ಶಾಸಕರು, ಜಿಲ್ಲಾಧಿಕಾರಿಗಳ ಭರವಸೆ: ಎಂಡೋ ಸಂತ್ರಸ್ತರ ಉಪವಾಸ ಅಂತ್ಯ


Team Udayavani, May 29, 2017, 10:50 AM IST

Endo-Sulfan-29-5.jpg

ನೆಲ್ಯಾಡಿ: ಎಂಡೋಸಲ್ಫಾನ್‌ ಹೋರಾಟ ಸಮಿತಿ ನೇತೃತ್ವದಲ್ಲಿ ಮೇ 27ರಂದು ಕೊಕ್ಕಡ ಜೋಡುಮಾರ್ಗದಲ್ಲಿ ಆರಂಭವಾದ ಎಂಡೋ ಸಂತ್ರಸ್ತರ ಬೃಹತ್‌ ಪ್ರತಿಭಟನೆ ಮೇ 28ರಂದು ಆಮರಣಾಂತ ಉಪವಾಸದತ್ತ ಹೊರಳಿತಾದರೂ ಶಾಸಕರಾದ ವಸಂತ ಬಂಗೇರ, ಕ್ಯಾ| ಗಣೇಶ್‌ ಕಾರ್ಣಿಕ್‌, ಜಿಲ್ಲಾಧಿಕಾರಿ ಜಗದೀಶ್‌, ಪುತ್ತೂರು ಎಸಿ ರಘುನಂದನ್‌ ಮೂರ್ತಿ, ಡಿಎಚ್‌ಒ ಡಾ| ರಾಮಕೃಷ್ಣ ರಾವ್‌ ಮೊದಲಾದವರು ಆಗಮಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಬಳಿಕ ಸಂಜೆಯ ವೇಳೆಗೆ ಸತ್ಯಾಗ್ರಹವನ್ನು ಹಿಂದೆಗೆದುಕೊಳ್ಳಲಾಯಿತು.

ಬೆಳಗ್ಗಿನಿಂದಲೇ ಎಲ್ಲ ಕಡೆಗಳ ಎಂಡೋ ಸಂತ್ರಸ್ತರು ಮತ್ತು ಹೋರಾಟ ಬೆಂಬಲಿಸುವ ಸಂಘ – ಸಂಸ್ಥೆಗಳ ಪದಾಧಿಕಾರಿಗಳು ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿದರು. 500ಕ್ಕೂ ಅಧಿಕ ಸಾರ್ವಜನಿಕರು ಮತ್ತು 10ಕ್ಕೂ ಮಿಕ್ಕಿ ಎಂಡೋ ಸಂತ್ರಸ್ತರು ಆಮರಣಾಂತ ಉಪವಾಸ ಸತ್ಯಾಗ್ರಹದ ಸಭೆಯಲ್ಲಿ ಭಾಗವಹಿಸಿದ್ದರು. ಮೇ 27ರಂದು ಪ್ರತಿಭಟನೆ ನಡೆಯಲಿರುವ ಸ್ಥಳಕ್ಕೆ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರು ಆಗಮಿಸಿ ನಮ್ಮ ಮನವಿ ಸ್ವೀಕರಿಸದಿದ್ದರೆ ಮರುದಿನದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ  ತಿಂಗಳ ಹಿಂದೆಯೇ ತಿಳಿಸಿದ್ದೆವು. ಸಂತ್ರಸ್ತರ ಬವಣೆ ಅರಿತಿದ್ದರೆ ಪ್ರತಿಭಟನ ಸ್ಥಳಕ್ಕೆ ಸಚಿವರು ಆಗಮಿಸಬೇಕಿತ್ತು. ಆದರೆ ಅವರು ನಮ್ಮ ಅಹವಾಲನ್ನು ಆಲಿಸಲು ಸಿದ್ಧರಿಲ್ಲದ ಕಾರಣ ಸಂಜೆ ರಸ್ತೆಗಿಳಿದು ಪ್ರತಿಭಟಿಸಲು ಸಿದ್ಧರಾಗಿದ್ದೇವೆ ಎಂದು ಹೋರಾಟಗಾರರು ಹೇಳಿದರು.

