ಮತ ಚಲಾವಣೆಗೆ ಸಿದ್ಧರಾಗಿ

ಲೋಕಸಭಾ ಚುನಾವಣೆ; ಮತದಾನಕ್ಕೆ ಕ್ಷಣಗಣನೆ

Team Udayavani, Apr 17, 2019, 6:00 AM IST

c-14

ಮಹಾನಗರ: ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಎ. 18ರಂದು ಬೆಳಗ್ಗೆ 7 ಗಂಟೆಗೆ ಜಿಲ್ಲೆಯ 1,861 ಮತಗಟ್ಟೆಗಳಲ್ಲಿ ಮತದಾನ ಆರಂಭಗೊಳ್ಳಲಿದೆ. ಮತದಾರ ಯಾವುದೇ ಗೊಂದಲಗಳಿಲ್ಲದೆ ವಿದ್ಯುನ್ಮಾನ ಮತದಾನ ಯಂತ್ರ (ಇವಿಎಂ) ಮತ್ತು ವಿವಿಪ್ಯಾಟ್‌ ಬಳಸಿ ನಿರಾಳವಾಗಿ ಯಾವ ರೀತಿ ಮತ ಚಲಾಯಿಸಬಹುದು, ಮತಗಟ್ಟೆಗಳಲ್ಲಿ ಯಾವುದೆಲ್ಲ ಸೌಲಭ್ಯಗಳಿರುತ್ತವೆ, ಎಪಿಕ್‌ ಕಾರ್ಡ್‌ ಇಲ್ಲದಿದ್ದಲ್ಲಿ ಯಾವುದನ್ನು ಗುರುತು ದಾಖಲೆಯಾಗಿ ಬಳಸಬಹುದು ಎಂಬುದರ ಬಗ್ಗೆ ಚುನಾವಣ ಆಯೋಗ ಆವಶ್ಯಕ ಮಾಹಿತಿ ನೀಡಿದೆ.

ಮತದಾರರ ಫೋಟೋ ಗುರುತಿನ ಚೀಟಿ ಮತ್ತು ಮತದಾನದ ಚೀಟಿಯನ್ನು ಸಿದ್ಧವಾಗಿಟ್ಟುಕೊಂಡು ಸರತಿ ಸಾಲಿನಲ್ಲಿ ನಿಂತುಕೊಳ್ಳಬೇಕು. ಮತಗಟ್ಟೆಯ ಒಂದನೇ ಅಧಿಕಾರಿ ಮತದಾರರ ಪಟ್ಟಿಯಲ್ಲಿ ಮತದಾರನ ಹೆಸರನ್ನು ಮತ್ತು ಗುರುತಿನ ಚೀಟಿಯನ್ನು ಪರಿಶೀಲಿಸುತ್ತಾರೆ. 2ನೇ ಮತಗಟ್ಟೆ ಅಧಿಕಾರಿ ನಿಗದಿತ ಬೆರಳಿಗೆ ಶಾಯಿಯ ಗುರುತು ಹಾಕುತ್ತಾರೆ, ಮತದಾನದ ಚೀಟಿ ನೀಡಿ ಸಹಿ ಪಡೆದುಕೊಳ್ಳುತ್ತಾರೆ. 3ನೇ ಮತಗಟ್ಟೆ ಅಧಿಕಾರಿ 3 ಮತದಾನದ ಚೀಟಿ ಪಡೆದು ಶಾಯಿ ಹಾಕಿರುವ ಬೆರಳನ್ನು ಪರಿಶೀಲಿಸುತ್ತಾರೆ.

