ಬಾಕಿ ಸಾಲ ಮನ್ನಾ ಮೊತ್ತ : ಸೆ.30ರೊಳಗೆ ಪಾವತಿಗೆ ಕ್ರಮ
Team Udayavani, Sep 20, 2019, 4:30 AM IST
ಮಂಗಳೂರು: ವಿವಿಧ ತಾಂತ್ರಿಕ ಕಾರಣಗಳಿಂದಾಗಿ ರೈತರಿಗೆ ಬಾಕಿಯಿರುವ ಸಾಲ ಮನ್ನಾ ಮೊತ್ತ ಪಾವತಿಸಲು ಸರಕಾರ ಕ್ರಮ ಕೈಗೊಂಡಿದ್ದು, ಸೆ.30ರೊಳಗೆ ಎಲ್ಲ ಅರ್ಹ ರೈತರಿಗೆ ಹಣ ಬಿಡುಗಡೆಯಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಂಜುನಾಥ ಸಿಂಗ್ ತಿಳಿಸಿದ್ದಾರೆ.
ಜಿಲ್ಲೆಯ ಕೆಲವು ರೈತರಿಗೆ ಇನ್ನೂ ಸಾಲ ಮನ್ನಾ ಮೊತ್ತ ಪಾವತಿ ಆಗದಿರುವ ಬಗ್ಗೆ ಮಾಹಿತಿ ನೀಡಬೇಕು ಮತ್ತು ಬಾಕಿಯಿರುವ ಎಲ್ಲ ರೈತರಿಗೆ ಸೆ.30ರೊಳಗೆ ಪಾವತಿ ಮಾಡಬೇಕು ಎಂದು ಒತ್ತಾಯಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಶಿರಾಡಿ ನೇತೃತ್ವದಲ್ಲಿ ರೈತರ ನಿಯೋಗವು ಎಸ್ಕೆಡಿಸಿಸಿ ಬ್ಯಾಂಕ್ನಲ್ಲಿ ಗುರುವಾರ ಮನವಿ ಸಲ್ಲಿಸಿತು.
ಮನವಿಗೆ ಉತ್ತರಿಸಿದ ಸಿಂಗ್, ತಾಂತ್ರಿಕ ಕಾರಣಗಳಿಂದಾಗಿ ಪಾವತಿ ಬಾಕಿಯಿರುವ ಎಲ್ಲ ಅರ್ಹ ರೈತರ ದಾಖಲೆಗಳನ್ನು ಸೆ.25ರೊಳಗೆ ಸರಿ ಪಡಿಸಿ, ಸೆ.30ರೊಳಗೆ ರೈತರ ಖಾತೆಗಳಿಗೆ ಹಣ ಸಂದಾಯವಾಗುವಂತೆ ಮಾಡಬೇಕು ಎಂದು ಈಗಾಗಲೇ ಸಿಎಂ ಸೂಚನೆ ನೀಡಿದ್ದಾರೆ. ಈ ಸಂಬಂಧ ಸೆ.20ರಂದು ಬೆಳಗ್ಗೆ 9.30ಕ್ಕೆ ಅವರು ಎಲ್ಲ ಜಿಲ್ಲೆಗಳಲ್ಲಿ ಸಹಕಾರ ಸಂಸ್ಥೆಗಳ ಅಧಿಕಾರಿಗಳ ಜತೆಗೆ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ ಎಂದರು.
ಬಾಕಿಗೆ ಕಾರಣಗಳು
ರೈತರ ಆಧಾರ್ ಕಾರ್ಡ್, ಪಹಣಿ ಪತ್ರ ಮತ್ತು ಪಡಿತರ ಚೀಟಿ ಹೊಂದಾಣಿಕೆಯಾಗದಿದ್ದರೆ, ಅರ್ಜಿಯಲ್ಲಿ ನಮೂದಿಸಿದ ಬ್ಯಾಂಕ್ ಖಾತೆ ಮತ್ತು ಐಎಫ್ಎಸ್ ಕೋಡ್ ಸಂಖ್ಯೆಗಳಲ್ಲಿ ವ್ಯತ್ಯಾಸಗಳಿದ್ದರೆ ಅಥವಾ ಅರ್ಜಿ ದಾರ ರೈತನ ಜಮೀನು ಇಲ್ಲಿದ್ದು ಆಧಾರ್ ಕಾರ್ಡ್ ಬೇರೆ ರಾಜ್ಯದಲ್ಲಿದ್ದರೆ ಸಾಲಮನ್ನಾ ಮೊತ್ತ ಪಾವತಿ ಸಮಸ್ಯೆ ಸೃಷ್ಟಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸರಕಾರ ಭೂಮಿ ಸಾಫ್ಟ್ವೇರ್ ಆನ್ಲಾಕ್ ಮಾಡಿ ತಪ್ಪು ಸರಿಪಡಿಸಲು ಅವಕಾಶ ನೀಡಿದೆ. ಅದರಂತೆ ಸರಿಪಡಿಸುವ ಕಾರ್ಯ ಆರಂಭಗೊಂಡಿದೆ. ರೈತರ ಸಾಲಮನ್ನಾ ಬಾಕಿ ಹಣ ಸರಕಾರಕ್ಕೆ ವಾಪಸ್ ಹೋಗುವುದಿಲ್ಲ; ಅಪೆಕ್ಸ್ ಬ್ಯಾಂಕಿನ ಖಾತೆಯಲ್ಲಿರುತ್ತದೆ ಎಂದು ಮಂಜುನಾಥ್ ಸಿಂಗ್ ತಿಳಿಸಿದರು. ಎಸ್ಸಿಡಿಸಿಸಿ ಬ್ಯಾಂಕಿನ ಸಿಇಒ ಬಿ. ರವೀಂದ್ರ ಉಪಸ್ಥಿತರಿದ್ದರು. ನಿಯೋಗದಲ್ಲಿ ಕಿಶೋರ್ ಶಿರಾಡಿ, ದಾಮೋದರ ಗುಂಡ್ಯ, ಹೇಮಚಂದ್ರ, ಸನ್ನಿ ಕೆ.ಎಸ್. ಮತ್ತು ಮಾರ್ಕೊಸ್ ಅಡ್ಡಹೊಳೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
MUST WATCH
ಹೊಸ ಸೇರ್ಪಡೆ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್, ಸುಜೀತ್