ಶಾಸಕರ ಭೇಟಿ
ಬೆಳ್ತಂಗಡಿ ಶಾಸಕ ವಸಂತ ಬಂಗೇರ ಅವರು ಮಧ್ಯಾಹ್ನ ಪ್ರತಿಭಟನ ಸಭೆಗೆ ಆಗಮಿಸಿ ಎಂಡೋ ಸಂತ್ರಸ್ತರ ಬೇಡಿಕೆಗಳ ಬಗ್ಗೆ ಈಗಾಗಲೇ ಸರಕಾರದಿಂದ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇನ್ನು ಹಲವು ಅಗತ್ಯ ಬೇಡಿಕೆಗಳು ಈಡೇರಲು ಬಾಕಿ ಇರುವ ವಿಷಯ ಪ್ರತಿಭಟನ ಸಭೆಯಲ್ಲಿ ತಮ್ಮ ಗಮನಕ್ಕೂ ತರಲಾಗಿದೆ. ಇದನ್ನು ಸಂಬಂಧಪಟ್ಟ ಆರೋಗ್ಯ ಸಚಿವರಿಗೆ ಮತ್ತು ಮುಖ್ಯಮಂತ್ರಿ ಗಮನಕ್ಕೆ ತರುವುದಾಗಿ ತಿಳಿಸಿದರು. ಪ್ರತಿಭಟನಕಾರರಲ್ಲಿ ಉಪವಾಸ ಸತ್ಯಾಗ್ರಹ ಕೈಬಿಡುವಂತೆ ವಿನಂತಿಸಿದರು. ವಿಧಾನ ಪರಿಷತ್‌ ವಿಪಕ್ಷ ಮುಖ್ಯ ಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌ ಭೇಟಿ ನೀಡಿ ಮಾತನಾಡಿ, ಜೂನ್‌ 4ರಂದು ಆರಂಭವಾಗಲಿರುವ ಉಭಯ ಸದನಗಳಲ್ಲೂ ನಮ್ಮ ಜಿಲ್ಲೆಯ ಎಂಡೋ ಸಮಸ್ಯೆ ಕುರಿತು ಚರ್ಚಿಸಲು ಬೇಕಾದ ನಿಲುವಳಿಗಳ ಬಗ್ಗೆ ಈಗಾಗಲೇ ಪರಿಷತ್‌ ಅಧ್ಯಕ್ಷರಲ್ಲಿ ಅನುಮತಿ ಪಡೆದುಕೊಂಡಿದ್ದು, ಈ ವಿಷಯದಲ್ಲಿ ಚರ್ಚೆಗೆ ಅವಕಾಶ ಕೇಳಲಿದ್ದೇವೆ ಎಂದರು.

ಪಿಡಿಒಗಳಿಗೆ ಹೊಣೆ
ನ್ಯಾಯವಾದಿ ಹರೀಶ್‌ ಪೂಂಜ ಮಾತನಾಡಿ, ಎಂಡೋ ಸಂತ್ರಸ್ತರು ಜಿಲ್ಲೆಯ ಎಲ್ಲ ತಾಲೂಕುಗಳ ಹೆಚ್ಚಿನ ಎಲ್ಲ ಗ್ರಾಮಗಳಲ್ಲಿಯೂ ಕಂಡುಬರುತ್ತಿದ್ದು, ಆಯಾಯ ಗ್ರಾಮಗಳಲ್ಲಿ ಎಂಡೋ ಸಂತ್ರಸ್ತರ ಸಮಸ್ಯೆಗಳ ಸ್ಪಂದನೆಗೆ ವಿಶೇಷ ಅಧಿಕಾರಿ ನಿಯಮಿಸಬೇಕು ಎಂದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಯಾವ ಕಡೆಗಳಲ್ಲಿ ಅವಶ್ಯ ಇದೆಯೋ ಆ ಗ್ರಾಮಗಳ ಪಿಡಿಒಗಳಿಗೆ ಈ ಹೊಣೆ ವಹಿಸುವುದಾಗಿ ತಿಳಿಸಿದರು.

