ನೆಹರೂ ಮೈದಾನದ ಧ್ವಜ ಸ್ತಂಭ ಕಟ್ಟೆಗೆ ಕಾಯಕಲ್ಪ!


Team Udayavani, Aug 3, 2017, 10:32 PM IST

India-Flag-650.jpg

ಮಹಾನಗರ: ಹಲವು ದಶಕಗಳಿಂದ ನೆಹರೂ ಮೈದಾನದಲ್ಲಿದ್ದ ಧ್ವಜ ಸ್ತಂಭ ಕಟ್ಟೆಗೆ 70ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕಾಯಕಲ್ಪ ನೀಡಲು ಮಹಾನಗರ ಪಾಲಿಕೆ ಮುಂದಾಗಿದೆ. ಸರಕಾರದ ವತಿಯಿಂದ ಪ್ರತಿವರ್ಷ ನಡೆಯುವ ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಈ ಧ್ವಜ ಸ್ತಂಭದಲ್ಲೇ ನಡೆಯುತ್ತಿತ್ತು. ಆದರೆ ಧ್ವಜ ಸ್ತಂಭದ ಕಟ್ಟೆಗಳಲ್ಲಿ ಬಿರುಕು ಉಂಟಾಗಿತ್ತು. ಸರಿ ಸುಮಾರು 40 ವರ್ಷಗಳ ಹಳೆಯ ಶಿಥಿಲಾವಸ್ಥೆಯಲ್ಲಿದ್ದ ಕಟ್ಟೆಗೆ ಹಲವು ಬಾರಿ ಬಣ್ಣ ಬಳಿಯಲಾಗಿತ್ತು. ಜತೆಗೆ, ಒಡೆದ ಭಾಗಗಳಿಗೆ ಸಿಮೆಂಟ್‌ ಹಾಕಿ ದುರಸ್ತಿ ಮಾಡಲಾಗಿತ್ತು. ಈಗ ಮಹಾನಗರ ಪಾಲಿಕೆಯು ಧ್ವಜ ಸ್ತಂಭದ ಕಟ್ಟೆಯನ್ನು ಒಡೆದು ನೂತನ ಕಟ್ಟೆ ನಿರ್ಮಿಸುತ್ತಿದೆ. ಧ್ವಜ ಸ್ತಂಭದ ಸುತ್ತ ಲಿನ 18 ಅಡಿ ಸುತ್ತಳತೆಯಲ್ಲಿ ಕೆಂಪು ಕಲ್ಲಿನಲ್ಲಿದ್ದ ಕಟ್ಟೆಯನ್ನು ಒಡೆದು ಕಪ್ಪು ಕಲ್ಲಿನಲ್ಲಿ ಒಂದು ಅಡಿ ಹೆಚ್ಚುವರಿಯಾಗಿ ಕಟ್ಟಲಾಗುತ್ತಿದೆ. ಬುಧವಾರದಿಂದ ಕಾಮಗಾರಿ ಪ್ರಾರಂಭವಾಗಿದ್ದು, ವಾರದೊಳಗೆ ಪೂರ್ಣಗೊಳ್ಳಲಿದೆ.

ಆಕರ್ಷಕ ಧ್ವಜ ಸ್ತಂಭದ ಕಟ್ಟೆ
ಪ್ರಸ್ತುತ ಧ್ವಜ ಸ್ತಂಭದ ಸುತ್ತಲಿದ್ದ ಕೆಂಪು ಕಲ್ಲಿನ ಕಟ್ಟೆ ಮತ್ತಷ್ಟು ಆಕರ್ಷಕವಾಗಿ ಕಾಣಿಸಿಕೊಳ್ಳಲಿದೆ. ಕಟ್ಟೆಯ ನಾಲ್ಕು ಬದಿಯಲ್ಲೂ ಸುಂದರ ವಿನ್ಯಾಸವಿರಲಿದೆ. ಕಟ್ಟೆಯ ನಾಲ್ಕು ಬದಿಗೂ ಸಣ್ಣದಾಗಿ ರೇಲಿಂಗ್‌ ಅಳವಡಿಸುತ್ತಿದ್ದು, ಇದು ಕಟ್ಟೆಯ ಅಂದವನ್ನು ಇನ್ನೂ ಹೆಚ್ಚಿಸಲಿದೆ. ಸುಂದರ ಶಿಲ್ಪಗಳಿಗೆ ಹೆಸರುವಾಸಿಯಾದ ಕಾರ್ಕಳದಿಂದ ಧ್ವಜಸ್ತಂಭದ ಸುತ್ತಲಿನ ಕಟ್ಟೆಗಾಗಿ ಕಲ್ಲುಗಳು ಬಂದಿವೆ.

