ಇಂದು ಮಸ್ಟರಿಂಗ್‌; ಸುಸೂತ್ರ ಚುನಾವಣೆಗೆ ಆಯೋಗ ಸಜ್ಜು

ಲೋಕಸಭಾ ಚುನಾವಣೆ: ಉಭಯ ತಾಲೂಕುಗಳಲ್ಲಿ ಸಿದ್ಧತೆ

Team Udayavani, Apr 17, 2019, 6:00 AM IST

r-1

ಮಸ್ಟರಿಂಗ್‌ ಕಾರ್ಯ ನಡೆಯಲಿರುವ ಉಜಿರೆಯ ಎಸ್‌ಡಿಎಂ ಪ.ಪೂ.ಕಾಲೇಜು.

ಬೆಳ್ತಂಗಡಿ: ದ.ಕ. ಲೋಕಸಭಾ ಚುನಾವಣೆ ಎ. 18 ರಂದು ನಡೆಯಲಿದ್ದು, ಈಗಾಗಲೇ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಚುನಾವಣೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣ ಆಯೋಗ ಪೂರ್ಣ ರೀತಿಯಲ್ಲಿ ಸಜ್ಜಾಗಿದ್ದು, ಬೆಳ್ತಂಗಡಿ ಕ್ಷೇತ್ರಕ್ಕೆ ಸಂಬಂಧಿಸಿ, ಎ. 17ರಂದು ಉಜಿರೆ ಎಸ್‌ಡಿಎಂ ಪ.ಪೂ. ಕಾಲೇಜಿನಲ್ಲಿ ಮಸ್ಟರಿಂಗ್‌ ಕಾರ್ಯ ನಡೆಯಲಿದೆ.

ಚುನಾವಣ ಕರ್ತವ್ಯಕ್ಕೆ ನಿಯೋ ಜನೆಗೊಂಡಿರುವ ಎಲ್ಲ ಸಿಬಂದಿ ಬೆಳಗ್ಗೆ 8ಕ್ಕೆ ಮಸ್ಟರಿಂಗ್‌ ಕಾರ್ಯದಲ್ಲಿ ಭಾಗವಹಿಸಲಿದ್ದು, ಬಳಿಕ ಬೆಳ್ತಂಗಡಿ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ (ಎಆರ್‌ಒ) ಅವರ ಉಪಸ್ಥಿತಿಯಲ್ಲಿ ಪ್ರಸ್ತುತ ಮತಯಂತ್ರಗಳನ್ನು ಇರಿಸಲಾದ ಸ್ಟ್ರಾಂಗ್‌ ರೂಮನ್ನು ತೆರೆಯಲಾಗುತ್ತದೆ.

ಬೆಳ್ತಂಗಡಿ ಕ್ಷೇತ್ರದ ಎಲ್ಲ 241 ಬೂತ್‌ಗಳ ಸಿಬಂದಿಗೂ ಮತಯಂತ್ರಗಳನ್ನು ವಿತರಣೆ ಮಾಡಲಾಗುತ್ತದೆ. ಬಳಿಕ ನಿಯೋಜಿತ ವಾಹನಗಳ ಮೂಲಕ ಮತಗಟ್ಟೆಗಳಿಗೆ ತೆರಳಿ ಎ. 17ರ ರಾತ್ರಿ ಎಲ್ಲ ಸಿಬಂದಿ ಮತಗಟ್ಟೆಯಲ್ಲಿ ವಾಸ್ತವ್ಯ ಇರಬೇಕಾಗುತ್ತದೆ. ಎ. 18ರಂದು ಬೆಳಗ್ಗೆ 6ಕ್ಕೆ ಅಣಕು ಮತದಾನ ನಡೆಸಿದ ಬಳಿಕ 7ರಿಂದ ಸಂಜೆ 6ರ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಎ. 18ರಂದು ಚುನಾವಣೆ ಮುಗಿದ ಬಳಿಕ ಸಂಜೆ ಡಿಮಸ್ಟರಿಂಗ್‌ ಕಾರ್ಯ ನಡೆದು, ಎಆರ್‌ಒ ಪರಿಶೀಲನೆ ನಡೆಸಿದ ಬಳಿಕ ಮತಯಂತ್ರಗಳನ್ನು ಮಂಗಳೂರು ಸುರತ್ಕಲ್‌ನ ಎನ್‌ಐಟಿಕೆಯ ಸ್ಟ್ರಾಂಗ್‌ಗೆ ಸಾಗಿಸಲಾಗುತ್ತದೆ. ಚುನಾವಣೆ ಘೋಷಣೆಯಾದ ಬಳಿಕ ಇಲ್ಲಿಯವರೆಗೆ ಬೆಳ್ತಂಗಡಿ ಕ್ಷೇತ್ರದಲ್ಲಿ ರಾಜಕೀಯ ಮುಖಂಡರು ಶಾಂತ ರೀತಿಯಲ್ಲಿ ಪ್ರಚಾರ ಕಾರ್ಯವನ್ನು ನಡೆಸಿದ್ದು, ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಈವರೆಗೆ ಕೇವಲ ಒಂದು ಪ್ರಕರಣ ಬಿಟ್ಟರೆ ಉಳಿದಂತೆ ಯಾವುದೇ ಘಟನೆಗಳು ನಡೆದಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.