ಬಜರಂಗ ದಳ ವೇಣೂರು ಪ್ರಖಂಡ ಸಂಚಾಲಕ ರಾಮ್‌ಪ್ರಸಾದ್‌ ಮರೋಡಿ, ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ತಾಲೂಕು ಬಿಜೆಪಿ ಅಧ್ಯಕ್ಷ ರಂಜನ್‌ ಗೌಡ, ಎಂಡೋ ವಿರೋಧಿ ಹೋರಾಟಗಾರ ಶ್ರೀಧರ ಗೌಡ ಕೆಂಗುಡೇಲು, ಪುರಂದರ ಗೌಡ ಕಡಿರ, ಹೋರಾಟ ಸಮಿತಿಯ ಬಾಲಕೃಷ್ಣ ಗೌಡ ಬಳಕ್ಕ ಉಪಸ್ಥಿತರಿದ್ದರು. ಪ್ರತಿಭಟನ ಸಭೆಯಲ್ಲಿ ಉದ್ಯಮಿ ರಮಾನಂದ ಸಾಲಿಯಾನ್‌, ಇಚಿಲಂಪಾಡಿ ನೀತಿ ಟ್ರಸ್ಟ್‌ ರಾಜ್ಯಾಧ್ಯಕ್ಷ ಜಯನ್‌ ಟಿ., ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ವಿ.ಜೆ. ಸೆಬಾಸ್ಟಿಯನ್‌, ಪುತ್ತೂರು ತಾಲೂಕು ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ನವೀನ್‌ ಕುಲಾಲ್‌, ಪ್ರಜ್ವಲ್‌, ರಾಜ್‌ ಪ್ರಸಾದ್‌ ಪೋಳ್ನಾಯ ಮೊದಲಾದವರು ಭಾಗವಹಿಸಿದರು. ನವೀನ್‌ ನೆರಿಯ ಸ್ವಾಗತಿಸಿ ನಿರೂಪಿಸಿದರು. ಶ್ರೀಧರ ಗೌಡ ಕೆಂಗುಡೇಲು ವಂದಿಸಿದರು.

ಸಂತ್ರಸ್ತರಿಗೆ ಭರವಸೆ
ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್‌ ಅವರು ಪ್ರತಿಭಟನ ಸ್ಥಳಕ್ಕೆ ಆಗಮಿಸಿ ಮಾತನಾಡಿ, ಹೋರಾಟಗಾರರು ಈ ಹೋರಾಟದ ಪೂರ್ವಭಾವಿಯಾಗಿ ನೀಡಿದ 20 ಬೇಡಿಕೆಗಳಲ್ಲಿ ಬಹುತೇಕ ಬೇಡಿಕೆಗಳನ್ನು ಜಿಲ್ಲಾಡಳಿತದ ವ್ಯಾಪ್ತಿಯಲ್ಲಿ ಪರಿಹರಿಸಬಹುದಾಗಿದೆ ಎಂದು ತಿಳಿಸಿ ಅವುಗಳ ಪಟ್ಟಿಯನ್ನು  ಪ್ರತಿಭಟನಕಾರರಿಗೆ ನೀಡಿದರು.

ಜೂ. 15: ಅಕಾರಿಗಳ ಸಭೆ
ಜೂ. 15ರಂದು ಕೊಕ್ಕಡದಲ್ಲಿ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಕಾರಿಗಳನ್ನು ಕರೆದು ಜಿಲ್ಲಾಕಾರಿ ಸಭೆ ನಡೆಸಲಿದ್ದು, ಜಿಲ್ಲೆಯ ಎಂಡೋ ಸಂತ್ರಸ್ತರ ಗುರುತು ಚೀಟಿ ಮತ್ತು ಇನ್ನಿತರ ಎಲ್ಲ ಸಮಸ್ಯೆಗಳನ್ನು ಮುಂಚಿತವಾಗಿ ಕಂದಾಯ ಇಲಾಖೆಗೆ ತಿಳಿಯಪಡಿಸಿದಲ್ಲಿ ಅಂದಿನ ಸಭೆಯಲ್ಲೇ ಇತ್ಯರ್ಥ ಮಾಡಲಾಗುವುದು ಮತ್ತು ಹೊಸದಾಗಿ ನೀಡಿದ ಸಮಸ್ಯೆ ದಾಖಲಿಸಿ ಪರಿಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.