ಮತ ಚಲಾವಣೆ
ಮತಗಟ್ಟೆಯ ಅಧ್ಯಕ್ಷಾಧಿಕಾರಿಯು ಮತದಾನದ ಸ್ಥಳಕ್ಕೆ ಹೋಗಿ ಎಂದು ಹೇಳಿದಾಗ ಅಲ್ಲಿಗೆ ತೆರಳಿ ಮತದಾನ ಮಾಡುವುದಕ್ಕೆ ಯಂತ್ರ ಸಿದ್ಧವಾಗಿರುವುದನ್ನು ಸೂಚಿಸುವ ಹಸುರು ದೀಪ ಉರಿಯುತ್ತಿದೆಯೇ ಎಂದು ನೋಡಬೇಕು. ಆಯ್ಕೆ ಮಾಡಿಕೊಂಡ ಅಭ್ಯರ್ಥಿಯ ಹೆಸರು- ಚಿಹ್ನೆಯ ಎದುರು ಇರುವ ಕೆಂಪು ದೀಪ ಉರಿಯುತ್ತದೆ. ಬ್ಯಾಲೆಟ್‌ ಯೂನಿಟ್‌ನಲ್ಲಿ ಮತದಾರ ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರು/ ಚಿಹ್ನೆಯ ಎದುರು ಇರುವ ನೀಲಿ ಗುಂಡಿಯನ್ನು ಒತ್ತಬೇಕು.

ಮತದಾನ ಕೇಂದ್ರದಲ್ಲಿರುವ ಸೌಲಭ್ಯಗಳು
ಅಂಗವಿಕಲರಿಗೆ ಅನುಕೂಲವಾಗುವಂತೆ ರ್‍ಯಾಂಪ್‌ ಸೌಲಭ್ಯ, ವೀಲ್‌ ಚೇರ್‌, ಸಾರಿಗೆ ಸೌಲಭ್ಯ ಮತ್ತು ಸಹಾಯಕ ಸಿಬಂದಿ, ಮಂದ ದೃಷ್ಟಿ ಹೊಂದಿರುವವರಿಗೆ ಭೂತಗಾಜಿನ ಸೌಲಭ್ಯ, ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮೊದಲ ಆದ್ಯತೆ ನೀಡಲಾಗುವುದು.

ಇವಿಎಂ ಯಂತ್ರಗಳಲ್ಲಿ ಬ್ರೈಲ್‌ ಲಿಪಿ ಅಳವಡಿಕೆ. ಮತ ಕೇಂದ್ರಗಳಲ್ಲಿ ಮತದಾರರ ಸಹಾಯ ಕೇಂದ್ರ, ಮತಗಟ್ಟೆಯಲ್ಲಿ ಕುಡಿಯುವ ನೀರು, ಪ್ರಾಥಮಿಕ ಚಿಕಿತ್ಸೆ, ಶೌಚಾಲಯ ಸೌಲಭ್ಯ ಮತದಾರರಿಗೆ ನೆರವಾಗಲು ಮಾರ್ಗಸೂಚಿಗಳ ಅಳವಡಿಕೆ, ಪುರುಷ ಮತ್ತು ಮಹಿಳಾ ಮತದಾರರಿಗೆ ಪ್ರತ್ಯೇಕ ಸಾಲು. ಪ್ರತಿ ಪುರುಷರು ಮತಗಟ್ಟೆ ಪ್ರವೇಶಿಸುವ ವೇಳೆಯಲ್ಲಿ ಇಬ್ಬರು ಮಹಿಳಾ ಮತದಾರರಿಗೆ ಪ್ರವೇಶಿಸಲು ಅನುವು, ಆಯ್ದ ಕಡೆಗಳಲ್ಲಿ ಸಂಪೂರ್ಣ ಮಹಿಳಾ ಅಧಿಕಾರಿ/ ಸಿಬಂದಿಯಿರುವ ಮತಗಟ್ಟೆಗಳ ಸ್ಥಾಪನೆ, ಮತ ಕೇಂದ್ರಗಳಲ್ಲಿ ದೃಷ್ಟಿ ವಿಶೇಷ ಚೇತನರಿಗೆ ಬ್ರೈಲ್‌ ಲಿಪಿಯಲ್ಲಿ ಮಾದರಿ ಬ್ಯಾಲೆಟ್‌ ಪ್ರದರ್ಶನ ಮುಂತಾದ ಸೌಲಭ್ಯಗಳಿರುತ್ತವೆ.

