ಬೆಳ್ತಂಗಡಿ: ಕ್ಷೇತ್ರ ಪುನರ್‌ ವಿಂಗಡಣೆ

 ತಾಲೂಕು ಪಂಚಾಯತ್‌ನ 5 ಸ್ಥಾನ ಇಳಿಕೆ, ಜಿಲ್ಲಾ ಪಂಚಾಯತ್‌ನ 1 ಸ್ಥಾನ ಏರಿಕೆ

Team Udayavani, Feb 13, 2021, 2:40 AM IST

ಬೆಳ್ತಂಗಡಿ: ಕ್ಷೇತ್ರ ಪುನರ್‌ ವಿಂಗಡಣೆ

ಬೆಳ್ತಂಗಡಿ: ತಾ.ಪಂ., ಹಾಗೂ ಜಿ.ಪಂ. ಚುನಾವಣೆ ಸಮೀಪಿಸುತ್ತಿರುವಂತಯೇ ಕ್ಷೇತ್ರ ಪುನರ್‌ ವಿಂಗಡಣೆ ಮಾಡುವ ನಿಟ್ಟಿನಲ್ಲಿ ರಾಜ್ಯ ಚುನಾವಣ ಆಯೋಗವು ಆದೇಶ ಹೊರಡಿಸಿದ್ದು, ಫೆ.17ರೊಳಗಾಗಿ ಪುನರ್‌ ವಿಂಗಡಣೆ ಪ್ರಕ್ರಿಯೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡುವಂತೆ ಆಯಾಯಾ ತಾಲೂಕುಗಳಿಗೆ ಸೂಚನೆ ಹೊರಡಿಸಿದೆ.

ಅದರಂತೆ ಬೆಳ್ತಂಗಡಿ ತಾಲೂಕಿನಲ್ಲಿ ತಾ.ಪಂ. 21ಹಾಗೂ ಜಿ.ಪಂ. 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಹಿಂದೆ ತಾ.ಪಂ. 26 ಕ್ಷೇತ್ರಗಳಿದ್ದು 21ಕ್ಕೆ ಇಳಿದಿದೆ. 7 ಕ್ಷೇತ್ರಗಳಿದ್ದ ಜಿ.ಪಂ. 8 ಕ್ಷೇತ್ರಕ್ಕೆ ಏರಿಕೆಯಾಗಿದೆ. ಪ್ರತೀ ತಾ.ಪಂ. ಚುನಾವಣ ಶಾಖೆಯಿಂದ ರಾಜ್ಯ ಚುನಾವಣಾ ಆಯೋಗದ ನಿರ್ದೇ ಶನದಂತೆ ತಾ.ಪಂ. ಜಿ.ಪಂ. ವಿಂಗಡಣೆ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ.

ಜನಸಂಖ್ಯೆವಾರು, ಗ್ರಾ.ಪಂ. ವಾರು, ಭೌಗೋಳಿಕವಾರು ವಿಂಗಡಣೆ ಪ್ರಕ್ರಿಯೆ ನಡೆಸಬೇಕಿದೆ. ಈಗಾಗಲೇ ಒಂದು ಗ್ರಾಮ ಪಂಚಾಯತ್‌ ವ್ಯಾಪ್ತಿಗೊಳಪಟ್ಟಂತೆ ಎರಡು ಅಥವಾ ಮೂರು ಗ್ರಾಮಗಳಿದ್ದಲ್ಲಿ ಯಾವುದೇ ಕಾರಣಕ್ಕೂ ಗ್ರಾಮ ಪ್ರತ್ಯೇಕಿಸುವಂತಿಲ್ಲ. ಸಮೀಪದ ಗ್ರಾಮವನ್ನು ಪರಿಗಣಿಸಿ ವಿಂಗಡಿಸಬೇಕಿದೆ.

ತಾ.ಪಂ., ಜಿ.ಪಂ. ಜನಸಂಖ್ಯೆ ಮಿತಿ :

ಹಿಂದೆ ತಾ.ಪಂ. ಕ್ಷೇತ್ರವಾರು ವಿಂಗಡಣೆಗೆ 10 ಸಾವಿರ ಜನಸಂಖ್ಯೆ ಆಧರಿಸಲಾಗಿತ್ತು. ಪ್ರಸಕ್ತ ಬೆಳ್ತಂಗಡಿಯಲ್ಲಿ ತಾ.ಪಂ. ಕ್ಷೇತ್ರ 26ರಿಂದ 21 ಕ್ಷೇತ್ರಗಳಿಗೆ ಇಳಿಕೆಯಾಗಿದ್ದರಿಂದ ಜನಸಂಖ್ಯೆವಾರು ವಿಂಗಡಣೆ ಸಾಮರ್ಥ್ಯ 12,500 ಕ್ಕೆ ಏರಿಸಲಾಗಿದೆ. ಜಿ.ಪಂ. ಕ್ಷೇತ್ರವಾರು ವಿಂಗಡಣೆಗೆ 35,000 ಮಿತಿ ನೀಡಲಾಗಿದೆ ಎಂದು ಚುನಾವಣ ಶಾಖೆಯ ನಾರಾಯಣ ಗೌಡ ತಿಳಿಸಿದ್ದಾರೆ.