ಕೇಂದ್ರದಲ್ಲಿ 5 ಸಿಬಂದಿ
ಪ್ರತಿ ಮತಗಟ್ಟೆಯಲ್ಲಿ ಪಿಆರ್‌ಒ, ಎಪಿಆರ್‌ಒ, 2ನೇ ಪೋಲಿಂಗ್‌ ಅಧಿಕಾರಿ, 3ನೇ ಪೋಲಿಂಗ್‌ ಅಧಿಕಾರಿ, ಗ್ರೂಪ್‌ ಡಿ ಸಿಬಂದಿ ಸಹಿತ ಒಟ್ಟು 5 ಮಂದಿ ಮತಗಟ್ಟೆಯ ಒಳಗಿರುತ್ತಾರೆ. ಜತೆಗೆ ಹೊರಗಡೆ ಮಾಹಿತಿ ಕೇಂದ್ರದಲ್ಲಿ ಒಬ್ಬರು ಬಿಎಲ್‌ಓ, ಅಗತ್ಯಕ್ಕೆ ತಕ್ಕಂತೆ ಪೊಲೀಸ್‌ ಸಿಬಂದಿಯನ್ನು ನೇಮಿಸಲಾಗುತ್ತದೆ ಎಂದು ಎಆರ್‌ಒ ತಿಳಿಸಿದ್ದಾರೆ.

ಶೇ. 30 ಹೆಚ್ಚುವರಿ ಯಂತ್ರ
ಬೆಳ್ತಂಗಡಿ ಕ್ಷೇತ್ರಕ್ಕೆ ಪ್ರತಿ ಬೂತ್‌ಗಳಿಗೂ ಒಂದರಂತೆ ಒಟ್ಟು 241 ಯಂತ್ರಗಳ ಆವಶ್ಯಕತೆ ಇದ್ದು, ಅದರ ಶೇ. 30 ಹೆಚ್ಚುವರಿ ಯಂತ್ರಗಳನ್ನು ಆಯೋಗ ನೀಡಿದೆ. ಅಂದರೆ ಯಾವುದಾದರೂ ಬೂತ್‌ಗಳಲ್ಲಿ ಯಂತ್ರ ಕೈಕೊಟ್ಟರೆ ಇದನ್ನು ಬಳಸಲಾಗುತ್ತದೆ. ಮತದಾನ ಪ್ರಕ್ರಿಯೆಗಾಗಿ ಬ್ಯಾಲೆಟ್‌ ಯೂನಿಟ್‌, ಕಂಟ್ರೋಲ್‌ ಯೂನಿಟ್‌ ಹಾಗೂ ವಿವಿ ಪ್ಯಾಟ್‌ ಇರುತ್ತದೆ. ಯಂತ್ರಗಳಲ್ಲಿ ತಾಂತ್ರಿಕ ತೊಂದರೆ ಕಂಡುಬಂದಲ್ಲಿ ನೋಡಿಕೊಳ್ಳುವುದಕ್ಕೆ ಇಬ್ಬರು ಎಂಜಿನಿಯರ್‌ಗಳು ಇರುತ್ತಾರೆ.

ಎಲ್ಲ ಸಿದ್ಧತೆ ಪೂರ್ಣ
ಈಗಾಗಲೇ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಹೊರಗಿನವರು ಪ್ರಚಾರ ಬಂದಿದ್ದರೆ ಅವರು ಕ್ಷೇತ್ರ ಬಿಡಬೇಕಾಗುತ್ತದೆ. 144 ಸೆಕ್ಷನ್‌ ಜಾರಿಯಲ್ಲಿರುವುದರಿಂದ 5 ಮಂದಿಗಿಂತ ಹೆಚ್ಚು ಜನ ಒಂದೆಡೆ ಸೇರಲು ಅವಕಾಶವಿಲ್ಲ. ಕ್ಷೇತ್ರದ ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ.
ಎಚ್‌.ಆರ್‌.ನಾಯಕ್‌, ಸಹಾಯಕ ಚುನಾವಣಾಧಿಕಾರಿ, ಬೆಳ್ತಂಗಡಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.