ಆರು ತಿಂಗಳೊಳಗೆ ಧ್ವಜ ಸ್ತಂಭ ಬದಲಾವಣೆ
ಸ್ವಾತಂತ್ರೋತ್ಸವದ ಬಳಿಕ ಸ್ತಂಭದ ಲಾಂಛನವನ್ನು ಕಲ್ಲುಗಳಿಂದ ರೂಪಿಸಲಾಗುತ್ತದೆ. ಈ ಕಾಮಗಾರಿಗೆ ಮೂರು ತಿಂಗಳು ತಗಲುವುದರಿಂದ ಸ್ವಾತಂತ್ರ್ಯೋತ್ಸವಕ್ಕೆ ಧಕ್ಕೆಯಾಗದಂತೆ ಕೇವಲ ಧ್ವಜ ಸ್ತಂಭದ ಕಟ್ಟೆಯನ್ನು ಬದಲಾಯಿಸಲಾಗುತ್ತಿದೆ.

ಬದಲಾಗಲಿದೆ ಪ್ರವೇಶ ದ್ವಾರ
ಈ ಎರಡೂ ಕಾಮಗಾರಿಗಳ ಬಳಿಕ ನೆಹರೂ ಮೈದಾನದ ಪ್ರವೇಶದ್ವಾರದ ಕಾಮಗಾರಿ ಆರಂಭವಾಗಲಿದೆ. ಈ ಹಿಂದೆ ಇದ್ದ ಎಲ್ಲಾ ಪ್ರವೇಶ ದ್ವಾರಗಳಿಂಗಿಂತಲೂ ಇದು ಸುಂದರವಾಗಿರಲಿದೆ. ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ, ಟೆಂಡರ್‌ ಪ್ರಕ್ರಿಯೆ ನಡೆಯಲಿದ್ದು, ಹೆಚ್ಚಿನ ಕಾಲಾವಕಾಶಬೇಕು ಎಂದು ಮೇಯರ್‌ ಉದಯವಾಣಿಗೆ ತಿಳಿಸಿದ್ದಾರೆ. ಬುಧವಾರ ಸಂಜೆ ಆರಂಭವಾದ ಕಾಮಗಾರಿಯನ್ನು ಮೇಯರ್‌ ಕವಿತಾ ಸನಿಲ್‌, ಮಹಾನಗರ ಪಾಲಿಕೆ ಮುಖ್ಯ ಸಚೇತಕ ಶಶಿಧರ್‌ ಹೆಗ್ಡೆ,ಕಾರ್ಪೋರೇಟರ್‌ ರವೂಫ್‌ ಭೇಟಿ ನೀಡಿ ಪರೀಶೀಲಿಸಿದರು.

ಧ್ವಜ ಸ್ತಂಭ ನವೀಕರಣ
‘ಪ್ರಸ್ತುತ ಇರುವ ಧ್ವಜಸ್ತಂಭ ಹಲವು ದಶಕಗಳ ಹಿಂದಿನದು. ಇದನ್ನು ಸುಂದರವಾಗಿ ನಿರ್ಮಿಸಬೇಕು ಎಂಬುದು ನನ್ನ ಬಹಳ ಸಮಯದ ಕನಸಾಗಿತ್ತು. ಆದರೆ ಅದಕ್ಕೆ ಕಾಲಾವಕಾಶ ದೊರೆತಿರಲಿಲ್ಲ. ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ಧ್ವಜಸ್ತಂಭದ ಕಟ್ಟೆಯನ್ನು ಮಾತ್ರ ಬದಲಾಯಿಸಲಾಗುತ್ತದೆ. ಬಳಿಕ ಧ್ವಜ ಸ್ತಂಭವನ್ನು ಸುಂದರೀಕರಿಸಲಾಗುತ್ತದೆ.
– ಕವಿತಾ ಸನಿಲ್‌, ಮೇಯರ್‌

ಹಲವು ಯೋಜನೆಗಳು
‘ಸ್ಮಾರ್ಟ್‌ ಸಿಟಿಯಾಗಲಿರುವ ಮಂಗಳೂರು ನಗರ‌ವನ್ನು ಸುಂದರವಾಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಮಾಡಲು ಪಾಲಿಕೆ ಮುಂದಾಗಿದೆ. ನಗರದ  ಕೆಲವು ಸರ್ಕಲ್‌, ಪಾರ್ಕ್‌ಗಳ ಕಾಮಗಾರಿ ಈಗಾಗಲೇ ಆಗಿದೆ. ನೆಹರೂ ಮೈದಾನದ ಪ್ರವೇಶ ದ್ವಾರದ ಕಾಮಗಾರಿಯೂ ಶೀಘ್ರವೇ ಆರಂಭವಾಗಲಿದೆ.
– ಶಶಿಧರ್‌ ಹೆಗ್ಡೆ, ಮುಖ್ಯ ಸಚೇತಕರು, ಮಹಾನಗರ ಪಾಲಿಕೆ

– ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.