಸಿದಾಗ ಬದುಕಿನ ಸಾರ್ಥಕತೆಯ ಸಾಫಲ್ಯ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕಲಾಸೇವೆಯು ಎಲ್ಲಾ ವಿಧಗಳಲ್ಲೂ ಮನೋತƒಪ್ತಿಗೆ ಕಾರಣವಾಗಿ ನೆಮ್ಮದಿ ಒದಗಿಸುತ್ತದೆ ಎಂದು ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಅವರು ತಿಳಿಸಿದರು.

ಕೊಲ್ಲಂಗಾನ ದುರ್ಗಾ ಪರಮೇಶ್ವರಿ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ನಡೆದ ಸ್ಥಳೀಯ ಶ್ರೀ ಸುಬ್ರಹ್ಮಣ್ಯ ಯಕ್ಷಗಾನ ಕಲಾಸಂಘ ಆಯೋಜಿಸಿದ್ದ ಯಕ್ಷ ದಶವೈಭವದ ಸಮಾರೋಪದಲ್ಲಿ ಅವರು ಮಾತನಾಡಿದರು. ಕರಾವಳಿಯ ಹೆಮ್ಮೆಯ ಕಲೆಯಾದ ಯಕ್ಷಗಾನ ಇಂದು ಜಗದಗಲ ಖ್ಯಾತಿ ಪಡೆದಿರುವುದರ ಹಿಂದೆ ತಲತಲಾಂತರಗಳ ಪರಂಪರೆಗಳ ಅಪರಿಮಿತ ಸೇವೆಯ ಕೊಡುಗೆಗಳು ಎಂದಿಗೂ ಅಚ್ಚಳಿಯದ್ದು. ಕಲಾವಿದರ ಪ್ರಬುದ್ದತೆ, ಸಂಘಟಕರ ಚಾಕಚಕ್ಯತೆಯಿಂದ ಯಕ್ಷಗಾನದಂತಹ ಕಲೆಗಳು ಯಶಸ್ಸಿನಿಂದ ಮುನ್ನಡೆಯುತ್ತದೆ. ಆದರೆ ಇಂದಿನ ಬದಲಾದ ಕಾಲಮಾನದಲ್ಲಿ ಇವುಗಳು ಸವಾಲಾಗುತ್ತಿದೆ. ಆದರೆ ಕೊಲ್ಲಂಗಾನದ ವಿಶಿಷ್ಟ ಕಲಾಪ್ರೇಮ, ಸೇವಾ ಮನೋಭಾವ ಉತ್ತಮ ಕಲಾವಿದರ ತಂಡದೊಂದಿಗೆ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಅವರು ತಿಳಿಸಿದರು. ಸನಾತನ ಧರ್ಮ, ಭಾರತೀಯತೆಯ ಸಮƒದ್ದತೆಯನ್ನು ಕಾಪಡುವಲ್ಲಿ ಹಬ್ಬ-ಆಚರಣೆಗಳನ್ನು ಮೂಲ ಪರಿಕಲ್ಪನೆಗೆ ಧಕ್ಕೆಯಾಗದಂತೆ ಮುನ್ನಡೆಸುವಲ್ಲಿ ಸಮಸ್ತ ಹಿಂದೂ ಸಮಾಜ ಒಗ್ಗಟ್ಟಾಗಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭ ಹಿರಿಯ ಅಶಕ್ತ ಧಾರ್ಮಿಕ ಕರ್ಮಿ, ಪತ್ರಕರ್ತ ಭಾಸ್ಕರ ಕಲ್ಲಕಟ್ಟ ಅವರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಳಿಯಾರು ಕ್ಷೇತ್ರದ ಪ್ರಬಂಧಕ ಸೀತಾರಾಮ ಬಳ್ಳುಳ್ಳಾಯ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಗ್ರಾ.ಪಂ. ಮಾಜೀ ಸದಸ್ಯ ಮಂಜುನಾಥ ಡಿ.ಮಾನ್ಯ, ಧಾರ್ಮಿಕ, ಸಾಮಾಜಿಕ ಮುಖಂಡ ವೇಣುಗೋಪಾಲ ತತ್ವಮಸಿ ಬೋವಿಕ್ಕಾನ, ಸುಬ್ರಹ್ಮಣ್ಯ ಯಕ್ಷಗಾನ ಕಲಾಸಂಘದ ಗೌರವಾಧ್ಯಕ್ಷ ಕುಮಾರಸ್ವಾಮಿ ಭಟ್‌ ಪಟ್ಟಾಜೆ ಉಪಸ್ಥಿತರಿದ್ದು ಮಾತನಾಡಿದರು.

ಶರಣ್ಯ, ಮನೋಮಯಿ ಹಾಗೂ ಮನಸ್ವಿನಿ ಪ್ರಾರ್ಥನೆ ಹಾಡಿದರು. ಅನಂತ ಪ್ರಜ್ವಲ್‌ ಉಪಾಧ್ಯಾಯ ಸ್ವಾಗತಿಸಿ, ರವಿಶಂಕರ ಶೆಟ್ಟಿ ಕೊಲ್ಲಂಗಾನ ವಂದಿಸಿದರು. ಸುಂದರ ಶೆಟ್ಟಿ ಕೊಲ್ಲಂಗಾನ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶರನ್ನವರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಸಭಾ ಕಾರ್ಯಕ್ರಮದ ಮೊದಲು ವಿಶೇಷ ರಂಗಪೂಜೆ ನೆರವೇರಿತು. ಬಳಿಕ ನೀರ್ಚಾಲಿನ ವಿN°àಶ್ವರ ಯಕ್ಷಗಾನ ಕಲಾಸಂಘದವರಿಂದ ಚಕ್ರೇಶ್ವರ ಪರೀಕ್ಷಿತ ಯಕ್ಷಗಾನ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.