ಸ್ಥಳೀಯಾಡಳಿತ ಸದಸ್ಯರ ಆಸ್ತಿ ವಿವರ ಆನ್‌ಲೈನ್‌ನಲ್ಲಿ


Team Udayavani, Apr 12, 2018, 9:15 AM IST

Karnataka-State-Election-Commission-600.jpg

ಮಂಗಳೂರು: ಒಂದೆಡೆ, ರಾಜ್ಯ ವಿಧಾನಸಭಾ ಚುನಾವಣೆಗೆ ನಾನಾ ಪಕ್ಷಗಳಿಂದ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಯುತ್ತಿರಬೇಕಾದರೆ, ಇನ್ನೊಂದೆಡೆ ಜಿ.ಪಂ., ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಸದಸ್ಯರು ತಮ್ಮ ಹಾಗೂ ಕುಟುಂಬದ ಆಸ್ತಿ, ಹೊಣೆಗಾರಿಕೆಯನ್ನು ಆನ್‌ಲೈನ್‌ ಮೂಲಕ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗ ಕಡ್ಡಾಯಗೊಳಿಸಿದೆ. ಇದರಿಂದ ಇನ್ನುಮುಂದೆ, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಆಸ್ತಿ ವಿವರಗಳು ಕೂಡ ಸಾರ್ವಜನಿಕರಿಗೆ ಲಭ್ಯವಾಗುವ ಮೂಲಕ ಹೆಚ್ಚು ಪಾರದರ್ಶಕವೆನಿಸಿಕೊಳ್ಳಲಿದೆ. ಇಲ್ಲಿಯವರೆಗೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮ ಆಸ್ತಿ ಹಾಗೂ ಹೊಣೆಗಾರಿಕೆ ವಿವರದ ಪ್ರತಿಯನ್ನು ಕೈಬರಹದ ಮೂಲಕ ಆಯೋಗಕ್ಕೆ ಸಲ್ಲಿಸಬೇಕಿತ್ತು. ಆದರೆ, ಸ್ಥಳೀಯ ಜನಪ್ರತಿನಿಧಿಗಳ ಆಸ್ತಿ ಹಾಗೂ ಹಾಗೂ ಹೊಣೆಗಾರಿಕೆ ವಿವರ ಸಾರ್ವಜನಿಕರಿಗೆ ಮುಕ್ತವಾಗಿ ದೊರಕಬೇಕು ಹಾಗೂ ಪಾರದರ್ಶಕವಾಗಿರಬೇಕು ಎಂಬ ಉದ್ದೇಶದಿಂದ ಕೈಬರಹದ ಮೂಲಕ ಸಲ್ಲಿಸುವುದರ ಬದಲಿಗೆ ಆನ್‌ಲೈನ್‌ ಮೂಲಕವೇ ನೀಡಬೇಕೆಂದು ಸಾರ್ವಜನಿಕರಿಗೂ ನೋಡಲು ಸಿಗಲಿದೆ.

ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ನಿಯಮಾನುಸಾರ ಪ್ರತಿ ವರ್ಷ ಸಲ್ಲಿಸಬೇಕಾಗಿರುವ ಅವರ ಹಾಗೂ ಅವರ ಕುಟುಂಬದ ಆಸ್ತಿ ಘೋಷಣೆ ನಮೂನೆಯನ್ನು ಆನ್‌ಲೈನ್‌ ಮೂಲಕ ಸಲ್ಲಿಸಲು ಎನ್‌ಐಸಿ ಮುಖೇನ ತಂತ್ರಾಂಶವನ್ನು ಸಿದ್ಧಪಡಿಸಲಾಗಿದೆ. ಈಗಾಗಲೇ ಬಹುತೇಕ ಜಿ.ಪಂ, ತಾ.ಪಂ ಹಾಗೂ ಗ್ರಾಮ ಪಂಚಾಯತ್‌ ಚುನಾಯಿತ ಜನಪ್ರತಿನಿಧಿಗಳು ತಮ್ಮ ಆಸ್ತಿ, ಹೊಣೆಗಾರಿಕೆಯನ್ನು ಆನ್‌ಲೈನ್‌ ಮೂಲಕ ನಮೂದು ಮಾಡುತ್ತಿದ್ದಾರೆ. ಪ್ರಾಥಮಿಕವಾಗಿ ಸದಸ್ಯರ ಹೆಸರುಗಳನ್ನು ಸಂಬಂಧಪಟ್ಟ ಕ್ಷೇತ್ರಗಳಿಗೆ ಮ್ಯಾಪ್‌ ಮಾಡಬೇಕಿದೆ. ಮ್ಯಾಪಿಂಗ್‌ ತಂತ್ರಾಂಶ ಬಳಸಲು ಆಯೋಗದ ವೆಬ್‌ಸೈಟ್‌ www.karsec.gov.inಗೆ ಲಾಗಿನ್‌ ಆಗಬೇಕಿದೆ. ಅದರಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಅಥವಾ ಗ್ರಾಮ ಪಂಚಾಯತ್‌ ಆಯ್ಕೆ ಮಾಡಿ ಸಂಬಂಧಪಟ್ಟ ಕ್ಷೇತ್ರವನ್ನು ಆರಿಸಬೇಕು. ಆಯಾಯಾ ಸ್ಥಳೀಯ ಸಂಸ್ಥೆಗಳಲ್ಲಿ ಆನ್‌ಲೈನ್‌ ನೋಂದಣಿ ಮಾಡಿಸಬೇಕಿದೆ. ಗ್ರಾ.ಪಂ. ಸದಸ್ಯರು ಆನ್‌ಲೈನ್‌ ಮೂಲಕ ನೋಂದಣಿ ಮಾಡುವಾಗ ಪಿಡಿಓ ಅವರ ಮೊಬೈಲ್‌ ಸಂಖ್ಯೆಗೆ ಆರು ಸಂಖ್ಯೆಯ ಓಟಿಪಿ ಬರುತ್ತದೆ. ಈ ಓಟಿಪಿಯನ್ನು ತಂತ್ರಾಂಶದಲ್ಲಿ ದಾಖಲಿಸಬೇಕು. ಅದರ ಮುಖೇನ ಆಸ್ತಿ ಕುರಿತ ಫಾರಂನಲ್ಲಿ ವಿವರಗಳನ್ನು ಭರ್ತಿ ಮಾಡಬೇಕು. ಸದಸ್ಯರ ಕುಟುಂಬದವರ ವಿವರಗಳನ್ನು ಕೂಡ ನಮೂದಿಸಬೇಕಿದೆ. ಒಂದು ವೇಳೆ ಸದಸ್ಯರ ಹೆಸರು ಆನ್‌ಲೈನ್‌ ಮೂಲಕ ನೋಂದಣಿ ಮಾಡುವ ವೇಳೆ ಅವರ ಕ್ಷೇತ್ರಗಳ ಎದುರು ಬಾರದೇ ಇದ್ದರೆ ಅಂತಹ ಸದಸ್ಯರುಗಳನ್ನು ತಮಗೆ ಮುಂದೆ ನೀಡಲಾಗುವ ‘ಸೂಪರ್‌ ಯೂಸರ್‌ ಅಡ್ಮಿನ್‌’ ಲಾಗಿನ್‌ ಮೂಲಕ ಹೊಸ ಸದಸ್ಯರನ್ನು ಸೇರಿಸಲು ಅವಕಾಶವಿದೆ.

ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತ್‌ ಸದಸ್ಯರು ಅವರ ವಾರ್ಷಿಕ ಆಸ್ತಿ ಹಾಗೂ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸದಿದ್ದಲ್ಲಿ ಅಥವಾ ತಪ್ಪು ವಿವರಗಳನ್ನು ಸಲ್ಲಿಸಿದ್ದಲ್ಲಿ ಅವರನ್ನು ಅನರ್ಹಗೊಳಿಸುವ ಅಧಿಕಾರ ರಾಜ್ಯ ಚು.ಆಯೋಗಕ್ಕೆ ನೀಡಲಾಗಿದೆ. ಆನ್‌ಲೈನ್‌ ಮೂಲಕ ಆಸ್ತಿ ಹಾಗೂ ಹೊಣೆಗಾರಿಕೆ ವಿವರಗಳನ್ನು ಘೋಷಣೆ ಮಾಡಿದ ನಂತರ ಪುನಃ ಅದರ ಪ್ರತಿಯನ್ನು ಆಯೋಗಕ್ಕೆ ಸಲ್ಲಿಸುವ ಆವಶ್ಯಕತೆ ಇಲ್ಲ ಎಂದು ವೆಬ್‌ಸೈಟ್‌ನಲ್ಲಿ ತಿಳಿಸಿದೆ. 

ಹಣ, ಆಸ್ತಿ, ಒಡವೆ, ಮಾಹಿತಿ
ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಉಲ್ಲೇಖೀಸಿದಂತೆ, ನಮೂನೆ 1ರ ಕ್ರಮ ಸಂಖ್ಯೆ 1ರಲ್ಲಿ ಸದಸ್ಯರ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು. ಕ್ರ.ಸಂಖ್ಯೆ 2ರಲ್ಲಿ ಕುಟುಂಬದ ಸದಸ್ಯರ ಹೆಸರು ಸಂಬಂಧದ ದಾಖಲು ಮಾಡಬೇಕು. 3ರಲ್ಲಿ ಸದಸ್ಯರ ಒಟ್ಟು ವಾರ್ಷಿಕ ಆದಾಯ ನಮೂದಿಸಬೇಕು. ಬ್ಯಾಂಕ್‌, ನಿಗಮ, ಮಂಡಳಿಗಳಲ್ಲಿ ತೊಡಗಿಸಿರುವ ಹಣದ ವಿವರ, ಆಭರಣಗಳು, ಜಾನುವಾರುಗಳ ವಿವರ, 5000ರೂ.ಗಳಿಗಿಂತ ಅಧಿಕ ಬೆಲೆ ಬಾಳುವ ಟಿ.ವಿ. ರೆಫ್ರಿಜರೇಟರ್‌ ಸೇರಿದಂತೆ ಜನಪ್ರತಿನಿಧಿಯ ಮನೆಯಲ್ಲಿ ಬಳಕೆಯಲ್ಲಿರುವ ವಸ್ತುಗಳು, ವಾಹನಗಳ ಬಗ್ಗೆ ದಾಖಲಾತಿ ಮಾಡಬೇಕಿದೆ. ಜತೆಗೆ ಕೃಷಿ ಜಮೀನಿನ ವಿವರ, ಕಟ್ಟಡ ನಿರ್ಮಿಸಿದ ಕೃಷಿಯೇತರ ಜಮೀನಿನ ವಿವರ, ಕಟ್ಟಡಗಳ ವಿವರ ಹಾಗೂ ಇತರ ಸ್ಥಿರಾಸ್ತಿಗಳ ವಿವರವನ್ನೂ ನಮೂದಿಸಬೇಕಿದೆ.

— ದಿನೇಶ್‌ ಇರಾ

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.