ಎಪಿಕ್‌ ಕಾರ್ಡ್‌ ಇಲ್ಲದಿದ್ದರೆ ಬಳಸಬಹುದಾದ ಗುರುತು ಚೀಟಿಗಳು
ಚುನಾವಣ ಆಯೋಗದ ಸೂಚನೆಯಂತೆ ಎಪಿಕ್‌ ಕಾರ್ಡ್‌ ಇಲ್ಲದಿದ್ದರೆ ಪಾಸ್‌ಪೋರ್ಟ್‌, ಡ್ರೈವಿಂಗ್‌ ಲೈಸೆನ್ಸ್‌ , ಕೇಂದ್ರ/ರಾಜ್ಯ ಸಾರ್ವಜನಿಕ ವಲಯದ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡಿರುವ ಭಾವಚಿತ್ರ ಇರುವ ಗುರುತಿನ ಚೀಟಿ, ಅಂಚೆ ಕಚೇರಿ, /ಬ್ಯಾಂಕ್‌ಗಳಲ್ಲಿ ತೆರೆದ ಉಳಿತಾಯ ಖಾತೆಯ ಕುರಿತು ನೀಡಿದ ಭಾವಚಿತ್ರವಿರುವ ಪಾಸ್‌ಪುಸ್ತಕ, ಪಾನ್‌ಕಾರ್ಡ್‌, ಆರ್‌ಜಿಐ, ಎನ್‌ಪಿಆರ್‌ ಬಾಬ್ತು ಸ್ಮಾರ್ಟ್‌ಕಾರ್ಡ್‌, ಎಂಎನ್‌ಆರ್‌ಇಜಿಎ ಜಾಬ್‌ ಕಾರ್ಡ್‌, ಕೇಂದ್ರ ಸರಕಾರದ ಕಾರ್ಮಿಕ ಇಲಾಖೆಯು ನೀಡಿರುವ ಆರೋಗ್ಯ ವಿಮೆಯ ಸ್ಮಾರ್ಟ್‌ಕಾರ್ಡ್‌, ಭಾವಚಿತ್ರ ಇರುವ ಪಿಂಚಣಿ ದಾಖಲೆಗಳು, ಸಂಸದರು /ಶಾಸಕರುಗಳಿಗೆ ನೀಡಲಾದ ಅಧಿಕೃತ ಕಾರ್ಡ್‌, ಆಧಾರ್‌ ಕಾರ್ಡ್‌ ಗಳಲ್ಲಿ ಯಾವುದಾದರೂ ಒಂದನ್ನು ಮತದಾನಕ್ಕೆ ಗುರುತು ದಾಖಲೆಯಾಗಿ ಬಳಸಬಹುದು.

ಮುದ್ರಿತ ಪ್ರತಿಯನ್ನು ನೋಡಿ
ಆಯ್ಕೆ ಮಾಡಿಕೊಂಡ ಅಭ್ಯರ್ಥಿಯ ಕ್ರಮಸಂಖ್ಯೆ, ಹೆಸರು ಮತ್ತು ಚಿಹ್ನೆಯನ್ನು ಒಳಗೊಂಡಿರುವ ಬ್ಯಾಲೆಟ್‌ ಚೀಟಿಯನ್ನು ವಿವಿಪ್ಯಾಟ್‌ ಮುದ್ರಣ ಯಂತ್ರವು ಮುದ್ರಿಸಿ ಕೊಡುತ್ತದೆ. ಬ್ಯಾಲೆಟ್‌ ಚೀಟಿಯು ಏಳು ಸೆಕೆಂಡ್‌ಗಳವರೆಗೆ ಕಾಣಿಸುತ್ತದೆ. ಅನಂತರ ಅದು ಹರಿದುಕೊಂಡು ಮುದ್ರಣ ಯಂತ್ರದ ಡಬ್ಬದೊಳಗೆ ಬೀಳುತ್ತದೆ. ಆಗ ಬೀಪ್‌ ಶಬ್ದ ಕೇಳಿಸುತ್ತದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.