ಪ್ರಾಥಮಿಕವಾಗಿ ಕ್ಷೇತ್ರವಾರು ವಿಂಗಡಣೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಫೆ. 17ರೊಳಗಾಗಿ ಜಿಲ್ಲಾಧಿಕಾರಿಗೆ ಒಪ್ಪಿಸಬೇಕಿದೆ. ಬಳಿಕ ಡಿಸಿ ರಾಜ್ಯ ಚುನಾವಣ ಆಯೋಗಕ್ಕೆ ಸಲ್ಲಿಸಿದ ಬಳಿಕ ರಾಜ್ಯ ಸರಕಾರವು ಕರಡು ಪ್ರತಿ ರಚಿಸಿ ಈ ತಿಂಗಳ ಒಳಗಾಗಿ ಸಾರ್ವಜನಿಕರ ಗಮನಕ್ಕೆ ತರುವ ಸಾಧ್ಯತೆ ಇದೆ. ಜೂನ್‌ ತಿಂಗಳಲ್ಲಿ ತಾ.ಪಂ. ಅವಧಿ ಕೊನೆಗೊಳ್ಳಲಿದ್ದು, ಶೀಘ್ರ ಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಪ್ರಸಕ್ತ ಪ್ರಕ್ರಿಯೆಗಳು ವೇಗ ಪಡೆಯಲಿದೆ.

ಮೇಲ್ದರ್ಜೆಗೆ ಬೇಡಿಕೆ :

ಬೆಳ್ತಂಗಡಿ ತಾಲೂಕಿನಲ್ಲಿ ಬೆಳ್ತಂಗಡಿ ಪ.ಪಂ. ಹೊರತುಪಡಿಸಿ ಅತೀ ಹೆಚ್ಚು 34 ವಾರ್ಡ್‌ ಹಾಗೂ ಜನಸಂಖ್ಯೆ ಆಧಾರವಾಗಿ ನೋಡಿದಲ್ಲಿಯೂ ಉಜಿರೆ ಗ್ರಾ.ಪಂ. ಅತೀ ದೊಡ್ಡ ಗ್ರಾ.ಪಂ. ಆಗಿದೆ. ಉಜಿರೆಯನ್ನು ನಗರ ಸ್ಥಳೀಯ ಸಂಸ್ಥೆಯಾಗಿ ಮೇಲ್ದರ್ಜೆಗೇರಿಸಬೇಕೆಂಬ ಕೂಗು ಕೇಳಿಬಂದಿತ್ತು. ಆದರೂ ಮೇಲ್ದರ್ಜೆಗೇರಿಲ್ಲ. ಈ ಮಧ್ಯೆ ಮತ್ತೆ ತಾ.ಪಂ. 5 ಕ್ಷೇತ್ರಗಳು ಇಳಿಕೆಯಾಗಿದ್ದು, 1 ಜಿ.ಪಂ.ಕ್ಷೇತ್ರ ಏರಿಕೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಪುನರ್‌ ವಿಂಗಡಣೆ ಪ್ರಕ್ರಿಯೆಯಿಂದಾಗಿ ರಾಜಕೀಯ ಪಕ್ಷಗಳು ಲಾಭ ನಷ್ಟದ ಲೆಕ್ಕಾಚಾರದಲ್ಲಿ ತೊಡಗಿದೆ.

ಬೆಳ್ತ‌ಂಗಡಿ ತಾಲೂಕಿನಲ್ಲಿ ತಾ.ಪಂ. 5 ಕ್ಷೇತ್ರಗಳು ಇಳಿಕೆಯಾಗಿದ್ದು, ಜಿ.ಪಂ. 1 ಕ್ಷೇತ್ರ ಏರಿಕೆಯಾಗಿದೆ. ಪುನರ್‌ ವಿಂಗಡಣೆಗೆ ಬೇಕಾದ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ರಾಜ್ಯ ಸರಕಾರದ ಸೂಚನೆಯಂತೆ ಪ್ರಕ್ರಿಯೆ ನಡೆಸಲಾಗುತ್ತದೆ.ಮಹೇಶ್‌ ಜೆ., ತಹಶೀಲ್ದಾರ್‌

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.