ಗುತ್ತಿಗೆದಾರರು ಸಿಗದೆ ಸಾರ್ವಜನಿಕ ಶೌಚಾಲಯಗಳಿಗೆ ಬೀಗ


Team Udayavani, Feb 1, 2018, 9:20 AM IST

1-Feb-1.jpg

ಸುರತ್ಕಲ್‌ : ಇಲ್ಲಿಯ ಬಸ್‌ ನಿಲ್ದಾಣದ ಸಮೀಪ ಇಟ್ಟ ಇ-ಟಾಯ್ಲೆಟ್‌ ಗೆ ಹೋಗಲು ಮಹಿಳೆಯರು, ವಿದ್ಯಾರ್ಥಿಗಳು ಮುಜುಗರ ಪಡುತ್ತಾರೆ. ಕಾರಣ ಎಲ್ಲರಿಗೂ ಕಾಣುವಂತೆ ಒಳಹೋಗಲು ಸಾರ್ವಜನಿಕರು ಅದರಲ್ಲಿಯೂ ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ.

ಸುರತ್ಕಲ್‌ ಬಸ್‌ ನಿಲ್ದಾಣದ ಬಳಿ ಇಡಲಾದ ಇ-ಟಾಯ್ಲೆಟ್‌ ಎತ್ತರದಲ್ಲಿದ್ದು, ವಯೋವೃದ್ಧರು ಹತ್ತಲಾರದ ಸ್ಥಿತಿಯಲ್ಲಿದೆ. ಇನ್ನು ಇದಕ್ಕೆ ಎದುರು ಬದಿ ತಡೆಯಿಲ್ಲದ ಕಾರಣ ಎಲ್ಲರ ಮುಂಭಾಗದಲ್ಲಿ ಶೌಚಕ್ಕೆ ಒಳ ಹೋಗಲು ಸಾರ್ವಜನಿಕರು ಮುಜುಗರವಾಗುತ್ತದೆ.

ಸಾರ್ವಜನಿಕ ಶೌಚಾಲಯಗಳಿಗೆ ಬೀಗ!
ಸುರತ್ಕಲ್‌, ಬೈಕಂಪಾಡಿ ಮತ್ತಿತರೆಡೆ ಲಕ್ಷ ಲಕ್ಷ ಖರ್ಚು ಮಾಡಿ ಸಾರ್ವಜನಿಕ ಶೌಚಾಲಯ ಕಟ್ಟಿದರೂ ಬೀಗ ಜಡಿಯಲಾಗಿದೆ. ಹೀಗಾಗಿ ಬಳಕೆಗೆ ಸಿಗದೆ ಸ್ಥಳೀಯರು ಬಯಲು ಶೌಚಾಲಯಕ್ಕೆ ಹೋಗುವುದು ಅನಿವಾರ್ಯವೆನಿಸಿದೆ.

ಬಹು ವೆಚ್ಚದ ಶೌಚಾಲಯ
ಸಾರ್ವಜನಿಕ ಶೌಚಾಲಯ ನಿರ್ವಹಣೆಗೆ ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗ ಟೆಂಡರಿಗೆ
ಆಹ್ವಾನ ನೀಡಿದ್ದರೂ ಗುತ್ತಿಗೆದಾರರು ಬಾರದೆ ಇರುವುದು ಶೌಚಾಲಯಗಳು ಬಳಕೆಗೆ ಸಿಗದೆ ಇರಲು ಕಾರಣ.
ಸುಮಾರು 5ರಿಂದ 6 ಲಕ್ಷ ರೂ. ವೆಚ್ಚ ಮಾಡಿ ಶೌಚಾಲಯ ನಿರ್ಮಿಸಲಾಗಿದೆ. ನಿರ್ವಹಣೆಗೆ ನೀಡಿದಲ್ಲಿ ಶುಚಿತ್ವದ
ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಅನಿವಾರ್ಯವಾಗಿ ಪಾಲಿಕೆ ಬೀಗ ಜಡಿದಿದೆ.

ಇದ್ದೂ ಇಲ್ಲದಂತಾಗಿದೆ
ಬೀಚ್‌ ಬಳಿ ಇರುವ ಶೌಚಾಲಯ ಸಮುದ್ರ ತೀರದಲ್ಲಿ ಆಟವಾಡಿ ಬಂದು ಸ್ನಾನ ಮಾಡಲು, ಬಟ್ಟೆ ಬದಲಾಯಿಸಲು
ಬಳಕೆಯಾಗುತ್ತಿತ್ತು. ಇದೀಗ ಬಾಗಿಲು ಮುರಿದಿದ್ದು, ಬಳಕೆ ಸಿಗದ ಸ್ಥಿತಿಯಲ್ಲಿದೆ. ಒಟ್ಟಿನಲ್ಲಿ ಲಕ್ಷ ಲಕ್ಷ ಖರ್ಚು ಮಾಡಿ
ನಿರ್ಮಿಸಿದ ಶೌಚಾಲಯಗಳು ಸಾರ್ವಜನಿಕರ ಬಳಕೆಗೆ ಸಿಗದೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಆಗಿದೆ.

ಪರಿಶೀಲನೆ ನಡೆಸಲಾಗುವುದು
ಸುರತ್ಕಲ್‌, ಬೈಕಂಪಾಡಿ ಸಹಿತ ವಿವಿಧೆಡೆ ಶೌಚಾಲಯ ಸಿದ್ಧಗೊಂಡಿದ್ದು, ಸಾರ್ವಜನಿಕರಿಗೆ ಲಭ್ಯವಿಲ್ಲ ಎಂಬುದು ತಿಳಿದಿಲ್ಲ. ಪಾಲಿಕೆಯ ಕಂದಾಯ ಇಲಾಖೆಗೆ ಒಳಪಟ್ಟಿದ್ದರೆ ಅದನ್ನು ಸ್ಥಳೀಯರಿಗೆ ನಿರ್ವಹಣೆ ಮಾಡಲು ನೀಡುವ ಬಗ್ಗೆ ಯೋಚಿಸಲಾಗುವುದು. ಶೌಚಾಲಯ ನಿರ್ವಹಣೆಯಿಂದ ಪಾಲಿಕೆ ಆದಾಯ ನಿರೀಕ್ಷಿಸುತ್ತಿಲ್ಲ. ಇನ್ನು ಇ-ಟಾಯ್ಲೆಟ್‌ ಎಲ್ಲೆಡೆ ಬಳಕೆಯಾಗುತ್ತಿದೆ. ಅನನುಕೂಲವಿದ್ದಲ್ಲಿ ಪರಿಶೀಲನೆ ನಡೆಸಲಾಗುವುದು.
ಮೊಹಮ್ಮದ್‌ ನಝೀರ್‌, ಆಯುಕ್ತರು,
   ಮನಪಾ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.