ನೆಹರೂ ಮೈದಾನದ ಧ್ವಜ ಸ್ತಂಭ ಕಟ್ಟೆಗೆ ಕಾಯಕಲ್ಪ!


Team Udayavani, Aug 3, 2017, 10:32 PM IST

India-Flag-650.jpg

ಮಹಾನಗರ: ಹಲವು ದಶಕಗಳಿಂದ ನೆಹರೂ ಮೈದಾನದಲ್ಲಿದ್ದ ಧ್ವಜ ಸ್ತಂಭ ಕಟ್ಟೆಗೆ 70ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕಾಯಕಲ್ಪ ನೀಡಲು ಮಹಾನಗರ ಪಾಲಿಕೆ ಮುಂದಾಗಿದೆ. ಸರಕಾರದ ವತಿಯಿಂದ ಪ್ರತಿವರ್ಷ ನಡೆಯುವ ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಈ ಧ್ವಜ ಸ್ತಂಭದಲ್ಲೇ ನಡೆಯುತ್ತಿತ್ತು. ಆದರೆ ಧ್ವಜ ಸ್ತಂಭದ ಕಟ್ಟೆಗಳಲ್ಲಿ ಬಿರುಕು ಉಂಟಾಗಿತ್ತು. ಸರಿ ಸುಮಾರು 40 ವರ್ಷಗಳ ಹಳೆಯ ಶಿಥಿಲಾವಸ್ಥೆಯಲ್ಲಿದ್ದ ಕಟ್ಟೆಗೆ ಹಲವು ಬಾರಿ ಬಣ್ಣ ಬಳಿಯಲಾಗಿತ್ತು. ಜತೆಗೆ, ಒಡೆದ ಭಾಗಗಳಿಗೆ ಸಿಮೆಂಟ್‌ ಹಾಕಿ ದುರಸ್ತಿ ಮಾಡಲಾಗಿತ್ತು. ಈಗ ಮಹಾನಗರ ಪಾಲಿಕೆಯು ಧ್ವಜ ಸ್ತಂಭದ ಕಟ್ಟೆಯನ್ನು ಒಡೆದು ನೂತನ ಕಟ್ಟೆ ನಿರ್ಮಿಸುತ್ತಿದೆ. ಧ್ವಜ ಸ್ತಂಭದ ಸುತ್ತ ಲಿನ 18 ಅಡಿ ಸುತ್ತಳತೆಯಲ್ಲಿ ಕೆಂಪು ಕಲ್ಲಿನಲ್ಲಿದ್ದ ಕಟ್ಟೆಯನ್ನು ಒಡೆದು ಕಪ್ಪು ಕಲ್ಲಿನಲ್ಲಿ ಒಂದು ಅಡಿ ಹೆಚ್ಚುವರಿಯಾಗಿ ಕಟ್ಟಲಾಗುತ್ತಿದೆ. ಬುಧವಾರದಿಂದ ಕಾಮಗಾರಿ ಪ್ರಾರಂಭವಾಗಿದ್ದು, ವಾರದೊಳಗೆ ಪೂರ್ಣಗೊಳ್ಳಲಿದೆ.

ಆಕರ್ಷಕ ಧ್ವಜ ಸ್ತಂಭದ ಕಟ್ಟೆ
ಪ್ರಸ್ತುತ ಧ್ವಜ ಸ್ತಂಭದ ಸುತ್ತಲಿದ್ದ ಕೆಂಪು ಕಲ್ಲಿನ ಕಟ್ಟೆ ಮತ್ತಷ್ಟು ಆಕರ್ಷಕವಾಗಿ ಕಾಣಿಸಿಕೊಳ್ಳಲಿದೆ. ಕಟ್ಟೆಯ ನಾಲ್ಕು ಬದಿಯಲ್ಲೂ ಸುಂದರ ವಿನ್ಯಾಸವಿರಲಿದೆ. ಕಟ್ಟೆಯ ನಾಲ್ಕು ಬದಿಗೂ ಸಣ್ಣದಾಗಿ ರೇಲಿಂಗ್‌ ಅಳವಡಿಸುತ್ತಿದ್ದು, ಇದು ಕಟ್ಟೆಯ ಅಂದವನ್ನು ಇನ್ನೂ ಹೆಚ್ಚಿಸಲಿದೆ. ಸುಂದರ ಶಿಲ್ಪಗಳಿಗೆ ಹೆಸರುವಾಸಿಯಾದ ಕಾರ್ಕಳದಿಂದ ಧ್ವಜಸ್ತಂಭದ ಸುತ್ತಲಿನ ಕಟ್ಟೆಗಾಗಿ ಕಲ್ಲುಗಳು ಬಂದಿವೆ.

ಆರು ತಿಂಗಳೊಳಗೆ ಧ್ವಜ ಸ್ತಂಭ ಬದಲಾವಣೆ
ಸ್ವಾತಂತ್ರೋತ್ಸವದ ಬಳಿಕ ಸ್ತಂಭದ ಲಾಂಛನವನ್ನು ಕಲ್ಲುಗಳಿಂದ ರೂಪಿಸಲಾಗುತ್ತದೆ. ಈ ಕಾಮಗಾರಿಗೆ ಮೂರು ತಿಂಗಳು ತಗಲುವುದರಿಂದ ಸ್ವಾತಂತ್ರ್ಯೋತ್ಸವಕ್ಕೆ ಧಕ್ಕೆಯಾಗದಂತೆ ಕೇವಲ ಧ್ವಜ ಸ್ತಂಭದ ಕಟ್ಟೆಯನ್ನು ಬದಲಾಯಿಸಲಾಗುತ್ತಿದೆ.

ಬದಲಾಗಲಿದೆ ಪ್ರವೇಶ ದ್ವಾರ
ಈ ಎರಡೂ ಕಾಮಗಾರಿಗಳ ಬಳಿಕ ನೆಹರೂ ಮೈದಾನದ ಪ್ರವೇಶದ್ವಾರದ ಕಾಮಗಾರಿ ಆರಂಭವಾಗಲಿದೆ. ಈ ಹಿಂದೆ ಇದ್ದ ಎಲ್ಲಾ ಪ್ರವೇಶ ದ್ವಾರಗಳಿಂಗಿಂತಲೂ ಇದು ಸುಂದರವಾಗಿರಲಿದೆ. ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ, ಟೆಂಡರ್‌ ಪ್ರಕ್ರಿಯೆ ನಡೆಯಲಿದ್ದು, ಹೆಚ್ಚಿನ ಕಾಲಾವಕಾಶಬೇಕು ಎಂದು ಮೇಯರ್‌ ಉದಯವಾಣಿಗೆ ತಿಳಿಸಿದ್ದಾರೆ. ಬುಧವಾರ ಸಂಜೆ ಆರಂಭವಾದ ಕಾಮಗಾರಿಯನ್ನು ಮೇಯರ್‌ ಕವಿತಾ ಸನಿಲ್‌, ಮಹಾನಗರ ಪಾಲಿಕೆ ಮುಖ್ಯ ಸಚೇತಕ ಶಶಿಧರ್‌ ಹೆಗ್ಡೆ,ಕಾರ್ಪೋರೇಟರ್‌ ರವೂಫ್‌ ಭೇಟಿ ನೀಡಿ ಪರೀಶೀಲಿಸಿದರು.

ಧ್ವಜ ಸ್ತಂಭ ನವೀಕರಣ
‘ಪ್ರಸ್ತುತ ಇರುವ ಧ್ವಜಸ್ತಂಭ ಹಲವು ದಶಕಗಳ ಹಿಂದಿನದು. ಇದನ್ನು ಸುಂದರವಾಗಿ ನಿರ್ಮಿಸಬೇಕು ಎಂಬುದು ನನ್ನ ಬಹಳ ಸಮಯದ ಕನಸಾಗಿತ್ತು. ಆದರೆ ಅದಕ್ಕೆ ಕಾಲಾವಕಾಶ ದೊರೆತಿರಲಿಲ್ಲ. ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ಧ್ವಜಸ್ತಂಭದ ಕಟ್ಟೆಯನ್ನು ಮಾತ್ರ ಬದಲಾಯಿಸಲಾಗುತ್ತದೆ. ಬಳಿಕ ಧ್ವಜ ಸ್ತಂಭವನ್ನು ಸುಂದರೀಕರಿಸಲಾಗುತ್ತದೆ.
– ಕವಿತಾ ಸನಿಲ್‌, ಮೇಯರ್‌

ಹಲವು ಯೋಜನೆಗಳು
‘ಸ್ಮಾರ್ಟ್‌ ಸಿಟಿಯಾಗಲಿರುವ ಮಂಗಳೂರು ನಗರ‌ವನ್ನು ಸುಂದರವಾಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಮಾಡಲು ಪಾಲಿಕೆ ಮುಂದಾಗಿದೆ. ನಗರದ  ಕೆಲವು ಸರ್ಕಲ್‌, ಪಾರ್ಕ್‌ಗಳ ಕಾಮಗಾರಿ ಈಗಾಗಲೇ ಆಗಿದೆ. ನೆಹರೂ ಮೈದಾನದ ಪ್ರವೇಶ ದ್ವಾರದ ಕಾಮಗಾರಿಯೂ ಶೀಘ್ರವೇ ಆರಂಭವಾಗಲಿದೆ.
– ಶಶಿಧರ್‌ ಹೆಗ್ಡೆ, ಮುಖ್ಯ ಸಚೇತಕರು, ಮಹಾನಗರ ಪಾಲಿಕೆ

– ಪ್ರಜ್ಞಾ ಶೆಟ್ಟಿ

Ad

ಟಾಪ್ ನ್ಯೂಸ್

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

“ಶಾಂತಿ’ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌ ಟೀಕೆ

Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌

Sharan–high-court

ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Ukraine: 728 ಡ್ರೋನ್‌ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು

Ukraine: 728 ಡ್ರೋನ್‌ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು

Vitla; ಬಾಲಕನಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ವಶಕ್ಕೆ

Vittla; ಬಾಲಕನಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

Mangaluru: ಮಾದಕ ವಸ್ತು ಸಾಗಾಟ; ಮೂವರ ಸೆರೆ

Mangaluru: ಮಾದಕ ವಸ್ತು ಸಾಗಾಟ; ಮೂವರ ಸೆರೆ

21

Mulki: ದರೋಡೆಗೆ ಸಂಚು: ಮರೆಸಿಕೊಂಡಿದ್ದ ಆರೋಪಿ ಬಂಧನ

courts

Mangaluru: ಹೊಡೆದಾಟ ಆರೋಪ; ಆರೋಪಿಗೆ ನಿರೀಕ್ಷಣ ಜಾಮೀನು ಮಂಜೂರು

8

Mangaluru: ನಗರದಲ್ಲಿ ಆಟೋ ನಿಲ್ದಾಣಗಳ ಕೊರತೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

“ಶಾಂತಿ’ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌ ಟೀಕೆ

Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌

Sharan–high-court

ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.